ಹಿರಿಯಡಕದಲ್ಲಿರುವ ಪುತ್ತಿಗೆ ಮೂಲಮಠದಲ್ಲಿ ಸೋಮವಾರ ಶಿಷ್ಯಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಶ್ರೀಗಳು, ‘ಪುತ್ತಿಗೆ ಮಠಕ್ಕೆ ಶಿಷ್ಯಸ್ವೀಕಾರ ನಿರ್ಧಾರ ಹಲವರಲ್ಲಿ ಆಶ್ಚರ್ಯ, ಕುತೂಹಲ, ಸಂಶಯಗಳನ್ನು ಮೂಡಿಸಿದೆ. ಇದು ವೈಯಕ್ತಿಕ ನಿರ್ಧಾರವಲ್ಲ; ಭಗವಂತನ ಸಂಕಲ್ಪ. ಶಿಷ್ಯ ಸ್ವೀಕಾರ ಕಾರ್ಯಕ್ರಮ ತರಾತುರಿಯಲ್ಲಿ ನಡೆದಿದ್ದರೂ, 8 ತಿಂಗಳ ಹಿಂದಿನಿಂದಲೇ ತಯಾರಿ ನಡೆದಿತ್ತು’ ಎಂದರು.