<p><strong>ಕೋಟ(ಬ್ರಹ್ಮಾವರ):</strong> ನಮ್ಮ ಪೂರ್ವಜರು ಕಲಿಸಿಕೊಟ್ಟ ಸಂಸ್ಕಾರಯುತ ಶಿಕ್ಷಣವನ್ನು ನಾವು ಮರೆತಿದ್ದೇವೆ. ಆದರೆ, ಸೇವಾಸಂಗಮ ಶಿಶು ಮಂದಿರ ಶಿಕ್ಷಣ ಕೇಂದ್ರವು ಸಂಸ್ಕಾರಯುತ ಶಿಕ್ಷಣಕ್ಕೆ ವೇದಿಕೆ ಕಲ್ಪಿಸಿಕೊಟ್ಟಿದೆ ಎಂದು ಮುಂಬೈ ಒಎನ್ಜಿಸಿ ನಿವೃತ್ತ ಅಧಿಕಾರಿ ಬನ್ನಾಡಿ ನಾರಾಯಣ ಆಚಾರ್ ಹೇಳಿದರು.</p>.<p>ಕೋಟ ಅಮೃತೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಕೋಟದ ಸೇವಾಸಂಗಮ ಶಿಶು ಮಂದಿರದ 39ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಪೋಷಕರು ಮಕ್ಕಳಿಗೆ ನೈಜ ಕಲಿಕಾ ಶಿಕ್ಷಣ ನೀಡಲು ಆದ್ಯತೆ ನೀಡಬೇಕು. ಶಿಶುಮಂದಿರದಲ್ಲಿ ಸಿಗುವ ಶಿಕ್ಷಣ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಆಗಬೇಕು ಎಂದರು.</p>.<p>ಶಿಶುಮಂದಿರದಲ್ಲಿ ಕಲಿತ ಬಾಲಗೋಕುಲದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕೋಟ ಸೇವಾಸಂಗಮ ಶಿಶು ಮಂದಿರದ ಅಧ್ಯಕ್ಷ ಶ್ರೀಕಾಂತ ಶೆಣೈ ಅಧ್ಯಕ್ಷತೆ ವಹಿಸಿದ್ದರು.</p>.<p>ಕುಂದಾಪುರ ಸೇವಾಸಂಗಮ ಶಿಶುಮಂದಿರದ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ, ಕುಂದಾಪುರ ಟಿ.ಎನ್.ಪ್ರಭು ಲೆಕ್ಕಪರಿಶೋಧಕ ಸಂಸ್ಥೆಯ ಮುಖ್ಯಸ್ಥೆ ನರ್ಮದಾ ಪ್ರಭು, ಸೇವಾಸಂಗಮ ಶಿಶುಮಂದಿರ ಉಪಾಧ್ಯಕ್ಷೆ ಗೀತಾ ಎ ಕುಂದರ್ ಇದ್ದರು.</p>.<p>ಶಿಶುಮಂದಿರದ ವ್ಯವಸ್ಥಾಪಕಿ ಭಾಗ್ಯ ವಾದಿರಾಜ್ ಸ್ವಾಗತಿಸಿದರು. ಶಿಶುಮಂದಿರದ ಜತೆ ಕಾರ್ಯದರ್ಶಿ ಕಲಾವತಿ ಅಶೋಕ್ ನಿರೂಪಿಸಿದರು. ಕಾರ್ಯದರ್ಶಿ ಸುಷ್ಮಾ ದಯಾನಂದ ಹೊಳ್ಳ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಟ(ಬ್ರಹ್ಮಾವರ):</strong> ನಮ್ಮ ಪೂರ್ವಜರು ಕಲಿಸಿಕೊಟ್ಟ ಸಂಸ್ಕಾರಯುತ ಶಿಕ್ಷಣವನ್ನು ನಾವು ಮರೆತಿದ್ದೇವೆ. ಆದರೆ, ಸೇವಾಸಂಗಮ ಶಿಶು ಮಂದಿರ ಶಿಕ್ಷಣ ಕೇಂದ್ರವು ಸಂಸ್ಕಾರಯುತ ಶಿಕ್ಷಣಕ್ಕೆ ವೇದಿಕೆ ಕಲ್ಪಿಸಿಕೊಟ್ಟಿದೆ ಎಂದು ಮುಂಬೈ ಒಎನ್ಜಿಸಿ ನಿವೃತ್ತ ಅಧಿಕಾರಿ ಬನ್ನಾಡಿ ನಾರಾಯಣ ಆಚಾರ್ ಹೇಳಿದರು.</p>.<p>ಕೋಟ ಅಮೃತೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಕೋಟದ ಸೇವಾಸಂಗಮ ಶಿಶು ಮಂದಿರದ 39ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಪೋಷಕರು ಮಕ್ಕಳಿಗೆ ನೈಜ ಕಲಿಕಾ ಶಿಕ್ಷಣ ನೀಡಲು ಆದ್ಯತೆ ನೀಡಬೇಕು. ಶಿಶುಮಂದಿರದಲ್ಲಿ ಸಿಗುವ ಶಿಕ್ಷಣ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಆಗಬೇಕು ಎಂದರು.</p>.<p>ಶಿಶುಮಂದಿರದಲ್ಲಿ ಕಲಿತ ಬಾಲಗೋಕುಲದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕೋಟ ಸೇವಾಸಂಗಮ ಶಿಶು ಮಂದಿರದ ಅಧ್ಯಕ್ಷ ಶ್ರೀಕಾಂತ ಶೆಣೈ ಅಧ್ಯಕ್ಷತೆ ವಹಿಸಿದ್ದರು.</p>.<p>ಕುಂದಾಪುರ ಸೇವಾಸಂಗಮ ಶಿಶುಮಂದಿರದ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ, ಕುಂದಾಪುರ ಟಿ.ಎನ್.ಪ್ರಭು ಲೆಕ್ಕಪರಿಶೋಧಕ ಸಂಸ್ಥೆಯ ಮುಖ್ಯಸ್ಥೆ ನರ್ಮದಾ ಪ್ರಭು, ಸೇವಾಸಂಗಮ ಶಿಶುಮಂದಿರ ಉಪಾಧ್ಯಕ್ಷೆ ಗೀತಾ ಎ ಕುಂದರ್ ಇದ್ದರು.</p>.<p>ಶಿಶುಮಂದಿರದ ವ್ಯವಸ್ಥಾಪಕಿ ಭಾಗ್ಯ ವಾದಿರಾಜ್ ಸ್ವಾಗತಿಸಿದರು. ಶಿಶುಮಂದಿರದ ಜತೆ ಕಾರ್ಯದರ್ಶಿ ಕಲಾವತಿ ಅಶೋಕ್ ನಿರೂಪಿಸಿದರು. ಕಾರ್ಯದರ್ಶಿ ಸುಷ್ಮಾ ದಯಾನಂದ ಹೊಳ್ಳ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>