ಪಡುಕರೆಯಲ್ಲಿ ಬೀಚ್ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಚಿವರು,ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಜನಾದೇಶ ಸಿಕ್ಕರೂ, ಶಿವಸೇನೆ ಅಡ್ಡಗಾಲಾಗಿದೆ.ಶಿವಸೇನೆ ಹಿಂದಿನಿಂದಲೂ ಬಿಜೆಪಿಯ ಮಿತ್ರಪಕ್ಷವಾಗಿದ್ದು, ಮುಂದೆಯೂ ಮಿತ್ರರಾಗಿ ಮುಂದುವರಿಯುವ ಅವಕಾಶವಿದೆ. ಬಿಜೆಪಿಯ ಅರ್ಧದಷ್ಟು ಸ್ಥಾನಗಳನ್ನು ಗೆಲ್ಲದಿದ್ದರೂ ಶಿವಸೇನೆಯನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದೇವೆ ಎಂದರು.