ಮಧ್ಯಾಹ್ನ ಬೈಂದೂರು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ರೋಡ್ ಶೋ ಹಾಗೂ ಬೈಕ್ ರ್ಯಾಲಿ ನಡೆಯಲಿದೆ. ನಂತರ ಉಪ್ಪುಂದ ತಾರಪತಿಯಿಂದ ಕರ್ಕಿಕಳಿ ವರೆಗೆ ಸಾಗುವ ರೋಡ್ ಶೋ ಕಿರಿಮಂಜೇಶ್ವರ, ನಾವುಂದ, ಮರವಂತೆ, ತ್ರಾಸಿ, ಗುಜ್ಜಾಡಿ ಮಾರ್ಗವಾಗಿ ತೆರಳಿ ಗಂಗೊಳ್ಳಿಯಲ್ಲಿ ಮುಕ್ತಾಯವಾಗಲಿದೆ. ಅಣ್ಣಾಮಲೈ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.