ಶನಿವಾರ ಉಡುಪಿ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 8,000 ಜನರು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಪಡೆದುಕೊಂಡಿದ್ದಾರೆ. ಕೋವಿಡ್ ಸಂದಿಗ್ಧ ಸ್ಥಿತಿಯಲ್ಲಿ ವೃತ್ತಿ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಿಸುತ್ತಿರುವ ಪತ್ರಕರ್ತರು ಕೋವಿಡ್ಗೆ ಬಲಿಯಾಗಿದ್ದು ದುಃಖದ ವಿಚಾರ. ಮೊದಲ ಅಲೆಯಲ್ಲಿ 31 ಹಾಗೂ ಎರಡನೇ ಅಲೆಯಲ್ಲಿ 30ಕ್ಕೂ ಅಧಿಕ ಪತ್ರಕರ್ತರು ಮೃತಪಟ್ಟಿದ್ದಾರೆ. 30ಕ್ಕೂ ಅಧಿಕ ಪತ್ರಿಕಾ ವಿತರಕರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.