<p><strong>ಉಡುಪಿ:</strong> ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ, ಆದರ್ಶಗಳನ್ನು ಭೋವಿ ಸಮಾಜದವರು ಸೇರಿದಂತೆ ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.<br><br>ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವಯೋಗಿ ಸಿದ್ಧರಾಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಹನ್ನೆರಡನೇ ಶತಮಾನದ ಪ್ರಮುಖ ಪಂಚ ಶಿವಶರಣರಲ್ಲಿ ಒಬ್ಬರಾದ ಶಿವಯೋಗಿ ಸಿದ್ಧರಾಮ ಅವರು ಮಾನವರೆಲ್ಲರೂ ಸಮಾನರು ಎಂಬ ಪರಿಕಲ್ಪನೆಯಲ್ಲಿ ವಚನ ರಚಿಸುವುದರೊಂದಿಗೆ ಸಮುದಾಯದ ನಾಯಕರಾದರು ಎಂದರು.</p>.<p>ವಚನ ಸಾಹಿತ್ಯ ಚಳುವಳಿಯ ಸಂದರ್ಭದಲ್ಲಿ ಉಂಟಾದ ಸಾಮಾಜಿಕ ಕ್ರಾಂತಿಯಿಂದ ಶಿವಶರಣರು ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಕೆಲಸವನ್ನು ತಮ್ಮ ವಚನಗಳ ಮೂಲಕ ಮಾಡಿದರು ಎಂದು ಹೇಳಿದರು.<br /><br />ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ರಾಜ್ ಕುಮಾರ್ ಪೆರ್ಣಂಕಿಲ ಮಾತನಾಡಿ, ಶಿವಯೋಗಿ ಸಿದ್ಧರಾಮ ಅವರನ್ನು ಭೋವಿ ಜನಾಂಗದವರು ತಮ್ಮ ಕುಲಗುರುಗಳಾಗಿ ಸ್ವೀಕರಿಸಿದ್ದಾರೆ. ಅವರು ನಡೆದು ಬಂದ ಹಾದಿಯಲ್ಲಿ ಸಮಾಜದ ಪ್ರತಿಯೊಬ್ಬರೂ ನಡೆಯಬೇಕು ಎಂದರು.</p>.<p>ಉಡುಪಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನಿವೃತ್ತ ಪ್ರಾಚಾರ್ಯ ಜಗದೀಶ ಪರ್ಕಳ ಉಪನ್ಯಾಸ ನೀಡಿದರು. ನಿವೃತ್ತ ಸೈನಿಕ ವಿಶ್ವನಾಥ ಪೆರ್ಡೂರು ಅವರನ್ನು ಸನ್ಮಾನಿಸಲಾಯಿತು.<br /><br />ಸಮುದಾಯದ ವ್ಯವಸ್ಥಾಪಕ ಶಂಕರ್, ಭೋವಿ ಸಮುದಾಯದ ಪದಾಧಿಕಾರಿಗಳು ಭಾಗವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಉಪನ್ಯಾಸಕ ರಾಮಾಂಜಿ ನಿರೂಪಿಸಿದರು. ವರ್ಷಾ ಬಿ. ಕೋಟ್ಯಾನ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ, ಆದರ್ಶಗಳನ್ನು ಭೋವಿ ಸಮಾಜದವರು ಸೇರಿದಂತೆ ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.<br><br>ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವಯೋಗಿ ಸಿದ್ಧರಾಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಹನ್ನೆರಡನೇ ಶತಮಾನದ ಪ್ರಮುಖ ಪಂಚ ಶಿವಶರಣರಲ್ಲಿ ಒಬ್ಬರಾದ ಶಿವಯೋಗಿ ಸಿದ್ಧರಾಮ ಅವರು ಮಾನವರೆಲ್ಲರೂ ಸಮಾನರು ಎಂಬ ಪರಿಕಲ್ಪನೆಯಲ್ಲಿ ವಚನ ರಚಿಸುವುದರೊಂದಿಗೆ ಸಮುದಾಯದ ನಾಯಕರಾದರು ಎಂದರು.</p>.<p>ವಚನ ಸಾಹಿತ್ಯ ಚಳುವಳಿಯ ಸಂದರ್ಭದಲ್ಲಿ ಉಂಟಾದ ಸಾಮಾಜಿಕ ಕ್ರಾಂತಿಯಿಂದ ಶಿವಶರಣರು ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಕೆಲಸವನ್ನು ತಮ್ಮ ವಚನಗಳ ಮೂಲಕ ಮಾಡಿದರು ಎಂದು ಹೇಳಿದರು.<br /><br />ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ರಾಜ್ ಕುಮಾರ್ ಪೆರ್ಣಂಕಿಲ ಮಾತನಾಡಿ, ಶಿವಯೋಗಿ ಸಿದ್ಧರಾಮ ಅವರನ್ನು ಭೋವಿ ಜನಾಂಗದವರು ತಮ್ಮ ಕುಲಗುರುಗಳಾಗಿ ಸ್ವೀಕರಿಸಿದ್ದಾರೆ. ಅವರು ನಡೆದು ಬಂದ ಹಾದಿಯಲ್ಲಿ ಸಮಾಜದ ಪ್ರತಿಯೊಬ್ಬರೂ ನಡೆಯಬೇಕು ಎಂದರು.</p>.<p>ಉಡುಪಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನಿವೃತ್ತ ಪ್ರಾಚಾರ್ಯ ಜಗದೀಶ ಪರ್ಕಳ ಉಪನ್ಯಾಸ ನೀಡಿದರು. ನಿವೃತ್ತ ಸೈನಿಕ ವಿಶ್ವನಾಥ ಪೆರ್ಡೂರು ಅವರನ್ನು ಸನ್ಮಾನಿಸಲಾಯಿತು.<br /><br />ಸಮುದಾಯದ ವ್ಯವಸ್ಥಾಪಕ ಶಂಕರ್, ಭೋವಿ ಸಮುದಾಯದ ಪದಾಧಿಕಾರಿಗಳು ಭಾಗವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಉಪನ್ಯಾಸಕ ರಾಮಾಂಜಿ ನಿರೂಪಿಸಿದರು. ವರ್ಷಾ ಬಿ. ಕೋಟ್ಯಾನ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>