ಮೈತ್ರಿ ಸರ್ಕಾರದಲ್ಲಿ ಯಾವುದೂ ನೆಟ್ಟಗಿಲ್ಲ.ರಾಮಲಿಂಗ ರೆಡ್ಡಿ, ರೋಷನ್ ಬೇಗ್ ಪಕ್ಷದ ವಿರುದ್ಧವೇ ಸಿಡಿದೆದ್ದಿದ್ದಾರೆ. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ವಿಶ್ವನಾಥ್ರಾಜೀನಾಮೆ ನೀಡಿದ್ದಾರೆ. ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ.ಸಚಿವ ಸಂಪುಟ ವಿಸ್ತರಣೆ ಬಳಿಕ ಸಮಸ್ಯೆ ಮತ್ತಷ್ಟು ಉಲ್ಬಣವಾಗಲಿದ್ದು, ಅಲ್ಲಿಯವರೆಗೂ ಬಿಜೆಪಿ ಕಾದುನೋಡುತ್ತೇವೆ ಎಂದು ಶೋಭಾ ಹೇಳಿದರು.