ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಶಾಲೆಗಳಲ್ಲಿ ಮಕ್ಕಳು ಅಂತರ ಕಾಯ್ದುಕೊಳ್ಳುವುದು ಬಹಳ ಕಷ್ಟ. ಪೋಷಕರು ಕೂಡ ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆದರುತ್ತಿದ್ದಾರೆ. ಹಾಗಾಗಿ, ಈ ವರ್ಷ ಶಾಲೆಗಳನ್ನು ತೆರೆಯುವುದು ಬೇಡ. ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿ, ಮುಂದಿನ ವರ್ಷ ಸೋಂಕು ನಿಯಂತ್ರಣಕ್ಕೆ ಬಂದರೆ ಶಾಲೆಗಳನ್ನು ಆರಂಭಿಸುವುದು ಒಳಿತು ಎಂದು ಶೋಭಾ ಸಲಹೆ ನೀಡಿದರು.