ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವರು, ಬ್ರಹ್ಮಾವರದ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಬೇಕು, ಜಿಲ್ಲೆಯಲ್ಲಿ ಅತಿ ಹೆಚ್ಚು ಬೆಳೆಯಲಾಗುವ ಎಂಒ 4 ಭತ್ತದ ತಳಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಬೇಕು ಎಂಬುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರೈತ ಮುಖಂಡರು ಮನವಿ ಮಾಡಿದ್ದಾರೆ. ಈ ಸಂಬಂಧ ರೈತರ ಸಮಸ್ಯೆ ಬಗೆಹರಿಸುವಂತೆ ರಾಜ್ಯದ ಕೃಷಿ ಸಚಿವರಿಗೆ ವಿನಂತಿಸಿದ್ದು, ಕೇಂದ್ರದಿಂದ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದ್ದೇನೆ ಎಂದರು.