ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Krishna Janmashtami | ಉಡುಪಿಯ ಕೃಷ್ಣಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

Published 6 ಸೆಪ್ಟೆಂಬರ್ 2023, 23:00 IST
Last Updated 6 ಸೆಪ್ಟೆಂಬರ್ 2023, 23:00 IST
ಅಕ್ಷರ ಗಾತ್ರ

ಉಡುಪಿ: ಇಲ್ಲಿಯ ಕೃಷ್ಣಮಠದಲ್ಲಿ ಬುಧವಾರ ಶ್ರದ್ಧಾಭಕ್ತಿಯಿಂದ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಅಷ್ಟಮಿಯ ಅಂಗವಾಗಿ ಕಡೆಗೋಲು ಕೃಷ್ಣನಿಗೆ ಬೆಣ್ಣೆ ಕೃಷ್ಣನ ಅಲಂಕಾರ ಮಾಡಲಾಗಿತ್ತು.

ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಕಡೆಗೋಲು ಕೃಷ್ಣನಿಗೆ ಮಹಾಪೂಜೆ ನೆರವೇರಿಸಿದರು. ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿ ಕೃಷ್ಣನ ದರ್ಶನ ಪಡೆದರು. ರಥಬಿದಿಯ ಪರಿಸರದಲ್ಲಿ ಭಕ್ತ ಸಾಗರವೇ ನೆರೆದಿತ್ತು.

ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಉಡುಪಿಯ ಕೃಷ್ಣಮಠದ ರಥಬೀದಿಯಲ್ಲಿ ಕಂಡುಬಂದ ಮುದ್ದು ಕೃಷ್ಣರು
ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಉಡುಪಿಯ ಕೃಷ್ಣಮಠದ ರಥಬೀದಿಯಲ್ಲಿ ಕಂಡುಬಂದ ಮುದ್ದು ಕೃಷ್ಣರು

ಕೃಷ್ಣಮಠಕ್ಕೆ ಹಲವು ಬಗೆಯ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.

ಕೃಷ್ಣಮಠದಲ್ಲಿ ಮುದ್ದು ಕೃಷ್ಣ ವೇಷ ಸ್ಪರ್ಧೆಗಳು ನಡೆದವು. ನೂರಾರು ಹುಲಿ ಕುಣಿತ ತಂಡಗಳು ಹಾಗೂ ವೇಷಧಾರಿಗಳು ಪ್ರದರ್ಶನ ನೀಡಿ ಸಾರ್ವಜನಿಕರನ್ನು ರಂಜಿಸಿದರು.

ಗುರುವಾರ ಮಧ್ಯಾಹ್ನ ವಿಟ್ಲಪಿಂಡಿ ಉತ್ಸವ ನಡೆಯಲಿದ್ದು ಕೃಷ್ಣನನ್ನು ಚಿನ್ನದ ರಥದಲ್ಲಿ ಪ್ರತಿಷ್ಠಾಪಿಸಿ ಮೆರವಣಿಗೆ ಮಾಡಲಾಗುವುದು. ಈ ಸಂದರ್ಭ ಸಾಂಪ್ರದಾಯಿಕ ಮೊಸರು ಕುಡಿಕೆ ಒಡೆಯುವ ಆಚರಣೆ ನಡೆಯಲಿದೆ.

ಕೃಷ್ಣ ಜನ್ಮಾಷ್ಟಮಿಗೆ ಹುಲಿ ಕುಣಿತ ಪ್ರದರ್ಶನ ನೀಡಿದ ಕಲಾವಿದರು
ಕೃಷ್ಣ ಜನ್ಮಾಷ್ಟಮಿಗೆ ಹುಲಿ ಕುಣಿತ ಪ್ರದರ್ಶನ ನೀಡಿದ ಕಲಾವಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT