'ನನ್ನ ಹೆಸರು ಸಿದ್ದರಾಮಯ್ಯ, ಹೆಸರಿನಲ್ಲೇ 'ರಾಮ' ಇದ್ದಾನೆ. ಮಹಾತ್ಮಾ ಗಾಂಧಿ ಕೂಡ ರಾಮನ ಭಕ್ತರು. ಕಾಂಗ್ರೆಸ್ ಗಾಂಧೀಜಿ ಹಿಂದುತ್ವ ಪಾಲನೆ ಮಾಡಿದರೆ, ಬಿಜೆಪಿ ಸಾವರ್ಕರ್ ಹಿಂದುತ್ವ ಪಾಲನೆ ಮಾಡುತ್ತದೆ. ಗಾಂಧಿ ಕೊಂದ ಗೋಡ್ಸೆ ಆರಾಧಕರು ನಿಜವಾದ ಹಿಂದುತ್ವವಾದಿಗಳೇ ಎಂದು ಸಿದ್ದರಾಮಯ್ಯ ಕುಟುಕಿದರು.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಚೆಕ್ ಮೂಲಕ ಲಂಚ ಸ್ವೀಕಾರ ಮಾಡಿದರೆ, ಮಗ ವಿಜಯೇಂದ್ರ ಆರ್ಟಿಜಿಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ. 'ನಾ ಖಾವೂಂಗ, ನಾ ಖಾನೆದೂಂಗ' ಎಂದರೆ ಇದೆಯೇ ನರೇಂದ್ರ ಮೋದಿ ಅವರೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.