ನಗರದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ರಜತ ಸಂಭ್ರಮವನ್ನು ಅವಿಸ್ಮರಣೀಯವಾಗಿಸಲು ಸಹಕಾರಿ ಬಂಧುಗಳೆಲ್ಲ ಸೇರಿ ಕಾರ್ಯಕ್ರಮ ಆಯೋಜಿಸಿದ್ದೇವೆ. ಅಂದಿನ ಕಾರ್ಯಕ್ರಮದಲ್ಲಿ ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಂದ 2 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಉಡುಪಿಯಿಂದ 23 ಸಾವಿರಕ್ಕೂ ಹೆಚ್ಚು ಮಂದಿ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದರು.