ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೀನ್ ಕೊಲೆ ಪ್ರಕರಣ: 6 ಮಂದಿಯ ಬಂಧನ

Last Updated 15 ಫೆಬ್ರುವರಿ 2021, 16:48 IST
ಅಕ್ಷರ ಗಾತ್ರ

ಉಡುಪಿ: ಬ್ರಹ್ಮಾವರ ತಾಲ್ಲೂಕು ಹೊಸೂರು ಗ್ರಾಮದ ಉದ್ದಳ್ಕದ ನವೀನ್ ನಾಯ್ಕ ಅಲಿಯಾಸ್‌ ಗುಂಡನ ಕೊಲೆ ಪ್ರಕರಣದ 6 ಆರೋಪಿಗಳನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.

ಮಲ್ಪೆಯ ಗೌತಮ್, ಮನೋಜ್ ಭಂಡಾರಿ, ಧನುಷ್, ಚೇತನ್ ಕುಮಾರ್, ತಿಲಕ ರಾಜ್ ಹಾಗು ಕದಿಕೆಯ ಸಿದ್ದಾರ್ಥ ಬಂಧಿತರು. ಫೆ.14ರಂದು ನವೀನ್ ನಾಯ್ಕ ಕೊಲೆ ಮಾಡಿದ್ದ ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಪ್ರಕರಣ ಬೇಧಿಸಲು ಡಿವೈಎಸ್‌ಪಿ ಸದಾನಂದ ಎಸ್. ನಾಯ್ಕ್ ನಿರ್ದೇಶನದಲ್ಲಿ ಬ್ರಹ್ಮಾವರ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ, ಪಿ.ಎಸ್.ಐ ಗುರುನಾಥ ಬಿ. ಹಾದಿಮನಿ, ಮಲ್ಪೆ ಪಿಎಸ್‌ಐ ತಿಮ್ಮೇಶ ನೇತೃತ್ವದಲ್ಲಿ ವಿಶೇಷ ತಂಡ ತನಿಖಾ ತಂಡಗಳನ್ನು ರಚಿಸಲಾಗಿತ್ತು. ಸೋಮವಾರ ಉಡುಪಿಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

‌ಎಎಸ್‌ಐ ಕೃಷ್ಣಪ್ಪ, ಚಾಲಕ ಸಂತೋಷ, ಸಿಬ್ಬಂದಿ ಅಶೋಕ ಮೆಂಡನ್, ಪ್ರವೀಣ್ ಶೆಟ್ಟಿಗಾರ್, ಗಣೇಶ ದೇವಾಡಿಗ, ರಾಘವೇಂದ್ರ, ಸಂತೋಷ ಶೆಟ್ಟಿ, ದಿಲೀಪ್ ಕುಮಾರ, ಮಹಮ್ಮದ್ ಅಜ್ಮಲ್, ಅಬ್ದುಲ್ ಬಶೀರ್, ನಿಂಗಪ್ಪ, ದೇವರಾಜ, ರಾಜೇಶ, ದಿವ್ಯಾ, ರತ್ನಾಕರ ಶೆಟ್ಟಿ, ರವಿರಾಜ, ಎಎಸ್‌ಐ ಯೋಗೀಶ್, ಸಿಬ್ಬಂದಿ ಕಿರಣ್ ಕುಮಾರ್ ಕಾ‌ರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT