ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಶಲಾಭಿವೃದ್ಧಿ ಈಗ ಅನಿವಾರ್ಯ: ವಿದ್ಯಾಧರ್ ಹೆಗ್ಡೆ

Last Updated 15 ಸೆಪ್ಟೆಂಬರ್ 2022, 4:11 IST
ಅಕ್ಷರ ಗಾತ್ರ

ಕಾರ್ಕಳ: ‘ವಿದ್ಯಾರ್ಥಿಗಳು ಕೌಶಲ ಹೆಚ್ಚಿಸಿಕೊಳ್ಳಬೇಕು’ ಎಂದು ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ವಿದ್ಯಾಧರ್ ಹೆಗ್ಡೆ ಹೇಳಿದರು.

ಇಲ್ಲಿನ ಭುವನೇಂದ್ರ ಕಾಲೇಜಿನ ಬಿ. ಮಂಜುನಾಥ್ ಪೈ ಸ್ಮಾರಕ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಅಂತರ ಕಾಲೇಜು ಮಟ್ಟದ ಪ್ರಬಂಧ ಮಂಡನಾ ಸ್ಪರ್ಧೆ ‘ಪ್ರಾಡಿಜಿ–2022’ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ದತ್ತಾತ್ರೆಯ ಮಾರ್ಪಳ್ಳಿ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿ ಸಂಯೋಜಕಿ ಪೂಜಾ ಹಾಗೂ ರೇಷ್ಮಾ ಇದ್ದರು. ಸಂಯೋಜಕ ಉಪನ್ಯಾಸಕ ವಿಜಯಕುಮಾರ್ ಸ್ವಾಗತಿಸಿದರು. ಪ್ರತೀಕ್ಷಾ ಜೈನ್ ನಿರೂಪಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT