<p><strong>ಉಡುಪಿ:</strong> ‘ಮನುಷ್ಯ ಗಳಿಸಿದ ಸಂಪತ್ತನ್ನು ತಾನು ಮಾತ್ರ ಭೋಗಿಸದೇ ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸಬೇಕು’ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ತಿಳಿಸಿದರು.</p>.<p>ನಗರದ ಯಕ್ಷಗಾನ ಕಲಾರಂಗ ವತಿಯಿಂದ ಭಾನುವಾರ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಆನಂದ ಸಿ. ಕುಂದರ್ ಅವರನ್ನು ಗೌರವಿಸಿ ಮಾತನಾಡಿದರು.</p>.<p>ನಮ್ಮ ಸಂಪತ್ತಿಗೆ ನಾವು ಮಾತ್ರ ಭಾಗಿದಾರರಲ್ಲ, ದೇವರು ಮತ್ತು ಸಮಾಜವೂ ಪಾಲುದಾರರು. ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರಗಳಿಗೆ ಬಹಳಷ್ಟು ಕೊಡುಗೆ ನೀಡುತ್ತಿರುವ ಆನಂದ ಕುಂದರ್, ತಾನು ಗಳಿಸಿದ ಸಂಪತ್ತನ್ನು ಸಮಾಜಕ್ಕೆ ನೀಡುತ್ತಿದ್ದಾರೆ. ಆ ಮೂಲಕ ಸರ್ವರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಸಮಾಜಮುಖಿ ಸೇವೆ ಶ್ಲಾಘನೀಯ ಎಂದರು.</p>.<p>ಯಕ್ಷಗಾನ ಕಲಾರಂಗ ಅಧ್ಯಕ್ಷ ಕೆ. ಗಣೇಶ ರಾವ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮುರಳಿ ಕಡೆಕಾರ್ ಸ್ವಾಗತಿಸಿದರು, ಉಪಾಧ್ಯಕ್ಷರಾದ ಎಸ್. ವಿ. ಭಟ್ ಅಭಿನಂದನಾ ಭಾಷಣ ಮಾಡಿ, ಮಟ್ಟಿ ಗಂಗಾಧರ ರಾವ್ ವಂದಿಸಿದರು. ಈ ಸಂದರ್ಭದಲ್ಲಿ ಯಕ್ಷಗಾನ ಮೇಳದ ಕಲಾವಿದರಿಗೆ ನೀಡಲಾಗುವ ಶೇ. 50ರ ರಿಯಾಯಿತಿ ದರದ ಬಸ್ ಪಾಸ್ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ‘ಮನುಷ್ಯ ಗಳಿಸಿದ ಸಂಪತ್ತನ್ನು ತಾನು ಮಾತ್ರ ಭೋಗಿಸದೇ ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸಬೇಕು’ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ತಿಳಿಸಿದರು.</p>.<p>ನಗರದ ಯಕ್ಷಗಾನ ಕಲಾರಂಗ ವತಿಯಿಂದ ಭಾನುವಾರ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಆನಂದ ಸಿ. ಕುಂದರ್ ಅವರನ್ನು ಗೌರವಿಸಿ ಮಾತನಾಡಿದರು.</p>.<p>ನಮ್ಮ ಸಂಪತ್ತಿಗೆ ನಾವು ಮಾತ್ರ ಭಾಗಿದಾರರಲ್ಲ, ದೇವರು ಮತ್ತು ಸಮಾಜವೂ ಪಾಲುದಾರರು. ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರಗಳಿಗೆ ಬಹಳಷ್ಟು ಕೊಡುಗೆ ನೀಡುತ್ತಿರುವ ಆನಂದ ಕುಂದರ್, ತಾನು ಗಳಿಸಿದ ಸಂಪತ್ತನ್ನು ಸಮಾಜಕ್ಕೆ ನೀಡುತ್ತಿದ್ದಾರೆ. ಆ ಮೂಲಕ ಸರ್ವರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಸಮಾಜಮುಖಿ ಸೇವೆ ಶ್ಲಾಘನೀಯ ಎಂದರು.</p>.<p>ಯಕ್ಷಗಾನ ಕಲಾರಂಗ ಅಧ್ಯಕ್ಷ ಕೆ. ಗಣೇಶ ರಾವ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮುರಳಿ ಕಡೆಕಾರ್ ಸ್ವಾಗತಿಸಿದರು, ಉಪಾಧ್ಯಕ್ಷರಾದ ಎಸ್. ವಿ. ಭಟ್ ಅಭಿನಂದನಾ ಭಾಷಣ ಮಾಡಿ, ಮಟ್ಟಿ ಗಂಗಾಧರ ರಾವ್ ವಂದಿಸಿದರು. ಈ ಸಂದರ್ಭದಲ್ಲಿ ಯಕ್ಷಗಾನ ಮೇಳದ ಕಲಾವಿದರಿಗೆ ನೀಡಲಾಗುವ ಶೇ. 50ರ ರಿಯಾಯಿತಿ ದರದ ಬಸ್ ಪಾಸ್ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>