ನಮ್ಮ ಸಂಪತ್ತಿಗೆ ನಾವು ಮಾತ್ರ ಭಾಗಿದಾರರಲ್ಲ, ದೇವರು ಮತ್ತು ಸಮಾಜವೂ ಪಾಲುದಾರರು. ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರಗಳಿಗೆ ಬಹಳಷ್ಟು ಕೊಡುಗೆ ನೀಡುತ್ತಿರುವ ಆನಂದ ಕುಂದರ್, ತಾನು ಗಳಿಸಿದ ಸಂಪತ್ತನ್ನು ಸಮಾಜಕ್ಕೆ ನೀಡುತ್ತಿದ್ದಾರೆ. ಆ ಮೂಲಕ ಸರ್ವರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಸಮಾಜಮುಖಿ ಸೇವೆ ಶ್ಲಾಘನೀಯ ಎಂದರು.