ಉಡುಪಿ: ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಿರುವ ಕೇರಳದಿಂದ ಸಮುದ್ರ ಮಾರ್ಗವಾಗಿ ಜನರು ಬರುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಕರಾವಳಿ ಕಾವಲು ಪಡೆಯ ಎಸ್ಪಿ ಆರ್.ಚೇತನ್ ಮಂಗಳವಾರ ಕರ್ನಾಟಕ ಹಾಗೂ ಕೇರಳ ಗಡಿ ಪಾಯಿಂಟ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಿನದ 24 ಗಂಟೆ ಕರಾವಳಿ ಕಾವಲುಪಡೆಯ ಸಿಬ್ಬಂದಿ ಇಂಟರ್ಸೆಪ್ಟರ್ ಬೋಟ್ ಮೂಲಕ ಗಸ್ತು ತಿರುಗಬೇಕು. ಕೇರಳ ರಾಜ್ಯದಿಂದ ಕರ್ನಾಟಕಕ್ಕೆ ಯಾರೂ ಬರದಂತೆ ಎಚ್ಚರವಹಿಸಬೇಕು ಎಂದು ಸಿಬ್ಬಂದಿಗೆ ಸೂಚನೆ ನೀಡಿದರು.