<p><strong>ಕಟಪಾಡಿ:</strong> ಉಡುಪಿಯ ಕಟಪಾಡಿಯಲ್ಲಿರುವ ಎಸ್ವಿಎಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಮಾಧ್ಯಮ ಅನುದಾನಿತ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಮಂಗಳವಾರ(ಫೆ.3) ಆಶುಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು.</p><p>ಶಾಲೆಯ ಹಳೆ ವಿದ್ಯಾರ್ಥಿಗಳಾದ ಉದ್ಯಮಿ ನರೇಂದ್ರ ಶೆಟ್ಟಿ, ಸಾಹಿತಿ ಶಾಂತಾರಾಮ್ ಶೆಟ್ಟಿ, ಯಕ್ಷಗಾನ ಕಲಾವಿದ ಅರುಣ್ ಐರೋಡಿ ಅವರ ಸಹಕಾರದೊಂದಿಗೆ ಶಿರಸಿಯ ಅಧ್ಯಾಯ ಟ್ರಸ್ಟ್ ನಿರ್ದೇಶಕರಾದ ಕಿರಣ್ ಉಪಾಧ್ಯಾಯ ಅವರು ಸ್ಪರ್ಧೆಯನ್ನು ಆಯೋಜಿಸಿದ್ದರು. </p><p>ಕಾಲೇಜಿನ ಕನ್ನಡ ಶಿಕ್ಷಕಿ ವಿದ್ಯಾ, ವಿಜ್ಞಾನ ಶಿಕ್ಷಕ ರಂಗನಟ, ನಿರ್ದೇಶಕ ಸಂತೋಷ್ ನಾಯಕ್ ಪಟ್ಲ ಮತ್ತು ನರೇಂದ್ರ ಶೆಟ್ಟಿ ಅವರು ತೀರ್ಪುಗಾರರಾಗಿದ್ದರು. </p><p>ಇದೇ ಸಂದರ್ಭದಲ್ಲಿ ಏಣಗುಡ್ಡೆ ಸಾರ್ವಜನಿಕ ಗ್ರಂಥಾಲಯ ಹಾಗೂ ಎಸ್ವಿಎಸ್ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯಗಳಿಗೆ ಟ್ರಸ್ಟಿನ ವತಿಯಿಂದ ಕನ್ನಡ ಸಾಹಿತ್ಯದ ಪುಸ್ತಕಗಳನ್ನು ವಿತರಿಸಿದರು.</p><p>ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಎಸ್ವಿಎಸ್ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಸತ್ಯೇಂದ್ರ ಪೈ ವಹಿಸಿಕೊಂಡಿದ್ದರು. ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ವೆಂಕಟರಮಣ ಭಟ್, ಗಣೇಶ್ ಕಿಣಿ, ಶ್ರೀನಿವಾಸ ಕಿಣಿ, ಆಡಳಿತಾಧಿಕಾರಿ ಸುಧಾಕರ್ ಬ್ರಹ್ಮಾವರ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಟಪಾಡಿ:</strong> ಉಡುಪಿಯ ಕಟಪಾಡಿಯಲ್ಲಿರುವ ಎಸ್ವಿಎಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಮಾಧ್ಯಮ ಅನುದಾನಿತ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಮಂಗಳವಾರ(ಫೆ.3) ಆಶುಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು.</p><p>ಶಾಲೆಯ ಹಳೆ ವಿದ್ಯಾರ್ಥಿಗಳಾದ ಉದ್ಯಮಿ ನರೇಂದ್ರ ಶೆಟ್ಟಿ, ಸಾಹಿತಿ ಶಾಂತಾರಾಮ್ ಶೆಟ್ಟಿ, ಯಕ್ಷಗಾನ ಕಲಾವಿದ ಅರುಣ್ ಐರೋಡಿ ಅವರ ಸಹಕಾರದೊಂದಿಗೆ ಶಿರಸಿಯ ಅಧ್ಯಾಯ ಟ್ರಸ್ಟ್ ನಿರ್ದೇಶಕರಾದ ಕಿರಣ್ ಉಪಾಧ್ಯಾಯ ಅವರು ಸ್ಪರ್ಧೆಯನ್ನು ಆಯೋಜಿಸಿದ್ದರು. </p><p>ಕಾಲೇಜಿನ ಕನ್ನಡ ಶಿಕ್ಷಕಿ ವಿದ್ಯಾ, ವಿಜ್ಞಾನ ಶಿಕ್ಷಕ ರಂಗನಟ, ನಿರ್ದೇಶಕ ಸಂತೋಷ್ ನಾಯಕ್ ಪಟ್ಲ ಮತ್ತು ನರೇಂದ್ರ ಶೆಟ್ಟಿ ಅವರು ತೀರ್ಪುಗಾರರಾಗಿದ್ದರು. </p><p>ಇದೇ ಸಂದರ್ಭದಲ್ಲಿ ಏಣಗುಡ್ಡೆ ಸಾರ್ವಜನಿಕ ಗ್ರಂಥಾಲಯ ಹಾಗೂ ಎಸ್ವಿಎಸ್ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯಗಳಿಗೆ ಟ್ರಸ್ಟಿನ ವತಿಯಿಂದ ಕನ್ನಡ ಸಾಹಿತ್ಯದ ಪುಸ್ತಕಗಳನ್ನು ವಿತರಿಸಿದರು.</p><p>ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಎಸ್ವಿಎಸ್ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಸತ್ಯೇಂದ್ರ ಪೈ ವಹಿಸಿಕೊಂಡಿದ್ದರು. ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ವೆಂಕಟರಮಣ ಭಟ್, ಗಣೇಶ್ ಕಿಣಿ, ಶ್ರೀನಿವಾಸ ಕಿಣಿ, ಆಡಳಿತಾಧಿಕಾರಿ ಸುಧಾಕರ್ ಬ್ರಹ್ಮಾವರ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>