ಹೆಜಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾಂಡುರಂಗ ಸಿ.ಕರ್ಕೇರ ದೀಪ ಬೆಳಗಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ ಧ್ವಜಾರೋಹಣ ಮಾಡಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪವಿತ್ರಾ ಗಿರೀಶ್, ಸದಸ್ಯರಾದ ಶಿವಕುಮಾರ್, ಶರಣ್ ಮಟ್ಟು, ಸುಗುಣ, ವಿವಿಧ ಸಂಘಟನೆಗಳ ಮುಖ್ಯಸ್ಥರಾದ ಶಿವರಾಮ ಶೆಟ್ಟಿ, ಶೇಖರ್ ಹೆಜ್ಮಾಡಿ, ರೋಲಿ ಡಿಕೋಸ್ತಾ, ಅಬ್ದುಲ್ ಅಜೀಜ್ ಹೆಜ್ಮಾಡಿ, ಸಂಜೀವ ಮಾಸ್ಟರ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಶಿಕ್ಷಣ ಸಂಯೋಜಕ ಶಂಕರ್ ಸುವರ್ಣ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಉಮಾ, ರಿತೇಶ್ ಕುಮಾರ್ ಶೆಟ್ಟಿ, ಕವಿತಾ, ಮಧುಕರ್ ಇದ್ದರು. ಮುಖ್ಯ ಶಿಕ್ಷಕಿ ಲತಾ ಸ್ವಾಗತಿಸಿದರು.