<p><strong>ಉಡುಪಿ:</strong> ಕಾರ್ಕಳ ತಾಲ್ಲೂಕಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಸೂರ್ಯನಿಗಿಂತ ಮುಂಚೆ ಎದ್ದು ಓದುತ್ತಿದ್ದಾರೆ. ಅಧಿಕಾರಿಗಳು, ಜನಪ್ರತಿನಿಧಿಗಳಂತೂ ವಿದ್ಯಾರ್ಥಿಗಳಿಗಿಂತ ಮುಂಚಿತವಾಗಿ ಎದ್ದು, ಮಕ್ಕಳು ಓದುತ್ತಿದ್ದಾರೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಇದುಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಜಾರಿಗೊಳಿಸಿರುವ ‘ಮಿಷನ್ 100’ ಯೋಜನೆಯ ಎಫೆಕ್ಟ್.</p>.<p>ಕಾರ್ಕಳ ತಾಲ್ಲೂಕು ವ್ಯಾಪ್ತಿಯ ಎಲ್ಲ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂಬ ಗುರಿಯೊಂದಿಗೆ ‘ವಿದ್ಯಾರ್ಥಿಗಳ ಮನೆ ಮನ ಭೇಟಿ’ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಲಾಗಿದೆ. ಈ ಪ್ರಯತ್ನಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜನಪ್ರತಿನಿಧಿಗಳು ಹಾಗೂ ಸಮಾಜದ ಗಣ್ಯರು ಕೈಜೋಡಿಸಿರುವುದು ವಿಶೇಷ.</p>.<p>ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್,ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್, ಎಸ್ಪಿ ವಿಷ್ಣುವರ್ಧನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಡಿಡಿಪಿಐ ಶೇಷಶಯನ ಕಾರಿಂಜ ಸೇರಿದಂತೆ ಹಲವರು ‘ಮನೆ ಮನ’ ಕಾರ್ಯಕ್ರಮದ ಭಾಗವಾಗಿದ್ದಾರೆ.</p>.<p><strong>ಏನಿದು ‘ಮನೆ ಮನ’ ಕಾರ್ಯಕ್ರಮ</strong></p>.<p>ಸಮಾಜದ ವಿವಿಧ ಕ್ಷೇತ್ರಗಳ 100 ಗಣ್ಯರು ಹಾಗೂ 400 ಪ್ರಾಥಮಿಕ ಶಿಕ್ಷಕರ ತಂಡವನ್ನು ‘ಮನೆ ಮನ ಭೇಟಿ’ ಕಾರ್ಯಕ್ರಮಕ್ಕೆ ಬಳಸಿಕೊಳ್ಳಲಾಗಿದೆ. ಈ ತಂಡ ನಿರ್ಧಿಷ್ಟ ದಿನ ಬೆಳಗಿನ ಜಾವ 4.30ಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆಗೆ ದಿಢೀರ್ ಭೇಟಿ ನೀಡುತ್ತದೆ. ವಿದ್ಯಾರ್ಥಿಗಳು ಮಲಗಿದ್ದರೆ ಎಬ್ಬಿಸಿ ಓದಲು ಹಚ್ಚುತ್ತದೆ. ವಿದ್ಯಾರ್ಥಿ ಓದುತ್ತಿದ್ದರೆ, ಬೆನ್ನುತಟ್ಟಿ ಪ್ರೋತ್ಸಾಹಿಸುತ್ತದೆ.</p>.<p>ಜತೆಗೆ, ಮಕ್ಕಳ ಓದಿಗೆ ಪೂರಕ ವಾತಾವರಣ ನಿರ್ಮಿಸಿಕೊಡುವಂತೆ, ಮಕ್ಕಳು ಮನೆಯಲ್ಲಿದ್ದಾಗ ಟಿವಿ ಹಾಕದಂತೆ, ಇತರೆ ಕೆಲಸಗಳಿಗೆ ಕಳುಹಿಸದಂತೆ ಪೋಷಕರಿಗೆ ಸಲಹೆಗಳನ್ನು ನೀಡಲಾಗುತ್ತಿದೆ ಎನ್ನುತ್ತಾರೆ ಕಾರ್ಕಳ ಬಿಇಒ ಜಿ.ಎಸ್.ಶಶಿಧರ.</p>.<p><strong>1000ಕ್ಕೂ ಹೆಚ್ಚು ಮನೆ ಭೇಟಿ</strong></p>.<p>ಜೂನ್ನಿಂದ ಮನೆ–ಮನ ಕಾರ್ಯಕ್ರಮ ನಡೆಯುತ್ತಿದ್ದು, ನೋಡೆಲ್ ಅಧಿಕಾರಿಯಾಗಿ ಬಿಆರ್ಪಿ ವೆಂಕಟರಮಣ ಕಲ್ಕೂರ್ ಅವರನ್ನು ನಿಯೋಜಿಸಲಾಗಿದೆ. ಈಗಾಗಲೇ 1,000ಕ್ಕೂ ಹೆಚ್ಚು ಮನೆಗಳಿಗೆ ಭೇಟಿ ನೀಡಲಾಗಿದೆ. ಕಾರ್ಕಳದಲ್ಲಿ 2,657 ವಿದ್ಯಾರ್ಥಿಗಳಿದ್ದು, ಕೆಲವೇ ದಿನಗಳಲ್ಲಿ ಗುರಿ ತಲುಪಲಿದ್ದೇವೆ ಎಂದು ಬಿಇಒ ತಿಳಿಸಿದರು.</p>.<p>ಮಕ್ಕಳ ಮನೆಗೆ ಭೇಟಿ ನೀಡಿದಾಗ ಕುಟುಂಬದ ಆರ್ಥಿಕ ಪರಿಸ್ಥಿತಿ ಅರಿಯಲು ಸಾಧ್ಯವಾಗಿದ್ದು, ದಾನಿಗಳ ನೆರವಿನಿಂದ ಸೋಲಾರ್ ಲೈಟ್ಸ್, ಟೇಬಲ್ ಲ್ಯಾಂಪ್ಸ್ ಹಾಗೂ ಕಲಿಕೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಕೊಡಿಸಲಾಗಿದೆ ಎಂದರು.</p>.<p><strong>10 ಕಡೆ ರಾತ್ರಿ ತರಗತಿ</strong></p>.<p>ತಾಲ್ಲೂಕಿನ ಹತ್ತು ಶಾಲೆಗಳಲ್ಲಿ ರಾತ್ರಿ ತರಗತಿಗಳನ್ನು ಆರಂಭಿಸಲಾಗಿದ್ದು, ಶಾಲೆಬಿಟ್ಟ ಬಳಿಕ ಸಂಜೆ 5ರಿಂದ ರಾತ್ರಿ 8ರವರೆಗೆ ಕಲಿಸಲಾಗುತ್ತಿದೆ. ಬೆಳಿಗ್ಗೆ ಬೇಗ ಎದ್ದು ಓದುವಂತೆ ಕರೆ ಮಾಡಲಾಗುತ್ತಿದೆ. ಶಿಕ್ಷಕರಿಗೂ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ಮಕ್ಕಳ ಸ್ಮರಣಶಕ್ತಿ ವೃದ್ಧಿಗೆ ವಜ್ರದೇಹಿ ಮನೋಧ್ಯಾನ, ಹಾಕಿನಿ ಮುದ್ರೆಯ ಧ್ಯಾನ ಕಲಿಸಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿರಾಜ್ಯಕ್ಕೆ ಉಡುಪಿ ಜಿಲ್ಲೆ ಹಾಗೂ ಕಾರ್ಕಳ ತಾಲ್ಲೂಕು ನಂಬರ್ ಒನ್ ಸ್ಥಾನಕ್ಕೇರಬೇಕು ಎಂಬುದು ನಮ್ಮ ಗುರಿ ಎನ್ನುತ್ತಾರೆ ಬಿಇಒ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕಾರ್ಕಳ ತಾಲ್ಲೂಕಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಸೂರ್ಯನಿಗಿಂತ ಮುಂಚೆ ಎದ್ದು ಓದುತ್ತಿದ್ದಾರೆ. ಅಧಿಕಾರಿಗಳು, ಜನಪ್ರತಿನಿಧಿಗಳಂತೂ ವಿದ್ಯಾರ್ಥಿಗಳಿಗಿಂತ ಮುಂಚಿತವಾಗಿ ಎದ್ದು, ಮಕ್ಕಳು ಓದುತ್ತಿದ್ದಾರೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಇದುಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಜಾರಿಗೊಳಿಸಿರುವ ‘ಮಿಷನ್ 100’ ಯೋಜನೆಯ ಎಫೆಕ್ಟ್.</p>.<p>ಕಾರ್ಕಳ ತಾಲ್ಲೂಕು ವ್ಯಾಪ್ತಿಯ ಎಲ್ಲ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂಬ ಗುರಿಯೊಂದಿಗೆ ‘ವಿದ್ಯಾರ್ಥಿಗಳ ಮನೆ ಮನ ಭೇಟಿ’ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಲಾಗಿದೆ. ಈ ಪ್ರಯತ್ನಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜನಪ್ರತಿನಿಧಿಗಳು ಹಾಗೂ ಸಮಾಜದ ಗಣ್ಯರು ಕೈಜೋಡಿಸಿರುವುದು ವಿಶೇಷ.</p>.<p>ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್,ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್, ಎಸ್ಪಿ ವಿಷ್ಣುವರ್ಧನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಡಿಡಿಪಿಐ ಶೇಷಶಯನ ಕಾರಿಂಜ ಸೇರಿದಂತೆ ಹಲವರು ‘ಮನೆ ಮನ’ ಕಾರ್ಯಕ್ರಮದ ಭಾಗವಾಗಿದ್ದಾರೆ.</p>.<p><strong>ಏನಿದು ‘ಮನೆ ಮನ’ ಕಾರ್ಯಕ್ರಮ</strong></p>.<p>ಸಮಾಜದ ವಿವಿಧ ಕ್ಷೇತ್ರಗಳ 100 ಗಣ್ಯರು ಹಾಗೂ 400 ಪ್ರಾಥಮಿಕ ಶಿಕ್ಷಕರ ತಂಡವನ್ನು ‘ಮನೆ ಮನ ಭೇಟಿ’ ಕಾರ್ಯಕ್ರಮಕ್ಕೆ ಬಳಸಿಕೊಳ್ಳಲಾಗಿದೆ. ಈ ತಂಡ ನಿರ್ಧಿಷ್ಟ ದಿನ ಬೆಳಗಿನ ಜಾವ 4.30ಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆಗೆ ದಿಢೀರ್ ಭೇಟಿ ನೀಡುತ್ತದೆ. ವಿದ್ಯಾರ್ಥಿಗಳು ಮಲಗಿದ್ದರೆ ಎಬ್ಬಿಸಿ ಓದಲು ಹಚ್ಚುತ್ತದೆ. ವಿದ್ಯಾರ್ಥಿ ಓದುತ್ತಿದ್ದರೆ, ಬೆನ್ನುತಟ್ಟಿ ಪ್ರೋತ್ಸಾಹಿಸುತ್ತದೆ.</p>.<p>ಜತೆಗೆ, ಮಕ್ಕಳ ಓದಿಗೆ ಪೂರಕ ವಾತಾವರಣ ನಿರ್ಮಿಸಿಕೊಡುವಂತೆ, ಮಕ್ಕಳು ಮನೆಯಲ್ಲಿದ್ದಾಗ ಟಿವಿ ಹಾಕದಂತೆ, ಇತರೆ ಕೆಲಸಗಳಿಗೆ ಕಳುಹಿಸದಂತೆ ಪೋಷಕರಿಗೆ ಸಲಹೆಗಳನ್ನು ನೀಡಲಾಗುತ್ತಿದೆ ಎನ್ನುತ್ತಾರೆ ಕಾರ್ಕಳ ಬಿಇಒ ಜಿ.ಎಸ್.ಶಶಿಧರ.</p>.<p><strong>1000ಕ್ಕೂ ಹೆಚ್ಚು ಮನೆ ಭೇಟಿ</strong></p>.<p>ಜೂನ್ನಿಂದ ಮನೆ–ಮನ ಕಾರ್ಯಕ್ರಮ ನಡೆಯುತ್ತಿದ್ದು, ನೋಡೆಲ್ ಅಧಿಕಾರಿಯಾಗಿ ಬಿಆರ್ಪಿ ವೆಂಕಟರಮಣ ಕಲ್ಕೂರ್ ಅವರನ್ನು ನಿಯೋಜಿಸಲಾಗಿದೆ. ಈಗಾಗಲೇ 1,000ಕ್ಕೂ ಹೆಚ್ಚು ಮನೆಗಳಿಗೆ ಭೇಟಿ ನೀಡಲಾಗಿದೆ. ಕಾರ್ಕಳದಲ್ಲಿ 2,657 ವಿದ್ಯಾರ್ಥಿಗಳಿದ್ದು, ಕೆಲವೇ ದಿನಗಳಲ್ಲಿ ಗುರಿ ತಲುಪಲಿದ್ದೇವೆ ಎಂದು ಬಿಇಒ ತಿಳಿಸಿದರು.</p>.<p>ಮಕ್ಕಳ ಮನೆಗೆ ಭೇಟಿ ನೀಡಿದಾಗ ಕುಟುಂಬದ ಆರ್ಥಿಕ ಪರಿಸ್ಥಿತಿ ಅರಿಯಲು ಸಾಧ್ಯವಾಗಿದ್ದು, ದಾನಿಗಳ ನೆರವಿನಿಂದ ಸೋಲಾರ್ ಲೈಟ್ಸ್, ಟೇಬಲ್ ಲ್ಯಾಂಪ್ಸ್ ಹಾಗೂ ಕಲಿಕೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಕೊಡಿಸಲಾಗಿದೆ ಎಂದರು.</p>.<p><strong>10 ಕಡೆ ರಾತ್ರಿ ತರಗತಿ</strong></p>.<p>ತಾಲ್ಲೂಕಿನ ಹತ್ತು ಶಾಲೆಗಳಲ್ಲಿ ರಾತ್ರಿ ತರಗತಿಗಳನ್ನು ಆರಂಭಿಸಲಾಗಿದ್ದು, ಶಾಲೆಬಿಟ್ಟ ಬಳಿಕ ಸಂಜೆ 5ರಿಂದ ರಾತ್ರಿ 8ರವರೆಗೆ ಕಲಿಸಲಾಗುತ್ತಿದೆ. ಬೆಳಿಗ್ಗೆ ಬೇಗ ಎದ್ದು ಓದುವಂತೆ ಕರೆ ಮಾಡಲಾಗುತ್ತಿದೆ. ಶಿಕ್ಷಕರಿಗೂ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ಮಕ್ಕಳ ಸ್ಮರಣಶಕ್ತಿ ವೃದ್ಧಿಗೆ ವಜ್ರದೇಹಿ ಮನೋಧ್ಯಾನ, ಹಾಕಿನಿ ಮುದ್ರೆಯ ಧ್ಯಾನ ಕಲಿಸಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿರಾಜ್ಯಕ್ಕೆ ಉಡುಪಿ ಜಿಲ್ಲೆ ಹಾಗೂ ಕಾರ್ಕಳ ತಾಲ್ಲೂಕು ನಂಬರ್ ಒನ್ ಸ್ಥಾನಕ್ಕೇರಬೇಕು ಎಂಬುದು ನಮ್ಮ ಗುರಿ ಎನ್ನುತ್ತಾರೆ ಬಿಇಒ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>