ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಉಡುಪಿ: ಘೋಷಣೆ ಹಲವು, ಕಾರ್ಯರೂಪ ಕೆಲವು

ರಾಜ್ಯ ಬಜೆಟ್‌: ಜಿಲ್ಲೆಯ ಜನರಲ್ಲಿ ನಿರೀಕ್ಷೆಗಳಿವೆ ಬೆಟ್ಟದಷ್ಟು
ನವೀನ್‌ ಕುಮಾರ್ ಜಿ.
Published : 10 ಫೆಬ್ರುವರಿ 2025, 7:09 IST
Last Updated : 10 ಫೆಬ್ರುವರಿ 2025, 7:09 IST
ಫಾಲೋ ಮಾಡಿ
Comments
ಮಲ್ಪೆ ಮೀನುಗಾರಿಕಾ ಬಂದರು
ಮಲ್ಪೆ ಮೀನುಗಾರಿಕಾ ಬಂದರು
‘ಮೂಲ ಸೌಕರ್ಯಕ್ಕೆ ಆದ್ಯತೆ ನೀಡಲಿ’
ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸ್ಥಳೀಯಾಡಳಿತ ಸಂಸ್ಥೆಗಳಿಗೂ ಅನುದಾನ ಬಿಡುಗಡೆ ಮಾಡಬೇಕು. ಅನುದಾನ ಕೊರತೆಯಿಂದ ಗ್ರಾಮೀಣ ಪ್ರದೇಶಗಳ ರಸ್ತೆಗಳು ದುರಸ್ತಿ ಕಾಣದೆ ಹದಗೆಟ್ಟಿವೆ. ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಸಬೇಕಾಗಿದೆ ಎಂದು ಎಂಜಿಎಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ ತಿಳಿಸಿದರು. ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಪ್ರವಾಸೋದ್ಯಮ ಕ್ಷೇತ್ರವು ಬೆಳೆವಣಿಗೆ ಸಾಧಿಸುತ್ತಿದ್ದರೂ ಪ್ರವಾಸಿ ತಾಣಗಳಿಗೆ ಸಮರ್ಪಕ ಮೂಲಸೌಕರ್ಯ ಒದಗಿಸುವ ಕೆಲಸವಾಗಿಲ್ಲ. ಪ್ರವಾಸಿಗರಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಅವರು ಹೇಳಿದ್ದಾರೆ.
‘₹100 ಕೋಟಿ ಪ್ಯಾಕೇಜ್‌ ಘೋಷಿಸಲಿ’
ಉಡುಪಿ ಜಿಲ್ಲೆಯ ಮಲೆಕುಡಿಯ ಸಮುದಾಯದವರ ಸಮಗ್ರ ಅಭಿವೃದ್ಧಿಗಾಗಿ ಈಗಾಗಲೇ ₹6.43 ಕೋಟಿಯ ಕ್ರಿಯಾಯೋಜನೆ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಇಷ್ಟೇ ಸಾಲದು ಜಿಲ್ಲೆಯ ಮಲೆಕುಡಿಯರ ಸಮಗ್ರ ಅಭಿವೃದ್ಧಿಗಾಗಿ ₹100 ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ಘೋಷಿಸಬೇಕು ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ಆಗ್ರಹಿಸಿದ್ದಾರೆ. ಮಲೆಕುಡಿಯ ಸಮುದಾಯದವರ ದಶಕಗಳ ಬೇಡಿಕೆಯಾದ ಹೆಬ್ರಿ ತಾಲ್ಲೂಕಿನ ಮತ್ತಾವಿನಲ್ಲಿ ಸೇತುವೆ ನಿರ್ಮಾಣಕ್ಕೂ ಸರ್ಕಾರ ಆದ್ಯತೆ ನೀಡಬೇಕು ಎಂದು ಅವರು ಹೇಳಿದ್ದಾರೆ.
‘ಕೃಷಿ ಕ್ಷೇತ್ರಕ್ಕೆ ಆದ್ಯತೆ ಅಗತ್ಯ’
ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಿಸಬೇಕು. ಕೃಷಿಕರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುವ ಸಾಲ ಯೋಜನೆಯನ್ನು ಇನ್ನಷ್ಟು ಸರಳಗೊಳಿಸಿ ಅದರ ಪ್ರಯೋಜನ ಎಲ್ಲಾ ಕೃಷಿಕರಿಗೂ ಸಿಗುವಂತಾಗಬೇಕು ಎಂದು ಉಡುಪಿ ಜಿಲ್ಲಾ ಕೃಷಿಕ ಸಂಘದ ಕಾರ್ಯದರ್ಶಿ ರವೀಂದ್ರ ಗುಜ್ಜರಬೆಟ್ಟು ಹೇಳಿದರು. ಹೈನುಗಾರಿಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಾಲಿನ ಮಾರುಕಟ್ಟೆಯನ್ನು ವಿಸ್ತರಣೆಗೊಳಿಸಲು ಸರ್ಕಾರವು ಬಜೆಟ್‌ನಲ್ಲಿ ಯೋಜನೆ ಘೋಷಿಸಬೇಕು. ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.
‘ಕೊರಗರ ಶಿಕ್ಷಣ ಆರೋಗ್ಯಕ್ಕೆ ಆದ್ಯತೆ ನೀಡಿ’
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೊರಗ ಸಮುದಾಯದವರಿಗೆ ಮಂಜೂರಾಗಿರುವ ಜಾಗದಲ್ಲಿ ಪುನರ್ವಸತಿ ಕಾರ್ಯಕ್ಕಾಗಿ ಸರ್ಕಾರವು ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು. ಪ್ರತ್ಯೇಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳದ ಸಂಯೋಜಕ ಕೆ. ಪುತ್ರನ್‌ ಆಗ್ರಹಿಸಿದ್ದಾರೆ. ಈ ಹಿಂದೆ ಕೊರಗ ಸಮುದಾಯದವರು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದರೂ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸುತ್ತಿತ್ತು. ಈ ಯೋಜನೆಗೆ ಬಲ ತುಂಬಲು ಅನುದಾನ ಘೋಷಿಸಬೇಕು. ಕೊರಗ ಸಮುದಾಯದ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿಶೇಷ ಅನುದಾನ ಮೀಸಲಿರಿಸಿ ಯೋಜನೆಯನ್ನು ಘೋಷಿಸಬೇಕು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT