ಪ್ರಮುಖ ಕಾರ್ಯಕ್ರಮಗಳಾದ ಸ್ವಚ್ಛ ಭಾರತ್ ಮಿಷನ್, ನರೇಗಾ ಯೋಜನೆ, ಪ್ರವಾಸೋದ್ಯಮ ಕಾರ್ಯಕ್ರಮ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ಜತೆಗೆ, ಹೆಣ್ಣುಮಕ್ಕಳ ರಕ್ಷಣೆಗೆ ಇರುವ ಕಾನೂನುಗಳು, ಸರ್ಕಾರದ ಸೌಲಭ್ಯಗಳು, ಸ್ಪರ್ಧಾತ್ಮಕ ಪರೀಕ್ಷೆಗಳಾದ ಐಎಎಸ್ ಹಾಗೂ ಕೆಎಎಸ್ ಎದುರಿಸುವುದು ಹೇಗೆ ಎಂಬ ತರಬೇತಿ ನೀಡಲಾಯಿತು.ಇಡೀ ದಿನ ನಡೆದ ಕಾರ್ಯಕ್ರಮಗಳಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಭಾಗವಹಿಸಿದ್ದ ವರ್ಷಾಗೆ ಅರ್ಧ ತಾಸು ಸಿಇಒ ಆಗುವ ಅವಕಾಶ ನೀಡಲಾಯಿತು ಎಂದರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್.