<p>ಕುಂದಾಪುರ/ ಹಿರಿಯಡಕ: ಪೆರ್ಡೂರುಅನಂತಪದ್ಮನಾಭ ಯಕ್ಷಗಾನ ಮಂಡಳಿಯ ಈ ವರ್ಷದ ತಿರುಗಾಟಕ್ಕೆ ಪ್ರಧಾನ ಭಾಗವತರಾಗಿ ಸುಬ್ರಹ್ಮಣ್ಯ ಧಾರೇಶ್ವರ ಅವರು ಮತ್ತೆ ರಂಗಸ್ಥಳ ಏರಲಿದ್ದಾರೆ.</p>.<p>ಬಡಗುತಿಟ್ಟಿನ ಪ್ರಸಿದ್ಧ ಡೇರೆ ಮೇಳಗಳಲ್ಲಿ ಒಂದಾದ ಪೆರ್ಡೂರು ಅನಂತಪದ್ಮನಾಭ ಯಕ್ಷಗಾನ ಮಂಡಳಿ ಈ ವರ್ಷದ ತಿರುಗಾಟಕ್ಕೆ ಸಂಪೂರ್ಣ ತಯಾರಿ ನಡೆಸಿದ್ದು, ಕೆಲವೊಂದು ಮುಮ್ಮೇಳ ಕಲಾವಿದರ ಬದಲಾವಣೆ ನಡೆಸಿತ್ತು. ಆದರೆ, ‘ತಿರುಗಾಟ ಪ್ರಾರಂಭಕ್ಕೆ ಕೆಲವೇ ದಿನ ಇದೆ’ ಎನ್ನುವಾಗ ಕಳೆದ 9 ವರ್ಷಗಳಿಂದ ಮೇಳದ ಪ್ರಧಾನ ಭಾಗವತರಾಗಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರು ಮೇಳದಿಂದ ನಿರ್ಗಮಿಸಿದ್ದು, ಈ ತಿರುಗಾಟದಿಂದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ ಅವರು ಮತ್ತೆ ಪ್ರಧಾನ ಭಾಗವತ ಸ್ಥಾನವನ್ನು ಅಲಂಕರಿಸಲಿದ್ದಾರೆ.</p>.<p>ಪ್ರಧಾನ ಭಾಗವತಿಕೆ ಹಾಗೂ ದಕ್ಷ ನಿರ್ದೇಶನದೊಂದಿಗೆ ಪೆರ್ಡೂರು ಮೇಳದ ಶಿವಾನಿ-ಭವಾನಿ, ನಾಗವಲ್ಲಿ, ದಾಮಿನಿ-ಭಾಮಿನಿ, ಸಾವನಿ-ಪಾವನಿ, ಹೀಗೆ ಅನೇಕ ಯಶಸ್ವಿ ಸಾಮಾಜಿಕ ಹಾಗೂ ಪೌರಾಣಿಕ ಪ್ರಸಂಗಗಳು ಯಶಸ್ವಿಯಾಗಲು ಕಾರಣ<br />ರಾದ ಧಾರೇಶ್ವರರು 9 ವರ್ಷಗಳ ಹಿಂದೆ ಪೆರ್ಡೂರು ಮೇಳದಿಂದ ನಿರ್ಗಮಿಸಿ, ಕೇವಲ ಅತಿಥಿ ಕಲಾವಿದರಾಗಿ ಹಾಗೂ ಧಾರೇಶ್ವರ ಯಕ್ಷಬಳಗdಲ್ಲಿ ಭಾಗವಹಿಸುತ್ತಿದ್ದರು.</p>.<p>ಅವರ ಸ್ಥಾನಕ್ಕೆ ಬಡಗುತಿಟ್ಟಿನ ಭಾಗವತ, ಅಸಂಖ್ಯಾತ ಅಭಿಮಾನಿ<br />ಗಳನ್ನು ಹೊಂದಿರುವ ಜನ್ಸಾಲೆ ಮೇಳದ ಯಶಸ್ಸಿಗೆ ಕಾರಣರಾಗಿದ್ದರು. ಇದೀಗ ಅವರು ದಿಢೀರ್ ನಿರ್ಗಮಿಸಿದ್ದಾರೆ. ನವೆಂಬರ್ 30 ರಂದು ಪೆರ್ಡೂರು ಮೇಳದ ಈ ವರ್ಷದ ತಿರುಗಾಟ ಆರಂಭವಾಗಲಿದ್ದು, ಈ ಬಾರಿ ಪ್ರಸಂಗಕರ್ತ ಪವನ್ ಕಿರಣಕೆರೆ ಅವರ ‘ಕೃಷ್ಣ ಕಾದಂಬಿನಿ’ ಪ್ರಸಂಗದೊಂದಿಗೆ ಪೌರಾಣಿಕ ಪ್ರಸಂಗಗಳು ಪ್ರದರ್ಶನವಾಗಲಿದೆ.</p>.<p>ಮೇಳದ ನೂತನ ಪ್ರಸಂಗದ ಕರಪತ್ರಗಳಲ್ಲಿ ಜನ್ಸಾಲೆಯವರ ಭಾವಚಿತ್ರ ಹಾಗೂ ಹೆಸರನ್ನು ನಮೂದಿಸಲಾಗಿತ್ತು. ಇದೀಗ ನಡೆದ ಅಚ್ಚರಿಯ ಬೆಳವಣಿಗೆ ಬಳಿಕ ಧಾರೇಶ್ವರ ಅವರ ಭಾವಚಿತ್ರ ಹಾಗೂ ಹೆಸರನ್ನು ನಮೂದಿಸಲಾಗಿದೆ. 9 ವರ್ಷಗಳ ಬಳಿಕ ಧಾರೇಶ್ವರ ಅವರು ಮತ್ತೆ ಪೆರ್ಡೂರು ಮೇಳಕ್ಕೆ ಭಾಗವತರಾಗಿ ರಂಗಸ್ಥಳ ಏರುವುದು ಯಕ್ಷ ಅಭಿಮಾನಿಗಳಲ್ಲಿ ಖುಷಿಯ ವಿಚಾರವಾದರೆ, ಜನ್ಸಾಲೆಯವರು ಮೇಳದಿಂದ ದಿಢೀರ್ ನಿರ್ಗಮಿಸಿರುವುದು ಅಚ್ಚರಿಗೂ ಕಾರಣವಾಗಿದೆ.</p>.<p>ಕರುಣಾಕರ ಶೆಟ್ಟರ ಆಹ್ವಾನದ ಮೇರೆಗೆ ಮತ್ತೆ ಪೆರ್ಡೂರು ಮೇಳದಲ್ಲಿ ತಿರುಗಾಟ ನಡೆಸಲಿದ್ದೇನೆ ಎಂದು ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಪ್ರತಿಕ್ರಿಯಿಸಿದ್ದಾರೆ.</p>.<p>‘9 ವರ್ಷದಿಂದ ಪೆರ್ಡೂರು ಮೇಳದಲ್ಲಿ ಮಾಡಿರುವ ಕೆಲಸದಲ್ಲಿ ತೃಪ್ತಿ ಇದೆ. ಬೇರೆ ಮೇಳಗಳಿಂದ ಕರೆ ಬಂದಿದ್ದರೂ, ಈಗಾಗಲೇ ಕಲಾವಿದರ ಆಯ್ಕೆ ನಡೆದಿರುವುದರಿಂದ, ನನ್ನಿಂದಾಗಿ ಬೇರೆಯವರಿಗೆ ತೊಂದರೆ ಆಗಬಾರದು ಎನ್ನುವುದಕ್ಕಾಗಿ ಈ ವರ್ಷ ತಿರುಗಾಟ ಮಾಡುವುದಿಲ್ಲ. ಆದರೆ ಯಾವುದೇ ಪ್ರದರ್ಶನಕ್ಕೆ ಪ್ರೀತಿಯಿಂದ ಕರೆ ಬಂದರೂ ಅತಿಥಿಯಾಗಿ ಭಾಗವತಿಕೆಗೆ ಹೋಗುತ್ತೇನೆ’ ಎಂದು ಜನ್ಸಾಲೆ ರಾಘವೇಂದ್ರ ಆಚಾರ್ಯ ಪ್ರತಿಕ್ರಿಯಿಸಿದರು.</p>.<p>‘ತಿರುಗಾಟದ ಅವಧಿಯಲ್ಲಿ ನಾವ್ಯಾರೂ ಬೇರೆ ಖಾಸಗಿ ಪ್ರದರ್ಶನಗಳಿಗೆ ಹೋಗುವುದಿಲ್ಲ ಎನ್ನುವ ತೀರ್ಮಾನಕ್ಕೆ ಕಲಾವಿದರು ಹಾಗೂ ಯಜಮಾನರ ನಡುವೆ ನಡೆದ ಸಭೆಯಲ್ಲಿ ನಾವೆಲ್ಲ ಒಪ್ಪಿದ್ದೇವೆ’ ಎಂದು ಕಲಾವಿದರಾದ ವಿದ್ಯಾಧರ ರಾವ್ ಜಲವಳ್ಳಿ ಹಾಗೂ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಪ್ರತಿಕ್ರಿಯಿಸಿದ್ದಾರೆ.</p>.<p>ಧಾರೇಶ್ವರ ಅವರು ಪ್ರಧಾನ ಭಾಗವತರಾಗಿ ಮತ್ತೆ ಮೇಳದಲ್ಲಿ ಮುಂದುವರಿಯಲಿದ್ದಾರೆ ಎಂದು ಮೇಳದ ಯಜಮಾನ ವೈ. ಕರುಣಾಕರ ಶೆಟ್ಟಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಂದಾಪುರ/ ಹಿರಿಯಡಕ: ಪೆರ್ಡೂರುಅನಂತಪದ್ಮನಾಭ ಯಕ್ಷಗಾನ ಮಂಡಳಿಯ ಈ ವರ್ಷದ ತಿರುಗಾಟಕ್ಕೆ ಪ್ರಧಾನ ಭಾಗವತರಾಗಿ ಸುಬ್ರಹ್ಮಣ್ಯ ಧಾರೇಶ್ವರ ಅವರು ಮತ್ತೆ ರಂಗಸ್ಥಳ ಏರಲಿದ್ದಾರೆ.</p>.<p>ಬಡಗುತಿಟ್ಟಿನ ಪ್ರಸಿದ್ಧ ಡೇರೆ ಮೇಳಗಳಲ್ಲಿ ಒಂದಾದ ಪೆರ್ಡೂರು ಅನಂತಪದ್ಮನಾಭ ಯಕ್ಷಗಾನ ಮಂಡಳಿ ಈ ವರ್ಷದ ತಿರುಗಾಟಕ್ಕೆ ಸಂಪೂರ್ಣ ತಯಾರಿ ನಡೆಸಿದ್ದು, ಕೆಲವೊಂದು ಮುಮ್ಮೇಳ ಕಲಾವಿದರ ಬದಲಾವಣೆ ನಡೆಸಿತ್ತು. ಆದರೆ, ‘ತಿರುಗಾಟ ಪ್ರಾರಂಭಕ್ಕೆ ಕೆಲವೇ ದಿನ ಇದೆ’ ಎನ್ನುವಾಗ ಕಳೆದ 9 ವರ್ಷಗಳಿಂದ ಮೇಳದ ಪ್ರಧಾನ ಭಾಗವತರಾಗಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರು ಮೇಳದಿಂದ ನಿರ್ಗಮಿಸಿದ್ದು, ಈ ತಿರುಗಾಟದಿಂದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ ಅವರು ಮತ್ತೆ ಪ್ರಧಾನ ಭಾಗವತ ಸ್ಥಾನವನ್ನು ಅಲಂಕರಿಸಲಿದ್ದಾರೆ.</p>.<p>ಪ್ರಧಾನ ಭಾಗವತಿಕೆ ಹಾಗೂ ದಕ್ಷ ನಿರ್ದೇಶನದೊಂದಿಗೆ ಪೆರ್ಡೂರು ಮೇಳದ ಶಿವಾನಿ-ಭವಾನಿ, ನಾಗವಲ್ಲಿ, ದಾಮಿನಿ-ಭಾಮಿನಿ, ಸಾವನಿ-ಪಾವನಿ, ಹೀಗೆ ಅನೇಕ ಯಶಸ್ವಿ ಸಾಮಾಜಿಕ ಹಾಗೂ ಪೌರಾಣಿಕ ಪ್ರಸಂಗಗಳು ಯಶಸ್ವಿಯಾಗಲು ಕಾರಣ<br />ರಾದ ಧಾರೇಶ್ವರರು 9 ವರ್ಷಗಳ ಹಿಂದೆ ಪೆರ್ಡೂರು ಮೇಳದಿಂದ ನಿರ್ಗಮಿಸಿ, ಕೇವಲ ಅತಿಥಿ ಕಲಾವಿದರಾಗಿ ಹಾಗೂ ಧಾರೇಶ್ವರ ಯಕ್ಷಬಳಗdಲ್ಲಿ ಭಾಗವಹಿಸುತ್ತಿದ್ದರು.</p>.<p>ಅವರ ಸ್ಥಾನಕ್ಕೆ ಬಡಗುತಿಟ್ಟಿನ ಭಾಗವತ, ಅಸಂಖ್ಯಾತ ಅಭಿಮಾನಿ<br />ಗಳನ್ನು ಹೊಂದಿರುವ ಜನ್ಸಾಲೆ ಮೇಳದ ಯಶಸ್ಸಿಗೆ ಕಾರಣರಾಗಿದ್ದರು. ಇದೀಗ ಅವರು ದಿಢೀರ್ ನಿರ್ಗಮಿಸಿದ್ದಾರೆ. ನವೆಂಬರ್ 30 ರಂದು ಪೆರ್ಡೂರು ಮೇಳದ ಈ ವರ್ಷದ ತಿರುಗಾಟ ಆರಂಭವಾಗಲಿದ್ದು, ಈ ಬಾರಿ ಪ್ರಸಂಗಕರ್ತ ಪವನ್ ಕಿರಣಕೆರೆ ಅವರ ‘ಕೃಷ್ಣ ಕಾದಂಬಿನಿ’ ಪ್ರಸಂಗದೊಂದಿಗೆ ಪೌರಾಣಿಕ ಪ್ರಸಂಗಗಳು ಪ್ರದರ್ಶನವಾಗಲಿದೆ.</p>.<p>ಮೇಳದ ನೂತನ ಪ್ರಸಂಗದ ಕರಪತ್ರಗಳಲ್ಲಿ ಜನ್ಸಾಲೆಯವರ ಭಾವಚಿತ್ರ ಹಾಗೂ ಹೆಸರನ್ನು ನಮೂದಿಸಲಾಗಿತ್ತು. ಇದೀಗ ನಡೆದ ಅಚ್ಚರಿಯ ಬೆಳವಣಿಗೆ ಬಳಿಕ ಧಾರೇಶ್ವರ ಅವರ ಭಾವಚಿತ್ರ ಹಾಗೂ ಹೆಸರನ್ನು ನಮೂದಿಸಲಾಗಿದೆ. 9 ವರ್ಷಗಳ ಬಳಿಕ ಧಾರೇಶ್ವರ ಅವರು ಮತ್ತೆ ಪೆರ್ಡೂರು ಮೇಳಕ್ಕೆ ಭಾಗವತರಾಗಿ ರಂಗಸ್ಥಳ ಏರುವುದು ಯಕ್ಷ ಅಭಿಮಾನಿಗಳಲ್ಲಿ ಖುಷಿಯ ವಿಚಾರವಾದರೆ, ಜನ್ಸಾಲೆಯವರು ಮೇಳದಿಂದ ದಿಢೀರ್ ನಿರ್ಗಮಿಸಿರುವುದು ಅಚ್ಚರಿಗೂ ಕಾರಣವಾಗಿದೆ.</p>.<p>ಕರುಣಾಕರ ಶೆಟ್ಟರ ಆಹ್ವಾನದ ಮೇರೆಗೆ ಮತ್ತೆ ಪೆರ್ಡೂರು ಮೇಳದಲ್ಲಿ ತಿರುಗಾಟ ನಡೆಸಲಿದ್ದೇನೆ ಎಂದು ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಪ್ರತಿಕ್ರಿಯಿಸಿದ್ದಾರೆ.</p>.<p>‘9 ವರ್ಷದಿಂದ ಪೆರ್ಡೂರು ಮೇಳದಲ್ಲಿ ಮಾಡಿರುವ ಕೆಲಸದಲ್ಲಿ ತೃಪ್ತಿ ಇದೆ. ಬೇರೆ ಮೇಳಗಳಿಂದ ಕರೆ ಬಂದಿದ್ದರೂ, ಈಗಾಗಲೇ ಕಲಾವಿದರ ಆಯ್ಕೆ ನಡೆದಿರುವುದರಿಂದ, ನನ್ನಿಂದಾಗಿ ಬೇರೆಯವರಿಗೆ ತೊಂದರೆ ಆಗಬಾರದು ಎನ್ನುವುದಕ್ಕಾಗಿ ಈ ವರ್ಷ ತಿರುಗಾಟ ಮಾಡುವುದಿಲ್ಲ. ಆದರೆ ಯಾವುದೇ ಪ್ರದರ್ಶನಕ್ಕೆ ಪ್ರೀತಿಯಿಂದ ಕರೆ ಬಂದರೂ ಅತಿಥಿಯಾಗಿ ಭಾಗವತಿಕೆಗೆ ಹೋಗುತ್ತೇನೆ’ ಎಂದು ಜನ್ಸಾಲೆ ರಾಘವೇಂದ್ರ ಆಚಾರ್ಯ ಪ್ರತಿಕ್ರಿಯಿಸಿದರು.</p>.<p>‘ತಿರುಗಾಟದ ಅವಧಿಯಲ್ಲಿ ನಾವ್ಯಾರೂ ಬೇರೆ ಖಾಸಗಿ ಪ್ರದರ್ಶನಗಳಿಗೆ ಹೋಗುವುದಿಲ್ಲ ಎನ್ನುವ ತೀರ್ಮಾನಕ್ಕೆ ಕಲಾವಿದರು ಹಾಗೂ ಯಜಮಾನರ ನಡುವೆ ನಡೆದ ಸಭೆಯಲ್ಲಿ ನಾವೆಲ್ಲ ಒಪ್ಪಿದ್ದೇವೆ’ ಎಂದು ಕಲಾವಿದರಾದ ವಿದ್ಯಾಧರ ರಾವ್ ಜಲವಳ್ಳಿ ಹಾಗೂ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಪ್ರತಿಕ್ರಿಯಿಸಿದ್ದಾರೆ.</p>.<p>ಧಾರೇಶ್ವರ ಅವರು ಪ್ರಧಾನ ಭಾಗವತರಾಗಿ ಮತ್ತೆ ಮೇಳದಲ್ಲಿ ಮುಂದುವರಿಯಲಿದ್ದಾರೆ ಎಂದು ಮೇಳದ ಯಜಮಾನ ವೈ. ಕರುಣಾಕರ ಶೆಟ್ಟಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>