<p><strong>ಉಡುಪಿ:</strong> ತಾಯಂದಿರು ತಮ್ಮ ಮಕ್ಕಳಿಗೆ ಭಾರತೀಯ ಸಂಸ್ಕೃತಿಯನ್ನು ಕಲಿಸಿಕೊಡಬೇಕು. ಆ ಮೂಲಕ ಭಾರತೀಯ ಸಂಸ್ಕೃತಿಯನ್ನು ಉಳಿಸುವ ಶಕ್ತಿ ಅವರಿಗಿದೆ. ಜೊತೆಗೆ ಧರ್ಮದ ಮಹತ್ವವನ್ನೂ ಮಕ್ಕಳಿಗೆ ಹೇಳಿಕೊಡಬೇಕು ಎಂದು ರಾಜ್ಯ ಸಭಾ ಸದಸ್ಯೆ ಸುಧಾ ಮೂರ್ತಿ ಹೇಳಿದರು.</p>.<p>ಕೃಷ್ಣ ಮಠದ ಸುತ್ತುಪೌಳಿಗೆ ಅಳವಡಿಸಿರುವ ಕಾಷ್ಠ ಯಾಳಿಯ ಉದ್ಘಾಟನೆಯ ಅಂಗವಾಗಿ ಮಠದ ರಾಜಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ತಾಯಂದಿರಿಗೆ ಬೇಕಾದಷ್ಟು ಶಕ್ತಿ ಇರುತ್ತದೆ. ಆದರೆ ಅವರಿಗೆ ಅದರ ಅರಿವಿರುವುದಿಲ್ಲ. ಮಹಿಳೆಯರು ತಮ್ಮಲ್ಲಿ ಶಕ್ತಿ ಇದೆ ಎಂಬುದನ್ನು ಅರಿತು ಮನಸ್ಸಿನ ಸಂಕೋಲೆಯನ್ನು ತೆಗೆದು ಹಾಕಿ ಸಾಧನೆ ಮಾಡಬೇಕು. ಯಶಸ್ವಿ ಪುರುಷನ ಹಿಂದೆ ಅಲ್ಲ ಜೊತೆಯಲ್ಲಿ ಹೆಂಡತಿ ಇರುತ್ತಾಳೆ ಎಂದರು.<br><br>ಹಣ ಒಂದು ಸಾಧನ ಮಾತ್ರ. ಹಣವೇ ಜೀವನವಲ್ಲ. ಎಷ್ಟೇ ಹಣವಿದ್ದರೂ ಚಿನ್ನದ ಅಕ್ಕಿಯನ್ನು ತಿನ್ನಲು ಸಾಧ್ಯವೇ? ಬದುಕಿನಲ್ಲಿ ಭಕ್ತಿ, ಅಧ್ಯಾತ್ಮ ಇರಬೇಕು. ಅಂತಹ ಮೌಲ್ಯಗಳನ್ನು ಮಕ್ಕಳಿಗೂ ಕಲಿಸಿಕೊಡಬೇಕು ಎಂದು ಹೇಳಿದರು.<br><br>ತಂತ್ರಜ್ಞಾನ ಮತ್ತು ಸಂಸ್ಕೃತಿಗೆ ಸಂಬಂಧವಿಲ್ಲದಿದ್ದರೂ ಇವೆರಡೂ ಬೇಕು. ಬೇರೂ ಬೇಕು, ಆಕಾಶವೂ ಬೇಕು. ಭೂಮಿ, ಆಕಾಶದ ನಡುವೆ ನಾವಿರಬೇಕು ಎಂದರು.</p>.<p>ನಮಗೆಲ್ಲರಿಗೂ ಭಗವದ್ಗೀತೆ ಆದರ್ಶವಾಗಿದೆ. ಬದುಕಲ್ಲಿ ಹೇಗೆ ಇರಬೇಕು ಎಂಬುದನ್ನು ಅದು ಹೇಳಿದೆ. ಸಣ್ಣ ವಯಸ್ಸಿನಿಂದಲೇ ಭಗವದ್ಗೀತೆ ಓದುವುದನ್ನು ರೂಢಿ ಮಾಡಿಕೊಳ್ಳಬೇಕು ಎಂದೂ ತಿಳಿಸಿದರು.</p>.<p>ಅದಮಾರು ಮಠಾಧೀಶ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಮಾತನಾಡಿ, ನಮ್ಮ ದೇಶದಲ್ಲಿ ರಾಮ, ಕೃಷ್ಣ, ಕಾಶಿ ವಿಶ್ವನಾಥ ತಲೆಎತ್ತಿ ನಿಲ್ಲುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದರು.</p>.<p>ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ನಮ್ಮ ದೇಶವು ಆರ್ಥಿಕತೆಯಲ್ಲಿ ಇಡೀ ಜಗತ್ತಿನಲ್ಲೇ ಮೊದಲ ಸ್ಥಾನಕ್ಕೇರಲಿ ಎಂದರು.</p>.<p>ತಮಿಳುನಾಡಿನ ರವಿ ಸ್ಯಾಮ್ ಭಾಗವಹಿಸಿದ್ದರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ದಿನೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.</p>.<div><blockquote>ವಿದೇಶದಲ್ಲಿ ಮನೆ ಕಟ್ಟಬಹುದು ಆದರೆ ಮಠ ಕಟ್ಟುವುದು ಸುಲಭದ ಕೆಲಸವಲ್ಲ. ಆದರೆ ಆ ಕೆಲಸವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ಸ್ವಾಮೀಜಿ ಮಾಡಿದ್ದಾರೆ.</blockquote><span class="attribution">–ಸುಧಾ ಮೂರ್ತಿ, ರಾಜ್ಯಸಭಾ ಸದಸ್ಯೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ತಾಯಂದಿರು ತಮ್ಮ ಮಕ್ಕಳಿಗೆ ಭಾರತೀಯ ಸಂಸ್ಕೃತಿಯನ್ನು ಕಲಿಸಿಕೊಡಬೇಕು. ಆ ಮೂಲಕ ಭಾರತೀಯ ಸಂಸ್ಕೃತಿಯನ್ನು ಉಳಿಸುವ ಶಕ್ತಿ ಅವರಿಗಿದೆ. ಜೊತೆಗೆ ಧರ್ಮದ ಮಹತ್ವವನ್ನೂ ಮಕ್ಕಳಿಗೆ ಹೇಳಿಕೊಡಬೇಕು ಎಂದು ರಾಜ್ಯ ಸಭಾ ಸದಸ್ಯೆ ಸುಧಾ ಮೂರ್ತಿ ಹೇಳಿದರು.</p>.<p>ಕೃಷ್ಣ ಮಠದ ಸುತ್ತುಪೌಳಿಗೆ ಅಳವಡಿಸಿರುವ ಕಾಷ್ಠ ಯಾಳಿಯ ಉದ್ಘಾಟನೆಯ ಅಂಗವಾಗಿ ಮಠದ ರಾಜಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ತಾಯಂದಿರಿಗೆ ಬೇಕಾದಷ್ಟು ಶಕ್ತಿ ಇರುತ್ತದೆ. ಆದರೆ ಅವರಿಗೆ ಅದರ ಅರಿವಿರುವುದಿಲ್ಲ. ಮಹಿಳೆಯರು ತಮ್ಮಲ್ಲಿ ಶಕ್ತಿ ಇದೆ ಎಂಬುದನ್ನು ಅರಿತು ಮನಸ್ಸಿನ ಸಂಕೋಲೆಯನ್ನು ತೆಗೆದು ಹಾಕಿ ಸಾಧನೆ ಮಾಡಬೇಕು. ಯಶಸ್ವಿ ಪುರುಷನ ಹಿಂದೆ ಅಲ್ಲ ಜೊತೆಯಲ್ಲಿ ಹೆಂಡತಿ ಇರುತ್ತಾಳೆ ಎಂದರು.<br><br>ಹಣ ಒಂದು ಸಾಧನ ಮಾತ್ರ. ಹಣವೇ ಜೀವನವಲ್ಲ. ಎಷ್ಟೇ ಹಣವಿದ್ದರೂ ಚಿನ್ನದ ಅಕ್ಕಿಯನ್ನು ತಿನ್ನಲು ಸಾಧ್ಯವೇ? ಬದುಕಿನಲ್ಲಿ ಭಕ್ತಿ, ಅಧ್ಯಾತ್ಮ ಇರಬೇಕು. ಅಂತಹ ಮೌಲ್ಯಗಳನ್ನು ಮಕ್ಕಳಿಗೂ ಕಲಿಸಿಕೊಡಬೇಕು ಎಂದು ಹೇಳಿದರು.<br><br>ತಂತ್ರಜ್ಞಾನ ಮತ್ತು ಸಂಸ್ಕೃತಿಗೆ ಸಂಬಂಧವಿಲ್ಲದಿದ್ದರೂ ಇವೆರಡೂ ಬೇಕು. ಬೇರೂ ಬೇಕು, ಆಕಾಶವೂ ಬೇಕು. ಭೂಮಿ, ಆಕಾಶದ ನಡುವೆ ನಾವಿರಬೇಕು ಎಂದರು.</p>.<p>ನಮಗೆಲ್ಲರಿಗೂ ಭಗವದ್ಗೀತೆ ಆದರ್ಶವಾಗಿದೆ. ಬದುಕಲ್ಲಿ ಹೇಗೆ ಇರಬೇಕು ಎಂಬುದನ್ನು ಅದು ಹೇಳಿದೆ. ಸಣ್ಣ ವಯಸ್ಸಿನಿಂದಲೇ ಭಗವದ್ಗೀತೆ ಓದುವುದನ್ನು ರೂಢಿ ಮಾಡಿಕೊಳ್ಳಬೇಕು ಎಂದೂ ತಿಳಿಸಿದರು.</p>.<p>ಅದಮಾರು ಮಠಾಧೀಶ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಮಾತನಾಡಿ, ನಮ್ಮ ದೇಶದಲ್ಲಿ ರಾಮ, ಕೃಷ್ಣ, ಕಾಶಿ ವಿಶ್ವನಾಥ ತಲೆಎತ್ತಿ ನಿಲ್ಲುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದರು.</p>.<p>ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ನಮ್ಮ ದೇಶವು ಆರ್ಥಿಕತೆಯಲ್ಲಿ ಇಡೀ ಜಗತ್ತಿನಲ್ಲೇ ಮೊದಲ ಸ್ಥಾನಕ್ಕೇರಲಿ ಎಂದರು.</p>.<p>ತಮಿಳುನಾಡಿನ ರವಿ ಸ್ಯಾಮ್ ಭಾಗವಹಿಸಿದ್ದರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ದಿನೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.</p>.<div><blockquote>ವಿದೇಶದಲ್ಲಿ ಮನೆ ಕಟ್ಟಬಹುದು ಆದರೆ ಮಠ ಕಟ್ಟುವುದು ಸುಲಭದ ಕೆಲಸವಲ್ಲ. ಆದರೆ ಆ ಕೆಲಸವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ಸ್ವಾಮೀಜಿ ಮಾಡಿದ್ದಾರೆ.</blockquote><span class="attribution">–ಸುಧಾ ಮೂರ್ತಿ, ರಾಜ್ಯಸಭಾ ಸದಸ್ಯೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>