<p><strong>ಉಡುಪಿ:</strong> ಭಗವದ್ಗೀತೆಯು ಎಲ್ಲರ ಹೃದಯದಲ್ಲಿ ಅವ್ಯಕ್ತವಾಗಿದೆ. ಅದನ್ನು ವ್ಯಕ್ತಗೊಳಿಸುವುದು ನಮ್ಮ ಕರ್ತವ್ಯ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.</p>.<p>ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುವರ್ಣ ಗೀತಾ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಮ್ಮಲ್ಲಿ ಸುಪ್ತವಾದ ಭಗವದ್ಗೀತೆಯ ಅಸ್ತಿತ್ವವನ್ನು ಗುರುತಿಸಿ ಜಾಗೃತಗೊಳಿಸಿದರೆ, ಗೀತಾ ಪ್ರಚಾರ ಸಾಧ್ಯ. ಅದಕ್ಕಾಗಿ ಎಲ್ಲರೂ ಕಟಿಬದ್ಧರಾಗಬೇಕು ಎಂದೂ ಅವರು ಅಭಿಪ್ರಾಯಪಟ್ಟರು.</p>.<p>ಕೋಟಿ ಗೀತಾ ಲೇಖನ ಯಜ್ಞವನ್ನು ಘೋಷಿಸುವಾಗ ನಮಗೆ ಹಿಂಜರಿಕೆ ಇತ್ತು. ಆದರೆ ಅನಂತರ ಜನರಿಂದ ವ್ಯಕ್ತವಾದ ಪ್ರತಿಕ್ರಿಯೆ ಅದ್ಭುತವಾಗಿತ್ತು. ಅದನ್ನು ಇನ್ನೂ ಎರಡು ವರ್ಷಕ್ಕೆ ವಿಸ್ತರಿಸಿದ್ದೇವೆ ಎಂದು ಹೇಳಿದರು.</p>.<p>ಸಮಗ್ರ ಭಗವದ್ಗೀತೆಯ ಶಾಶ್ವತ ಪ್ರಚಾರಕ್ಕಾಗಿ ಗೀತಾ ಮಂದಿರವನ್ನು ನಿರ್ಮಿಸಿದ್ದೇವೆ. ಕೃಷ್ಣನ ಸಂದೇಶದ ಜ್ಞಾನ ಭಕ್ತರಿಗೆ ದೊರಕಬೇಕೆಂಬುದು ಅದರ ಉದ್ದೇಶವಾಗಿದೆ. ಉಡುಪಿಯು ಅನ್ನಬ್ರಹ್ಮನ ಜೊತೆ ಜ್ಞಾನ ಬ್ರಹ್ಮನ ಕ್ಷೇತ್ರವೂ ಹೌದು ಎಂದರು.</p>.<p>ವ್ಯಾಸರಾಜ ಮಠದ ವಿದ್ಯಾಶ್ರೀಶತೀರ್ಥ ಶ್ರೀಪಾದರು ಮಾತನಾಡಿ, ಸಕಲ ವೇದಗಳ ಸಾರ, ಸರ್ವಸ್ವವನ್ನು ಶ್ರೀಕೃಷ್ಣನು ಕೇವಲ 700 ಶ್ಲೋಕಗಳಲ್ಲಿ ಕೊಟ್ಟಿದ್ದಾನೆ. ಅಂತಹ ಭಗವದ್ಗೀತೆಯನ್ನು ಅರ್ಜುನನಿಗೆ ರಣರಂಗದಲ್ಲಿ ಉಪದೇಶ ಮಾಡಿದ್ದಾನೆ ಎಂದು ತಿಳಿಸಿದರು.</p>.<p>ಪ್ರತಿಯೊಬ್ಬ ವ್ಯಕ್ತಿಯೂ ಜೀವನ ಸಂಗ್ರಾಮದಲ್ಲಿ ತೊಡಗಿದ್ದಾನೆ. ಇಡೀ ಪರಿವಾರವೇ ಒಂದಲ್ಲ ಒಂದು ರೀತಿಯಲ್ಲಿ ಯುದ್ಧಕ್ಷೇತ್ರವಾಗಿದೆ. ಇಂದು ಇಡೀ ಜಗತ್ತು ಯುದ್ಧ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಭಯವನ್ನು ಹೋಗಲಾಡಿಸಲು ಭಗವದ್ಗೀತೆಯಿಂದ ಮಾತ್ರ ಸಾಧ್ಯ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಭಗವದ್ಗೀತೆಯು ಎಲ್ಲರ ಹೃದಯದಲ್ಲಿ ಅವ್ಯಕ್ತವಾಗಿದೆ. ಅದನ್ನು ವ್ಯಕ್ತಗೊಳಿಸುವುದು ನಮ್ಮ ಕರ್ತವ್ಯ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.</p>.<p>ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುವರ್ಣ ಗೀತಾ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಮ್ಮಲ್ಲಿ ಸುಪ್ತವಾದ ಭಗವದ್ಗೀತೆಯ ಅಸ್ತಿತ್ವವನ್ನು ಗುರುತಿಸಿ ಜಾಗೃತಗೊಳಿಸಿದರೆ, ಗೀತಾ ಪ್ರಚಾರ ಸಾಧ್ಯ. ಅದಕ್ಕಾಗಿ ಎಲ್ಲರೂ ಕಟಿಬದ್ಧರಾಗಬೇಕು ಎಂದೂ ಅವರು ಅಭಿಪ್ರಾಯಪಟ್ಟರು.</p>.<p>ಕೋಟಿ ಗೀತಾ ಲೇಖನ ಯಜ್ಞವನ್ನು ಘೋಷಿಸುವಾಗ ನಮಗೆ ಹಿಂಜರಿಕೆ ಇತ್ತು. ಆದರೆ ಅನಂತರ ಜನರಿಂದ ವ್ಯಕ್ತವಾದ ಪ್ರತಿಕ್ರಿಯೆ ಅದ್ಭುತವಾಗಿತ್ತು. ಅದನ್ನು ಇನ್ನೂ ಎರಡು ವರ್ಷಕ್ಕೆ ವಿಸ್ತರಿಸಿದ್ದೇವೆ ಎಂದು ಹೇಳಿದರು.</p>.<p>ಸಮಗ್ರ ಭಗವದ್ಗೀತೆಯ ಶಾಶ್ವತ ಪ್ರಚಾರಕ್ಕಾಗಿ ಗೀತಾ ಮಂದಿರವನ್ನು ನಿರ್ಮಿಸಿದ್ದೇವೆ. ಕೃಷ್ಣನ ಸಂದೇಶದ ಜ್ಞಾನ ಭಕ್ತರಿಗೆ ದೊರಕಬೇಕೆಂಬುದು ಅದರ ಉದ್ದೇಶವಾಗಿದೆ. ಉಡುಪಿಯು ಅನ್ನಬ್ರಹ್ಮನ ಜೊತೆ ಜ್ಞಾನ ಬ್ರಹ್ಮನ ಕ್ಷೇತ್ರವೂ ಹೌದು ಎಂದರು.</p>.<p>ವ್ಯಾಸರಾಜ ಮಠದ ವಿದ್ಯಾಶ್ರೀಶತೀರ್ಥ ಶ್ರೀಪಾದರು ಮಾತನಾಡಿ, ಸಕಲ ವೇದಗಳ ಸಾರ, ಸರ್ವಸ್ವವನ್ನು ಶ್ರೀಕೃಷ್ಣನು ಕೇವಲ 700 ಶ್ಲೋಕಗಳಲ್ಲಿ ಕೊಟ್ಟಿದ್ದಾನೆ. ಅಂತಹ ಭಗವದ್ಗೀತೆಯನ್ನು ಅರ್ಜುನನಿಗೆ ರಣರಂಗದಲ್ಲಿ ಉಪದೇಶ ಮಾಡಿದ್ದಾನೆ ಎಂದು ತಿಳಿಸಿದರು.</p>.<p>ಪ್ರತಿಯೊಬ್ಬ ವ್ಯಕ್ತಿಯೂ ಜೀವನ ಸಂಗ್ರಾಮದಲ್ಲಿ ತೊಡಗಿದ್ದಾನೆ. ಇಡೀ ಪರಿವಾರವೇ ಒಂದಲ್ಲ ಒಂದು ರೀತಿಯಲ್ಲಿ ಯುದ್ಧಕ್ಷೇತ್ರವಾಗಿದೆ. ಇಂದು ಇಡೀ ಜಗತ್ತು ಯುದ್ಧ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಭಯವನ್ನು ಹೋಗಲಾಡಿಸಲು ಭಗವದ್ಗೀತೆಯಿಂದ ಮಾತ್ರ ಸಾಧ್ಯ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>