<p><strong>ಉಡುಪಿ:</strong> ಮಂಗಳೂರಿನಲ್ಲಿ ನಡೆದ ಗೃಹಸಚಿವರ ಸಭೆಯಲ್ಲಿ ಧಮ್ಕಿ ಹಾಕಿದವರನ್ನು ಬಂಧಿಸುವ ತಾಕತ್ತು ಈ ಸರ್ಕಾರಕ್ಕೆ ಇಲ್ಲ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.</p>.<p>ಸುದ್ದಿಗಾರರ ಜೊತೆ ಇಲ್ಲಿ ಸೋಮವಾರ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್ ವಿರುದ್ಧ ಬರೆದರೆ ಅಂಥವರನ್ನು ಬಂಧಿಸಲಾಗುತ್ತದೆ. ಹಿಂದೂ ಸಮಾಜದ ಪರವಾಗಿರುವವರ ಮೇಲೆ ಕೇಸು ದಾಖಲಿಸಲಾಗುತ್ತದೆ ಎಂದು ಅವರು ಆರೋಪಿಸಿದರು.</p>.<p>ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಯಾವಾಗೆಲ್ಲ ಮುಖ್ಯಮಂತ್ರಿ ಆಗಿದ್ದಾರೋ ಆಗೆಲ್ಲಾ ಹಿಂದೂಗಳ ಮೇಳೆ ನಿರಂತರ ದಾಳಿ ನಡೆಯುತ್ತಿರುತ್ತದೆ ಎಂದರು.</p>.<p>ಹಿಂದೂಗಳ ಪರವಾಗಿ ಇರುವವರನ್ನು ಬಂಧಿಸಲು ಕೋಮು ನಿಗ್ರಹದಳ ರಚಿಸಲಾಗುತ್ತಿದೆ. ಎಲ್ಲಾ ಸಮುದಾಯಗಳಿಗೆ ಸರಿಯಾದ ನ್ಯಾಯ ಕೊಟ್ಟು, ಇಂತಹ ದಳ ರಚಿಸಲಿ. ಆದರೆ ಕಾಂಗ್ರೆಸ್ ಸರ್ಕಾರದ ಈ ದಳ ಒಂದೇ ಸಮುದಾಯಕ್ಕೆ ಸೀಮಿತವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮಂಗಳೂರಿನಲ್ಲಿ ನಡೆದ ಗೃಹಸಚಿವರ ಸಭೆಯಲ್ಲಿ ಧಮ್ಕಿ ಹಾಕಿದವರನ್ನು ಬಂಧಿಸುವ ತಾಕತ್ತು ಈ ಸರ್ಕಾರಕ್ಕೆ ಇಲ್ಲ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.</p>.<p>ಸುದ್ದಿಗಾರರ ಜೊತೆ ಇಲ್ಲಿ ಸೋಮವಾರ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್ ವಿರುದ್ಧ ಬರೆದರೆ ಅಂಥವರನ್ನು ಬಂಧಿಸಲಾಗುತ್ತದೆ. ಹಿಂದೂ ಸಮಾಜದ ಪರವಾಗಿರುವವರ ಮೇಲೆ ಕೇಸು ದಾಖಲಿಸಲಾಗುತ್ತದೆ ಎಂದು ಅವರು ಆರೋಪಿಸಿದರು.</p>.<p>ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಯಾವಾಗೆಲ್ಲ ಮುಖ್ಯಮಂತ್ರಿ ಆಗಿದ್ದಾರೋ ಆಗೆಲ್ಲಾ ಹಿಂದೂಗಳ ಮೇಳೆ ನಿರಂತರ ದಾಳಿ ನಡೆಯುತ್ತಿರುತ್ತದೆ ಎಂದರು.</p>.<p>ಹಿಂದೂಗಳ ಪರವಾಗಿ ಇರುವವರನ್ನು ಬಂಧಿಸಲು ಕೋಮು ನಿಗ್ರಹದಳ ರಚಿಸಲಾಗುತ್ತಿದೆ. ಎಲ್ಲಾ ಸಮುದಾಯಗಳಿಗೆ ಸರಿಯಾದ ನ್ಯಾಯ ಕೊಟ್ಟು, ಇಂತಹ ದಳ ರಚಿಸಲಿ. ಆದರೆ ಕಾಂಗ್ರೆಸ್ ಸರ್ಕಾರದ ಈ ದಳ ಒಂದೇ ಸಮುದಾಯಕ್ಕೆ ಸೀಮಿತವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>