ಬೆಂಗಳೂರು ನೆರೆ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿಲ್ಲ. ಶತಮಾನಗಳಲ್ಲಿ ಕಂಡು ಕೇಳದ ಮಳೆ ಏಕಾಏಕಿ ಸುರಿದ ಪರಿಣಾಮ ಸಮಸ್ಯೆ ಉಂಟಾಗಿದೆ. ಪರಿಸ್ಥಿತಿಯನ್ನು ಮತ್ತಷ್ಟು ಸಮರ್ಥವಾಗಿ ನಿಭಾಯಿಸಬಹುದಿತ್ತು ಎಂಬುದು ಜನರ ಭಾವನೆ. ಆದರೆ, ಪ್ರಕೃತಿಯ ಮುಂದೆ ಎಲ್ಲರೂ ತಲೆ ಬಾಗಬೇಕು. ಸವಾಲುಗಳ ನಡುವೆ ಇಂಧನ ಇಲಾಖೆ 1500 ವಿದ್ಯುತ್ ಕಂಬಗಳನ್ನು ಬದಲಾವಣೆ ಮಾಡಿದೆ. ಸರ್ಕಾರವೂ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುತ್ತಿದೆ ಎಂದರು.