<p><strong>ಉಡುಪಿ:</strong> ಹೇಳಿಕೆಗಳನ್ನು ಕೊಡುವ ಸಿದ್ದರಾಮಯ್ಯನವರಿಗೆ ಪ್ರತಿಭಟನೆಯನ್ನು ಸಹಿಸಿಕೊಳ್ಳುವ ಶಕ್ತಿಯೂ ಇರಬೇಕು. ಬೇಕಾಬಿಟ್ಟಿ ಹೇಳಿಕೆ ನೀಡಿ ಜೀರ್ಣಿಸಿಕೊಳ್ಳುತ್ತೇನೆ ಎಂಬ ಕಾಲ ಹೊರಟು ಹೋಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.</p>.<p>ಶುಕ್ರವಾರ ಮಣಿಪಾಲದಲ್ಲಿ ಮಾತನಾಡಿ, ಸಿದ್ದರಾಮಯ್ಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಹೇಳಿಕೊಟ್ಟು ಮಾಡಿಸುತ್ತಿರುವುದಲ್ಲ; ಜನರ ಮನಸ್ಸಿನಲ್ಲಿರುವ ಭಾವನೆ ಸ್ಫೋಟಗೊಂಡು ನಡೆಯುತ್ತಿವೆ. ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಯುವ ಸಮುದಾಯ ಸಹಿಸಿಕೊಳ್ಳುವುದಿಲ್ಲ ಎಂದರು.</p>.<p>ಸಿದ್ದರಾಮಯ್ಯಗೆ ಹಣೆ ಮೇಲೆ ಕುಂಕುಮ ಇಟ್ಟವರನ್ನು ಕಂಡರೆ ಆಗುವುದಿಲ್ಲ. ಮುಸ್ಲಿಮರ ಪ್ರದೇಶಗಳಲ್ಲಿ ಸಾವರ್ಕರ್ ಭಾವಚಿತ್ರ ಯಾಕೆ ಹಾಕಬೇಕು ಎಂದು ಕೇಳುತ್ತಾರೆ. ಅರ್ಧಂಬರ್ಧ ಇತಿಹಾಸ ತಿಳಿದುಕೊಂಡು ಸಾವರ್ಕರ್ ಬಗ್ಗೆ ಲಘುವಾಗಿ ಮಾತನಾಡುತ್ತಾರೆ ಎಂದು ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದರು.</p>.<p>ಸಮಾಜವಾದಿ ಎಂದು ಕರೆಸಿಕೊಂಡು ಲಕ್ಷಾಂತರ ಜನರನ್ನು ಸೇರಿಸಿ ಹುಟ್ಟುಹಬ್ಬ ಮಾಡಿಕೊಳ್ಳುತ್ತಾರೆ. ಸಾವರ್ಕರ್ ಬಗ್ಗೆ ತಿಳಿಯಬೇಕಾದರೆ ಪುರುಸೊತ್ತು ಮಾಡಿಕೊಂಡು ಅಂಡಮಾನ್ ಜೈಲಿಗೆ ಭೇಟಿನೀಡಲಿ ಎಂದು ಸಲಹೆ ನೀಡಿದರು.</p>.<p>ಸಾವರ್ಕರ್ ದೇಶದ ರಾಷ್ಟ್ರೀಯತೆಯ ಪ್ರತೀಕವಾಗಿದ್ದು ರಾಜ್ಯದೆಲ್ಲೆಡೆ ಅವರ ಕುರಿತಾಗಿ ಕಾರ್ಯಕ್ರಮಗಳು ನಡೆಯಲಿವೆ. ಬ್ಯಾನರ್ಗಳು, ಫ್ಲೆಕ್ಸ್ಗಳು, ಪುತ್ಥಳಿಗಳು, ರಸ್ತೆಗಳು ನಿರ್ಮಾಣವಾಗಲಿವೆ. ಸಿದ್ದರಾಮಯ್ಯಗೆ ಹಿಂದೂ ಕಾರ್ಯಕರ್ತರಿಂದ ಜೀವ ಬೆದರಿಕೆ ಇದ್ದರೆ ದೂರು ಕೊಡಲಿ; ಸರ್ಕಾರ ಅಗತ್ಯ ಭದ್ರತೆ ನೀಡಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಹೇಳಿಕೆಗಳನ್ನು ಕೊಡುವ ಸಿದ್ದರಾಮಯ್ಯನವರಿಗೆ ಪ್ರತಿಭಟನೆಯನ್ನು ಸಹಿಸಿಕೊಳ್ಳುವ ಶಕ್ತಿಯೂ ಇರಬೇಕು. ಬೇಕಾಬಿಟ್ಟಿ ಹೇಳಿಕೆ ನೀಡಿ ಜೀರ್ಣಿಸಿಕೊಳ್ಳುತ್ತೇನೆ ಎಂಬ ಕಾಲ ಹೊರಟು ಹೋಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.</p>.<p>ಶುಕ್ರವಾರ ಮಣಿಪಾಲದಲ್ಲಿ ಮಾತನಾಡಿ, ಸಿದ್ದರಾಮಯ್ಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಹೇಳಿಕೊಟ್ಟು ಮಾಡಿಸುತ್ತಿರುವುದಲ್ಲ; ಜನರ ಮನಸ್ಸಿನಲ್ಲಿರುವ ಭಾವನೆ ಸ್ಫೋಟಗೊಂಡು ನಡೆಯುತ್ತಿವೆ. ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಯುವ ಸಮುದಾಯ ಸಹಿಸಿಕೊಳ್ಳುವುದಿಲ್ಲ ಎಂದರು.</p>.<p>ಸಿದ್ದರಾಮಯ್ಯಗೆ ಹಣೆ ಮೇಲೆ ಕುಂಕುಮ ಇಟ್ಟವರನ್ನು ಕಂಡರೆ ಆಗುವುದಿಲ್ಲ. ಮುಸ್ಲಿಮರ ಪ್ರದೇಶಗಳಲ್ಲಿ ಸಾವರ್ಕರ್ ಭಾವಚಿತ್ರ ಯಾಕೆ ಹಾಕಬೇಕು ಎಂದು ಕೇಳುತ್ತಾರೆ. ಅರ್ಧಂಬರ್ಧ ಇತಿಹಾಸ ತಿಳಿದುಕೊಂಡು ಸಾವರ್ಕರ್ ಬಗ್ಗೆ ಲಘುವಾಗಿ ಮಾತನಾಡುತ್ತಾರೆ ಎಂದು ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದರು.</p>.<p>ಸಮಾಜವಾದಿ ಎಂದು ಕರೆಸಿಕೊಂಡು ಲಕ್ಷಾಂತರ ಜನರನ್ನು ಸೇರಿಸಿ ಹುಟ್ಟುಹಬ್ಬ ಮಾಡಿಕೊಳ್ಳುತ್ತಾರೆ. ಸಾವರ್ಕರ್ ಬಗ್ಗೆ ತಿಳಿಯಬೇಕಾದರೆ ಪುರುಸೊತ್ತು ಮಾಡಿಕೊಂಡು ಅಂಡಮಾನ್ ಜೈಲಿಗೆ ಭೇಟಿನೀಡಲಿ ಎಂದು ಸಲಹೆ ನೀಡಿದರು.</p>.<p>ಸಾವರ್ಕರ್ ದೇಶದ ರಾಷ್ಟ್ರೀಯತೆಯ ಪ್ರತೀಕವಾಗಿದ್ದು ರಾಜ್ಯದೆಲ್ಲೆಡೆ ಅವರ ಕುರಿತಾಗಿ ಕಾರ್ಯಕ್ರಮಗಳು ನಡೆಯಲಿವೆ. ಬ್ಯಾನರ್ಗಳು, ಫ್ಲೆಕ್ಸ್ಗಳು, ಪುತ್ಥಳಿಗಳು, ರಸ್ತೆಗಳು ನಿರ್ಮಾಣವಾಗಲಿವೆ. ಸಿದ್ದರಾಮಯ್ಯಗೆ ಹಿಂದೂ ಕಾರ್ಯಕರ್ತರಿಂದ ಜೀವ ಬೆದರಿಕೆ ಇದ್ದರೆ ದೂರು ಕೊಡಲಿ; ಸರ್ಕಾರ ಅಗತ್ಯ ಭದ್ರತೆ ನೀಡಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>