<p><strong>ಉಡುಪಿ: </strong>ಪ್ರಧಾನಿ ನರೇಂದ್ರ ಮೋದಿ ಮಾದರಿಯ ಆಡಳಿತ ರಾಜ್ಯದಲ್ಲಿ ಜಾರಿಯಾಗಬೇಕು ಎಂಬ ಆಶಯದಿಂದ ಆಡಳಿತದಲ್ಲಿ ಹೊಸತನ ಹಾಗೂ ಚುರುಕುತನ ತರಲು ಹೊಸಬರಿಗೆ ಹೊಸ ಖಾತೆಗಳನ್ನು ನೀಡಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ ಹೇಳಿದರು.</p>.<p>ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮಹತ್ವದ ಖಾತೆ ನೀಡುವ ಮೂಲಕ ದೊಡ್ಡ ಜವಾಬ್ದಾರಿ ವಹಿಸಿದ್ದು, ಸಮರ್ಥವಾಗಿ ನಿಭಾಯಿಸುತ್ತೇನೆ. ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.</p>.<p>ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ಹಳೆಯ ಬೇಡಿಕೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನೆಲ, ಜಲ ಹಾಗೂ ಭಾಷೆಯ ವಿಚಾರ ಬಂದಾಗ ರಾಜಿ ಪ್ರಶ್ನೆ ಇಲ್ಲ. ಭಾಷೆ ಹಾಗೂ ಸಂಸ್ಕೃತಿ ಒಟ್ಟಾಗಿ ಸಾಗಬೇಕು. ತುಳು ಬಾಷೆ ಹಾಗೂ ಕರಾವಳಿ ಸಂಸ್ಕೃತಿಯ ಉಳಿವಿಗೆ ವಿಶೇಷ ಒತ್ತು ನೀಡಲಾಗುವುದು. ಜತೆಗೆ ಖಾತೆಯ ಜವಾಬ್ದಾರಿ, ಆಡತಳಿತದ ನಿರ್ವಹಣೆ ಹಾಗೂ ಜನಸಾಮಾನ್ಯರ ನಿರೀಕ್ಷೆಗಳಿಗೆ ಬದ್ಧನಾಗಿ ಕೆಲಸ ಮಾಡುತ್ತೇನೆ ಎಂದರು.</p>.<p><a href="https://www.prajavani.net/sports/sports-extra/tokyo-olympics-javelin-thrower-neeraj-chopra-scripts-history-wins-first-ever-gold-medal-for-india-in-855562.html" itemprop="url">Olympics: ಐತಿಹಾಸಿಕ ಕ್ಷಣ; ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಪ್ರಧಾನಿ ನರೇಂದ್ರ ಮೋದಿ ಮಾದರಿಯ ಆಡಳಿತ ರಾಜ್ಯದಲ್ಲಿ ಜಾರಿಯಾಗಬೇಕು ಎಂಬ ಆಶಯದಿಂದ ಆಡಳಿತದಲ್ಲಿ ಹೊಸತನ ಹಾಗೂ ಚುರುಕುತನ ತರಲು ಹೊಸಬರಿಗೆ ಹೊಸ ಖಾತೆಗಳನ್ನು ನೀಡಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ ಹೇಳಿದರು.</p>.<p>ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮಹತ್ವದ ಖಾತೆ ನೀಡುವ ಮೂಲಕ ದೊಡ್ಡ ಜವಾಬ್ದಾರಿ ವಹಿಸಿದ್ದು, ಸಮರ್ಥವಾಗಿ ನಿಭಾಯಿಸುತ್ತೇನೆ. ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.</p>.<p>ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ಹಳೆಯ ಬೇಡಿಕೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನೆಲ, ಜಲ ಹಾಗೂ ಭಾಷೆಯ ವಿಚಾರ ಬಂದಾಗ ರಾಜಿ ಪ್ರಶ್ನೆ ಇಲ್ಲ. ಭಾಷೆ ಹಾಗೂ ಸಂಸ್ಕೃತಿ ಒಟ್ಟಾಗಿ ಸಾಗಬೇಕು. ತುಳು ಬಾಷೆ ಹಾಗೂ ಕರಾವಳಿ ಸಂಸ್ಕೃತಿಯ ಉಳಿವಿಗೆ ವಿಶೇಷ ಒತ್ತು ನೀಡಲಾಗುವುದು. ಜತೆಗೆ ಖಾತೆಯ ಜವಾಬ್ದಾರಿ, ಆಡತಳಿತದ ನಿರ್ವಹಣೆ ಹಾಗೂ ಜನಸಾಮಾನ್ಯರ ನಿರೀಕ್ಷೆಗಳಿಗೆ ಬದ್ಧನಾಗಿ ಕೆಲಸ ಮಾಡುತ್ತೇನೆ ಎಂದರು.</p>.<p><a href="https://www.prajavani.net/sports/sports-extra/tokyo-olympics-javelin-thrower-neeraj-chopra-scripts-history-wins-first-ever-gold-medal-for-india-in-855562.html" itemprop="url">Olympics: ಐತಿಹಾಸಿಕ ಕ್ಷಣ; ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>