ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ಹಳೆಯ ಬೇಡಿಕೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನೆಲ, ಜಲ ಹಾಗೂ ಭಾಷೆಯ ವಿಚಾರ ಬಂದಾಗ ರಾಜಿ ಪ್ರಶ್ನೆ ಇಲ್ಲ. ಭಾಷೆ ಹಾಗೂ ಸಂಸ್ಕೃತಿ ಒಟ್ಟಾಗಿ ಸಾಗಬೇಕು. ತುಳು ಬಾಷೆ ಹಾಗೂ ಕರಾವಳಿ ಸಂಸ್ಕೃತಿಯ ಉಳಿವಿಗೆ ವಿಶೇಷ ಒತ್ತು ನೀಡಲಾಗುವುದು. ಜತೆಗೆ ಖಾತೆಯ ಜವಾಬ್ದಾರಿ, ಆಡತಳಿತದ ನಿರ್ವಹಣೆ ಹಾಗೂ ಜನಸಾಮಾನ್ಯರ ನಿರೀಕ್ಷೆಗಳಿಗೆ ಬದ್ಧನಾಗಿ ಕೆಲಸ ಮಾಡುತ್ತೇನೆ ಎಂದರು.