<p><strong>ಉಡುಪಿ</strong>: ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏಕಾಏಕಿ ಏರಿಕೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಮೇಲೆ ಹೊರೆ ಹೊರಿಸಿದ್ದಾರೆ ಎಂದು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದರು.</p><p>ಬಿಜೆಪಿ ಉಡುಪಿ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದರೆ, ಉಳಿದೆಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತದೆ ಎಂದು ಈ ಹಿಂದೆ ಸಿದ್ದರಾಮಯ್ಯ ಅವರು ಹೇಳಿದ್ದರು. ಈಗ ಅವರೇ ಅದನ್ನು ಮರೆತಿದ್ದಾರೆ ಎಂದರು.</p><p>ಉಳಿದ ರಾಜ್ಯಗಳಿಗೆ ಸರಿ ಸಮಾನವಾಗಿ ಬೆಲೆ ಏರಿಕೆ ಮಾಡಿದ್ದೇವೆ ಎಂದು ಅವರು ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.</p><p>ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪಾಲ್ಗೊಂಡಿದ್ದರು.</p><p>ಪ್ರತಿಭಟನಕಾರರು ಕಡಿಯಾಳಿ ಬಳಿ, ಮಣಿಪಾಲ– ಉಡುಪಿ ರಸ್ತೆಯಲ್ಲಿ ಅಲ್ಪಕಾಲ ವಾಹನಗಳ ಸಂಚಾರಕ್ಕೆ ತಡೆಯೊಡ್ಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏಕಾಏಕಿ ಏರಿಕೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಮೇಲೆ ಹೊರೆ ಹೊರಿಸಿದ್ದಾರೆ ಎಂದು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದರು.</p><p>ಬಿಜೆಪಿ ಉಡುಪಿ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದರೆ, ಉಳಿದೆಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತದೆ ಎಂದು ಈ ಹಿಂದೆ ಸಿದ್ದರಾಮಯ್ಯ ಅವರು ಹೇಳಿದ್ದರು. ಈಗ ಅವರೇ ಅದನ್ನು ಮರೆತಿದ್ದಾರೆ ಎಂದರು.</p><p>ಉಳಿದ ರಾಜ್ಯಗಳಿಗೆ ಸರಿ ಸಮಾನವಾಗಿ ಬೆಲೆ ಏರಿಕೆ ಮಾಡಿದ್ದೇವೆ ಎಂದು ಅವರು ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.</p><p>ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪಾಲ್ಗೊಂಡಿದ್ದರು.</p><p>ಪ್ರತಿಭಟನಕಾರರು ಕಡಿಯಾಳಿ ಬಳಿ, ಮಣಿಪಾಲ– ಉಡುಪಿ ರಸ್ತೆಯಲ್ಲಿ ಅಲ್ಪಕಾಲ ವಾಹನಗಳ ಸಂಚಾರಕ್ಕೆ ತಡೆಯೊಡ್ಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>