ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ರಾಜ್ಯಕ್ಕೆ ಕೊಡಬೇಕಾದ ಕಲ್ಲಿದ್ದಲು ಪಾಲನ್ನು ನೀಡಬೇಕು, ಒಡಿಶಾ ಹಾಗೂ ಮಹಾರಾಷ್ಟ್ರದಿಂದ ಬರಬೇಕಾದ ಕಲ್ಲಿದ್ದಲು ಪೂರೈಸಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದು, ನಾಲ್ಕೈದು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗುವುದು. ಆತಂಕಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲ ಎಂದು ಸುನಿಲ್ ಕುಮಾರ್ ತಿಳಿಸಿದರು.