ಮಾರ್ಚ್ 10ರಿಂದ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ರಾಜಕೀಯ ಚುನಾವಣಾ ಪ್ರಚಾರ ಸಭೆ, ಸಮಾರಂಭಗಳಲ್ಲಿ ಸರ್ಕಾರಿ ನೌಕರರು ಅಧಿಕೃತವಾಗಿ ಭಾಗವಹಿಸಲು ಅವಕಾಶವಿರುವುದಿಲ್ಲ. ಆದರೂ, ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಭಾಷಣ ಮಾಡಿ, ಪ್ರಚಾರ ಕಾರ್ಯ ಕೈಗೊಂಡ ಆರೋಪದ ಮೇಲೆ ಸುಂದರ್ ಅವರನ್ನು ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿ ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.