ಸಾಂಪ್ರದಾಯಿಕ ಮೀನುಗಾರರು ಆಳಸಮುದ್ರಕ್ಕೆ ತೆರಳಿ ಮೀನುಗಾರಿಕೆ ಮಾಡಲು ಸಾಧ್ಯವಿಲ್ಲ. ಹಾಗಾಗಿ, ಸಮುದ್ರದ ಬದಿಯಲ್ಲಿ ನಿರ್ಧಿಷ್ಟ ಪ್ರದೇಶದಲ್ಲಿ ಮಾತ್ರ ಮೀನುಗಾರಿಕೆ ಮಾಡುತ್ತೇವೆ. ಆದರೆ, ಈಗ ತ್ರಿಸೆವೆಂಟಿ ಬೋಟ್ಗಳು ಸಾಂಪ್ರದಾಯಿಕ ಮೀನುಗಾರಿಕೆ ನಡೆಯುವ ಜಾಗವನ್ನು ಅತಿಕ್ರಮಿಸಿ ಮೀನುಗಾರಿಕೆ ಮಾಡುತ್ತಿದ್ದಾರೆ. ಪರಿಣಾಮ ನಾಡದೋಣಿ ಮೀನುಗಾರರು ಮೀನು ಸಿಗದೆ ಬರಿಗೈಲಿ ತೀರಕ್ಕೆ ಮರಳುವಂತಾಗಿದೆ ಎಂದು ಮುಖಂಡ ಚಂದ್ರಶೇಖರ ಕರ್ಕೇರಾ ಆಕ್ರೋಶ ವ್ಯಕ್ತಪಡಿಸಿದರು.