ಸೋಮವರ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನ ಭತ್ತ ಕಟಾವು ಪ್ರಕ್ರಿಯೆ ಪ್ರಾರಂಭವಾಗಿದ್ದು, ಮಾರುಕಟ್ಟೆಗೆ ಹಂತಹಂತವಾಗಿ ಭತ್ತದ ಆವಕ ಹೆಚ್ಚಾಗುತ್ತಿದೆ. ಸಧ್ಯ ಸರಾಸರಿ ಕ್ವಿಂಟಲ್ಗೆ ₹ 1,650ರ ದರದಲ್ಲಿ ಭತ್ತ ಮಾರಾಟ ನಡೆಯುತ್ತಿದೆ. ಮುಂದೆ, ಕಟಾವು ಬಿರುಸುಗೊಂಡು ಮಾರುಕಟ್ಟೆಗೆ ಆವಕ ಹೆಚ್ಚಾಗಿ, ಭತ್ತದ ದರ ಕುಸಿಯುವ ಸಂಭವವಿದೆ. ಈ ನಿಟ್ಟಿನಲ್ಲಿ ರೈತರ ಹಿತದೃಷ್ಟಿಯಿಂದ ಭತ್ತ ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.