<p><strong>ಸಾಲಿಗ್ರಾಮ (ಬ್ರಹ್ಮಾವರ)</strong>: ಕನ್ನಡ ಶಾಲೆ ಉಳಿಸಿ–ಬೆಳೆಸುವಲ್ಲಿ ನಾವೆಲ್ಲ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರ ಹಾಗೂ ಪೋಷಕರ ಸಹಕಾರ ಅಗತ್ಯ ಎಂದು ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಹೇಳಿದರು.</p>.<p>ಸಾಲಿಗ್ರಾಮದ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಹಬ್ಬ ಚಿತ್ತಾರ–2026 ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಸರ್ಕಾರಿ ಶಾಲೆಗಳ ಉಳಿವಿಗೆ ಸರ್ಕಾರ ಹೊಸ ಯೋಜನೆಗಳನ್ನು ರೂಪಿಸಬೇಕು. ಕನ್ನಡ ಭಾಷೆಯೊಂದಿಗೆ ಕನ್ನಡ ಮಾಧ್ಯಮ ಶಾಲೆಗಳನ್ನು ದಾನಿಗಳ, ಹಿರಿಯ ವಿದ್ಯಾರ್ಥಿಗಳ ಸಹಕಾರದಿಂದ ಉಳಿಸಲು ಶ್ರಮಿಸಬೇಕು ಎಂದರು.</p>.<p>ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಜೇಯ್ ಭಂಡಾರ್ಕಾರ್ ಧ್ವಜಾರೋಹಣ ಮಾಡಿದರು. ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬ್ರಹ್ಮಾವರ ಕ್ಷೇತ್ರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಬಹುಮಾನ ವಿತರಿಸಿದರು.</p>.<p>ಪಟ್ಟಣ ಪಂಚಾಯಿತಿಯ ಹಿರಿಯ ಲೆಕ್ಕಾಧಿಕಾರಿ ಚಂದ್ರಶೇಖರ ಸೋಮಯಾಜಿ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ವಿಶ್ವೇಶ್ವರ ಹೊಳ್ಳ, ಸಂಚಾಲಕ ಎನ್ ಪ್ರಭಾಕರ ಕಾಮತ್, ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ.ಗುರುರಾಜ ಉಪಾಧ್ಯ, ಶಾಲಾ ವಿದ್ಯಾರ್ಥಿ ನಾಯಕ ಅಭಯ್ ಕೆ., ಶಿಕ್ಷಕಿ ಸ್ವರ್ಣ ಇದ್ದರು.</p>.<p>ಯುವ ಉದ್ಯಮಿ ಕೆ.ಅನಂತ ಕುಮಾರ್ ಕಾರ್ಕಡ ಸ್ವಸ್ತಿವಾಚನಗೈದರು. ಶಾಲಾ ಮುಖ್ಯ ಶಿಕ್ಷಕ ಬಿ.ಎನ್ ಸತ್ಯನಾರಾಯಣ ಸ್ವಾಗತಿಸಿದರು. ಸಹ ಶಿಕ್ಷಕ ಸುಧೀರ ಕಾಮತ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಲಿಗ್ರಾಮ (ಬ್ರಹ್ಮಾವರ)</strong>: ಕನ್ನಡ ಶಾಲೆ ಉಳಿಸಿ–ಬೆಳೆಸುವಲ್ಲಿ ನಾವೆಲ್ಲ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರ ಹಾಗೂ ಪೋಷಕರ ಸಹಕಾರ ಅಗತ್ಯ ಎಂದು ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಹೇಳಿದರು.</p>.<p>ಸಾಲಿಗ್ರಾಮದ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಹಬ್ಬ ಚಿತ್ತಾರ–2026 ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಸರ್ಕಾರಿ ಶಾಲೆಗಳ ಉಳಿವಿಗೆ ಸರ್ಕಾರ ಹೊಸ ಯೋಜನೆಗಳನ್ನು ರೂಪಿಸಬೇಕು. ಕನ್ನಡ ಭಾಷೆಯೊಂದಿಗೆ ಕನ್ನಡ ಮಾಧ್ಯಮ ಶಾಲೆಗಳನ್ನು ದಾನಿಗಳ, ಹಿರಿಯ ವಿದ್ಯಾರ್ಥಿಗಳ ಸಹಕಾರದಿಂದ ಉಳಿಸಲು ಶ್ರಮಿಸಬೇಕು ಎಂದರು.</p>.<p>ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಜೇಯ್ ಭಂಡಾರ್ಕಾರ್ ಧ್ವಜಾರೋಹಣ ಮಾಡಿದರು. ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬ್ರಹ್ಮಾವರ ಕ್ಷೇತ್ರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಬಹುಮಾನ ವಿತರಿಸಿದರು.</p>.<p>ಪಟ್ಟಣ ಪಂಚಾಯಿತಿಯ ಹಿರಿಯ ಲೆಕ್ಕಾಧಿಕಾರಿ ಚಂದ್ರಶೇಖರ ಸೋಮಯಾಜಿ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ವಿಶ್ವೇಶ್ವರ ಹೊಳ್ಳ, ಸಂಚಾಲಕ ಎನ್ ಪ್ರಭಾಕರ ಕಾಮತ್, ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ.ಗುರುರಾಜ ಉಪಾಧ್ಯ, ಶಾಲಾ ವಿದ್ಯಾರ್ಥಿ ನಾಯಕ ಅಭಯ್ ಕೆ., ಶಿಕ್ಷಕಿ ಸ್ವರ್ಣ ಇದ್ದರು.</p>.<p>ಯುವ ಉದ್ಯಮಿ ಕೆ.ಅನಂತ ಕುಮಾರ್ ಕಾರ್ಕಡ ಸ್ವಸ್ತಿವಾಚನಗೈದರು. ಶಾಲಾ ಮುಖ್ಯ ಶಿಕ್ಷಕ ಬಿ.ಎನ್ ಸತ್ಯನಾರಾಯಣ ಸ್ವಾಗತಿಸಿದರು. ಸಹ ಶಿಕ್ಷಕ ಸುಧೀರ ಕಾಮತ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>