<p><strong>ಉಡುಪಿ:</strong> ತಾಲ್ಲೂಕಿನ ನಿಟ್ಟೂರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮುರಳಿ ಕಡೇಕಾರ್ ಅವರು ನಿವೃತ್ತಿಯ ದಿನವೇ ಬಡ ವಿದ್ಯಾರ್ಥಿನಿಗೆ ಮನೆಯನ್ನು ಕಟ್ಟಿಸಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.</p>.<p>ಶನಿವಾರ ತಾಲ್ಲೂಕಿನ ಕಕ್ಕುಂಜೆಯಲ್ಲಿ ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳ ಸಮ್ಮುಖದಲ್ಲಿ ವಿದ್ಯಾರ್ಥಿನಿ ನಯನಾಗೆಮನೆ ಹಸ್ತಾಂತರಿಸಲಾಯಿತು. ಮುರಳಿ ಕಡೇಕಾರ್ 32 ವರ್ಷಗಳಿಂದ ನಿಟ್ಟೂರು ಶಾಲೆಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದು, 5 ವರ್ಷಗಳ ಹಿಂದೆ ಮುಖ್ಯೋಪಾಧ್ಯಾಯರಾಗಿ ಬಡ್ತಿ ಹೊಂದಿದ್ದರು.</p>.<p>ಅದೇ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಕೊರಗ ಸಮುದಾಯದ ನಯನಾ ಕುಟುಂಬ ತೀರಾ ಬಡತನದಲ್ಲಿರುವುದನ್ನು ಕಂಡು ಸ್ವಂತ ದುಡಿಮೆಯ ಹಣದಲ್ಲಿ ₹ 3.5 ಲಕ್ಷ ವ್ಯಯಿಸಿ ಚಿಕ್ಕದೊಂದು ಸೂರು ಕಟ್ಟಿಸಿಕೊಟ್ಟಿದ್ದಾರೆ.</p>.<p>‘ನಿವೃತ್ತಿಯ ದಿನ ವಿಶೇಷವಾಗಿರಬೇಕು ಎಂಬ ಉದ್ದೇಶದಿಂದ ಜೋಪಡಿಯಲ್ಲಿದ್ದ ನಯನಾಗೆ ಮನೆ ಕಟ್ಟಿಸಿಕೊಟ್ಟಿದ್ದೇನೆ. ಹಿಂದಿನಿಂದಲೂ ದುಡಿಮೆಯ ಒಂದು ಭಾಗವನ್ನು ಬಡ ಮಕ್ಕಳ ಶಿಕ್ಷಣಕ್ಕೆ ವಿನಿಯೋಗಿಸುತ್ತಾ ಬಂದಿದ್ದೇನೆ. ಮುಂದೆಯೂ ಸಮಾಜಪರ ಕಾರ್ಯಗಳು ಮುಂದುವರಿಯಲಿವೆ’ ಎಂದು ಮುರಳಿ ಕಡೇಕಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ತಾಲ್ಲೂಕಿನ ನಿಟ್ಟೂರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮುರಳಿ ಕಡೇಕಾರ್ ಅವರು ನಿವೃತ್ತಿಯ ದಿನವೇ ಬಡ ವಿದ್ಯಾರ್ಥಿನಿಗೆ ಮನೆಯನ್ನು ಕಟ್ಟಿಸಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.</p>.<p>ಶನಿವಾರ ತಾಲ್ಲೂಕಿನ ಕಕ್ಕುಂಜೆಯಲ್ಲಿ ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳ ಸಮ್ಮುಖದಲ್ಲಿ ವಿದ್ಯಾರ್ಥಿನಿ ನಯನಾಗೆಮನೆ ಹಸ್ತಾಂತರಿಸಲಾಯಿತು. ಮುರಳಿ ಕಡೇಕಾರ್ 32 ವರ್ಷಗಳಿಂದ ನಿಟ್ಟೂರು ಶಾಲೆಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದು, 5 ವರ್ಷಗಳ ಹಿಂದೆ ಮುಖ್ಯೋಪಾಧ್ಯಾಯರಾಗಿ ಬಡ್ತಿ ಹೊಂದಿದ್ದರು.</p>.<p>ಅದೇ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಕೊರಗ ಸಮುದಾಯದ ನಯನಾ ಕುಟುಂಬ ತೀರಾ ಬಡತನದಲ್ಲಿರುವುದನ್ನು ಕಂಡು ಸ್ವಂತ ದುಡಿಮೆಯ ಹಣದಲ್ಲಿ ₹ 3.5 ಲಕ್ಷ ವ್ಯಯಿಸಿ ಚಿಕ್ಕದೊಂದು ಸೂರು ಕಟ್ಟಿಸಿಕೊಟ್ಟಿದ್ದಾರೆ.</p>.<p>‘ನಿವೃತ್ತಿಯ ದಿನ ವಿಶೇಷವಾಗಿರಬೇಕು ಎಂಬ ಉದ್ದೇಶದಿಂದ ಜೋಪಡಿಯಲ್ಲಿದ್ದ ನಯನಾಗೆ ಮನೆ ಕಟ್ಟಿಸಿಕೊಟ್ಟಿದ್ದೇನೆ. ಹಿಂದಿನಿಂದಲೂ ದುಡಿಮೆಯ ಒಂದು ಭಾಗವನ್ನು ಬಡ ಮಕ್ಕಳ ಶಿಕ್ಷಣಕ್ಕೆ ವಿನಿಯೋಗಿಸುತ್ತಾ ಬಂದಿದ್ದೇನೆ. ಮುಂದೆಯೂ ಸಮಾಜಪರ ಕಾರ್ಯಗಳು ಮುಂದುವರಿಯಲಿವೆ’ ಎಂದು ಮುರಳಿ ಕಡೇಕಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>