<p><strong>ಬ್ರಹ್ಮಾವರ:</strong> ಜೀವನದಲ್ಲಿ ಹೋರಾಟ, ಪರಿಶ್ರಮ, ಪ್ರಾಮಾಣಿಕತೆ, ಶ್ರದ್ಧೆ ಮುಖ್ಯ. ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮತ್ತು ಯಶಸ್ಸು ಗಳಿಸಲು ಇವೆಲ್ಲವೂ ಅಗತ್ಯ ಎಂದು ಬ್ರಹ್ಮಾವರ ಅಂಜಲೀಸ್ ವಿಜಯಲಕ್ಷ್ಮಿ ಸಾರೀಸ್ನ ವ್ಯವಸ್ಥಾಪಕ ನಿರ್ದೇಶಕಿ ಅಂಜಲಿ ವಿಜಯ್ ಹೇಳಿದರು.</p>.<p>ಭಾರತ ಸರ್ಕಾರದ ತೆಂಗು ನಾರು ಮಂಡಳಿ ಸಹಯೋಗದಲ್ಲಿ ಬೆಂಗಳೂರಿನ ನಾರು ಮಂಡಳಿ ಬ್ರಹ್ಮಾವರದ ಕ್ರಾಸ್ಲ್ಯಾಂಡ್ ಕಾಲೇಜಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಮೂರು ದಿನಗಳ ಉದ್ಯಮ ಶೀಲತಾ ಅಭಿವೃದ್ಧಿ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ತಾಂತ್ರಿಕತೆ ಬದಲಾಗಿದೆ. ಯುವ ಜನರು ತಾಂತ್ರಿಕತೆಯನ್ನು ಬಳಸಿಕೊಂಡು ಕೆಲಸ ಮಾಡಿದಲ್ಲಿ ಸಮಾಜದಲ್ಲಿ ಗೌರವ, ಜೀವನದಲ್ಲಿ ಯಶಸ್ಸು ಸಿಗುತ್ತದೆ ಎಂದರು.</p>.<p>ಕಾಲೇಜಿನ ಸಂಚಾಲಕಿ ಲಾಲಿ ಎ. ಮ್ಯಾಥ್ಯೂ ಮಾತನಾಡಿ, ಉದ್ಯಮ ಕ್ಷೇತ್ರದಲ್ಲಿ ಏಳು ಬೀಳುಗಳು ಸಹಜ. ಇವೆಲ್ಲವನ್ನು ಮೆಟ್ಟಿನಿಂತು ನಾವು ಮುನ್ನಡೆದಲ್ಲಿ ಯಶಸ್ಸು ಗಳಿಸಬಹುದು ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ರಾಬರ್ಟ್ ಕ್ಲೈವ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ತೆಂಗು ನಾರು ಮಂಡಳಿಯ ಪ್ರಾದೇಶಿಕ ಕಚೇರಿಯ ವಿಸ್ತರಣಾ ಸೇವಾ ಅಧಿಕಾರಿ ವಿದ್ಯಾಧರನ್ ಎಂ.ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾಗಿದ್ದ ಬೆಂಗಳೂರಿನ ಸಂಪತ್ ಕುಮಾರ್, ನಾರು ಮಂಡಳಿಯ ನಿವೃತ್ತ ಅಧಿಕಾರಿ ಎಸ್.ಮಂಜುನಾಥ, ತೆಂಗು ನಾರು ಉದ್ಯಮದ ಬಗ್ಗೆ ಮಾತನಾಡಿದರು. ಬೆಣೆಕುದ್ರುವಿನ ತೆಂಗು ನಾರು ಉದ್ಯಮಿ ಸತೀಶ ಅನುಭವ ಹಂಚಿಕೊಂಡರು.</p>.<p>ಸುರಭಿ ಸ್ವಾಗತಿಸಿದರು. ಸುದೀಕ್ಷಾ ವಂದಿಸಿದರು. ಬರ್ನಿಸ್ ಕಾರ್ಯಕ್ರಮ ನಿರೂಪಿಸಿದರು. ತರಬೇತಿಯಲ್ಲಿ ಬ್ರಹ್ಮಾವರದ ಕ್ರಾಸ್ಲ್ಯಾಂಡ್, ಎಸ್.ಎಂ.ಎಸ್, ಉಡುಪಿ ತೆಂಕನಿಡಿಯೂರಿನ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡು ಮಹಿಳಾ ಪ್ರಥಮ ದರ್ಜೆ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><blockquote>ತೆಂಗಿನಿಂದ 600ಕ್ಕೂ ಹೆಚ್ಚು ಉತ್ಪನ್ನಗಳನ್ನು ಮಾಡಬಹುದಾಗಿದ್ದು ಈ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಆಗಬೇಕಾಗಿದೆ. ಇದರಿಂದ ಆದಾಯವೂ ಹೆಚ್ಚಲಿದೆ.</blockquote><span class="attribution"> ಸಂಪತ್ ಕುಮಾರ್ ತೆಂಗು ನಾರು ಮಂಡಳಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ಜೀವನದಲ್ಲಿ ಹೋರಾಟ, ಪರಿಶ್ರಮ, ಪ್ರಾಮಾಣಿಕತೆ, ಶ್ರದ್ಧೆ ಮುಖ್ಯ. ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮತ್ತು ಯಶಸ್ಸು ಗಳಿಸಲು ಇವೆಲ್ಲವೂ ಅಗತ್ಯ ಎಂದು ಬ್ರಹ್ಮಾವರ ಅಂಜಲೀಸ್ ವಿಜಯಲಕ್ಷ್ಮಿ ಸಾರೀಸ್ನ ವ್ಯವಸ್ಥಾಪಕ ನಿರ್ದೇಶಕಿ ಅಂಜಲಿ ವಿಜಯ್ ಹೇಳಿದರು.</p>.<p>ಭಾರತ ಸರ್ಕಾರದ ತೆಂಗು ನಾರು ಮಂಡಳಿ ಸಹಯೋಗದಲ್ಲಿ ಬೆಂಗಳೂರಿನ ನಾರು ಮಂಡಳಿ ಬ್ರಹ್ಮಾವರದ ಕ್ರಾಸ್ಲ್ಯಾಂಡ್ ಕಾಲೇಜಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಮೂರು ದಿನಗಳ ಉದ್ಯಮ ಶೀಲತಾ ಅಭಿವೃದ್ಧಿ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ತಾಂತ್ರಿಕತೆ ಬದಲಾಗಿದೆ. ಯುವ ಜನರು ತಾಂತ್ರಿಕತೆಯನ್ನು ಬಳಸಿಕೊಂಡು ಕೆಲಸ ಮಾಡಿದಲ್ಲಿ ಸಮಾಜದಲ್ಲಿ ಗೌರವ, ಜೀವನದಲ್ಲಿ ಯಶಸ್ಸು ಸಿಗುತ್ತದೆ ಎಂದರು.</p>.<p>ಕಾಲೇಜಿನ ಸಂಚಾಲಕಿ ಲಾಲಿ ಎ. ಮ್ಯಾಥ್ಯೂ ಮಾತನಾಡಿ, ಉದ್ಯಮ ಕ್ಷೇತ್ರದಲ್ಲಿ ಏಳು ಬೀಳುಗಳು ಸಹಜ. ಇವೆಲ್ಲವನ್ನು ಮೆಟ್ಟಿನಿಂತು ನಾವು ಮುನ್ನಡೆದಲ್ಲಿ ಯಶಸ್ಸು ಗಳಿಸಬಹುದು ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ರಾಬರ್ಟ್ ಕ್ಲೈವ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ತೆಂಗು ನಾರು ಮಂಡಳಿಯ ಪ್ರಾದೇಶಿಕ ಕಚೇರಿಯ ವಿಸ್ತರಣಾ ಸೇವಾ ಅಧಿಕಾರಿ ವಿದ್ಯಾಧರನ್ ಎಂ.ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾಗಿದ್ದ ಬೆಂಗಳೂರಿನ ಸಂಪತ್ ಕುಮಾರ್, ನಾರು ಮಂಡಳಿಯ ನಿವೃತ್ತ ಅಧಿಕಾರಿ ಎಸ್.ಮಂಜುನಾಥ, ತೆಂಗು ನಾರು ಉದ್ಯಮದ ಬಗ್ಗೆ ಮಾತನಾಡಿದರು. ಬೆಣೆಕುದ್ರುವಿನ ತೆಂಗು ನಾರು ಉದ್ಯಮಿ ಸತೀಶ ಅನುಭವ ಹಂಚಿಕೊಂಡರು.</p>.<p>ಸುರಭಿ ಸ್ವಾಗತಿಸಿದರು. ಸುದೀಕ್ಷಾ ವಂದಿಸಿದರು. ಬರ್ನಿಸ್ ಕಾರ್ಯಕ್ರಮ ನಿರೂಪಿಸಿದರು. ತರಬೇತಿಯಲ್ಲಿ ಬ್ರಹ್ಮಾವರದ ಕ್ರಾಸ್ಲ್ಯಾಂಡ್, ಎಸ್.ಎಂ.ಎಸ್, ಉಡುಪಿ ತೆಂಕನಿಡಿಯೂರಿನ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡು ಮಹಿಳಾ ಪ್ರಥಮ ದರ್ಜೆ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><blockquote>ತೆಂಗಿನಿಂದ 600ಕ್ಕೂ ಹೆಚ್ಚು ಉತ್ಪನ್ನಗಳನ್ನು ಮಾಡಬಹುದಾಗಿದ್ದು ಈ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಆಗಬೇಕಾಗಿದೆ. ಇದರಿಂದ ಆದಾಯವೂ ಹೆಚ್ಚಲಿದೆ.</blockquote><span class="attribution"> ಸಂಪತ್ ಕುಮಾರ್ ತೆಂಗು ನಾರು ಮಂಡಳಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>