<p><strong>ಉಡುಪಿ</strong>: ಮಾಹಿತಿ ಹಕ್ಕಿನ ಅಡಿಯಲ್ಲಿ ಕೋರಿದ್ದ ಮಾಹಿತಿ ನೀಡದ್ದಕ್ಕೆ ಕಾರ್ಕಳದ ಶ್ರೀ ಮಾರಿಯಮ್ಮ ದೇವಾಲಯದ ಸಾರ್ವಜನಿಕ ಮಾಹಿತಿ ಆಧಿಕಾರಿಯಾದ ಆಡಳಿತ ಮೋಕ್ತೇಸರ ಕೆ.ಪಿ. ಗೋಪಾಲಕೃಷ್ಣ ರಾವ್ ಅವರಿಗೆ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ₹ 1 ಲಕ್ಷ ದಂಡ ವಿಧಿಸಿ ಕರ್ನಾಟಕ ಮಾಹಿತಿ ಆಯೋಗ ಆದೇಶಿಸಿದೆ.</p>.<p>ಅರ್ಜಿದಾರರಿಗೆ ನಾಲ್ಕು ಪ್ರಕರಣಗಳಲ್ಲಿ ₹16 ಸಾವಿರ ಪರಿಹಾರ ನೀಡಬೇಕು ಎಂದೂ ನಿರ್ದೇಶನ ನೀಡಿದೆ. ಸೋಮನಾಥ ನಾಯಕ್ ಕೆ. ಎಂಬುವವರು ಅರ್ಜಿ ಸಲ್ಲಿಸಿ ದೇವಾಲಯಕ್ಕೆ ಸಂಬಂಧಿಸಿದ ಕೆಲವೊಂದು ಮಾಹಿತಿಗಳನ್ನು ಕೇಳಿದ್ದರು. </p>.<p>ಶ್ರೀ ಮಾರಿಯಮ್ಮ ದೇವಾಲಯವು ಮುಜರಾಯಿ ದೇವಾಸ್ಥಾನವಾಗಿದ್ದು, ಹಿಂದೂ ಧಾರ್ಮಿಕ ದತ್ತಿ ಇಲಾಖೆಯು ಆಡಳಿತ ಮೋಕ್ತೇಸರ ಅವರನ್ನು ಸಾರ್ವಜನಿಕ ಮಾಹಿತಿ ಅಧಿಕಾರಿಯನ್ನಾಗಿ ನೇಮಕ ಮಾಡಿದೆ. ಆದರೂ ಅವರು ಆಯೋಗದ ವಿಚಾರಣೆಗಳಿಗೆ ಹಾಜರಾಗಿಲ್ಲ ಮತ್ತು ಅರ್ಜಿದಾರರಿಗೆ ಮಾಹಿತಿಯನ್ನೂ ನೀಡುತ್ತಿರಲಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.</p>.<p>ದೇವಾಲಯಕ್ಕೆ ಸರ್ಕಾರದಿಂದ ವಾರ್ಷಿಕ ₹60 ಸಾವಿರ ವರ್ಷಾಸನ ಹಾಗೂ 2022 ರಲ್ಲಿ ದೇವಾಲಯ ನವೀಕರಣಕ್ಕೆ ಸರ್ಕಾರದಿಂದ ₹25 ಲಕ್ಷ ಅನುದಾನ ಬಿಡುಗಡೆಯಾಗಿದೆ. ಆದ್ದರಿಂದ ಕೂಡಲೇ ಮಾಹಿತಿ ನೀಡುವಂತೆ ಆಯೋಗ ಆದೇಶ ನೀಡಿದ್ದರೂ ಸಾರ್ವಜನಿಕ ಮಾಹಿತಿ ಆಧಿಕಾರಿ ಗೋಪಾಲಕೃಷ್ಣರಾವ್ ಅವರು ಆ ಆದೇಶವನ್ನು ಪಾಲಿಸಿರಲಿಲ್ಲ. ಆದ್ದರಿಂದ ಪ್ರತಿ ಪ್ರಕರಣಕ್ಕೆ ತಲಾ ₹ 25 ಸಾವಿರ ದಂಡ ಹಾಗೂ ಎರಡು ಪ್ರಕರಣದಲ್ಲಿ ತಲಾ ₹ 5 ಸಾವಿರ ಪರಿಹಾರ ಹಾಗೂ ಉಳಿದೆರಡು ಪ್ರಕರಣದಲ್ಲಿ ತಲಾ ₹ 3 ಸಾವಿರ ಪರಿಹಾರ ನೀಡುವಂತೆ ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ ಅವರು ಆದೇಶ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಮಾಹಿತಿ ಹಕ್ಕಿನ ಅಡಿಯಲ್ಲಿ ಕೋರಿದ್ದ ಮಾಹಿತಿ ನೀಡದ್ದಕ್ಕೆ ಕಾರ್ಕಳದ ಶ್ರೀ ಮಾರಿಯಮ್ಮ ದೇವಾಲಯದ ಸಾರ್ವಜನಿಕ ಮಾಹಿತಿ ಆಧಿಕಾರಿಯಾದ ಆಡಳಿತ ಮೋಕ್ತೇಸರ ಕೆ.ಪಿ. ಗೋಪಾಲಕೃಷ್ಣ ರಾವ್ ಅವರಿಗೆ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ₹ 1 ಲಕ್ಷ ದಂಡ ವಿಧಿಸಿ ಕರ್ನಾಟಕ ಮಾಹಿತಿ ಆಯೋಗ ಆದೇಶಿಸಿದೆ.</p>.<p>ಅರ್ಜಿದಾರರಿಗೆ ನಾಲ್ಕು ಪ್ರಕರಣಗಳಲ್ಲಿ ₹16 ಸಾವಿರ ಪರಿಹಾರ ನೀಡಬೇಕು ಎಂದೂ ನಿರ್ದೇಶನ ನೀಡಿದೆ. ಸೋಮನಾಥ ನಾಯಕ್ ಕೆ. ಎಂಬುವವರು ಅರ್ಜಿ ಸಲ್ಲಿಸಿ ದೇವಾಲಯಕ್ಕೆ ಸಂಬಂಧಿಸಿದ ಕೆಲವೊಂದು ಮಾಹಿತಿಗಳನ್ನು ಕೇಳಿದ್ದರು. </p>.<p>ಶ್ರೀ ಮಾರಿಯಮ್ಮ ದೇವಾಲಯವು ಮುಜರಾಯಿ ದೇವಾಸ್ಥಾನವಾಗಿದ್ದು, ಹಿಂದೂ ಧಾರ್ಮಿಕ ದತ್ತಿ ಇಲಾಖೆಯು ಆಡಳಿತ ಮೋಕ್ತೇಸರ ಅವರನ್ನು ಸಾರ್ವಜನಿಕ ಮಾಹಿತಿ ಅಧಿಕಾರಿಯನ್ನಾಗಿ ನೇಮಕ ಮಾಡಿದೆ. ಆದರೂ ಅವರು ಆಯೋಗದ ವಿಚಾರಣೆಗಳಿಗೆ ಹಾಜರಾಗಿಲ್ಲ ಮತ್ತು ಅರ್ಜಿದಾರರಿಗೆ ಮಾಹಿತಿಯನ್ನೂ ನೀಡುತ್ತಿರಲಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.</p>.<p>ದೇವಾಲಯಕ್ಕೆ ಸರ್ಕಾರದಿಂದ ವಾರ್ಷಿಕ ₹60 ಸಾವಿರ ವರ್ಷಾಸನ ಹಾಗೂ 2022 ರಲ್ಲಿ ದೇವಾಲಯ ನವೀಕರಣಕ್ಕೆ ಸರ್ಕಾರದಿಂದ ₹25 ಲಕ್ಷ ಅನುದಾನ ಬಿಡುಗಡೆಯಾಗಿದೆ. ಆದ್ದರಿಂದ ಕೂಡಲೇ ಮಾಹಿತಿ ನೀಡುವಂತೆ ಆಯೋಗ ಆದೇಶ ನೀಡಿದ್ದರೂ ಸಾರ್ವಜನಿಕ ಮಾಹಿತಿ ಆಧಿಕಾರಿ ಗೋಪಾಲಕೃಷ್ಣರಾವ್ ಅವರು ಆ ಆದೇಶವನ್ನು ಪಾಲಿಸಿರಲಿಲ್ಲ. ಆದ್ದರಿಂದ ಪ್ರತಿ ಪ್ರಕರಣಕ್ಕೆ ತಲಾ ₹ 25 ಸಾವಿರ ದಂಡ ಹಾಗೂ ಎರಡು ಪ್ರಕರಣದಲ್ಲಿ ತಲಾ ₹ 5 ಸಾವಿರ ಪರಿಹಾರ ಹಾಗೂ ಉಳಿದೆರಡು ಪ್ರಕರಣದಲ್ಲಿ ತಲಾ ₹ 3 ಸಾವಿರ ಪರಿಹಾರ ನೀಡುವಂತೆ ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ ಅವರು ಆದೇಶ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>