ಮಾರಿಯಮ್ಮ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಸಚಿವ ವಿ. ಸುನಿಲ್ ಕುಮಾರ್ ಮಾತನಾಡಿ,‘ದೇವಸ್ಥಾನದ ಆಂಜನೇಯ, ಉಚ್ಚಂಗಿ ಮಾರಿಗುಡಿ, ನಾಗ, ಪ್ರಧಾನ ದೇವತೆ, ದೈವಗಳ ಗುಡಿ ನಿರ್ಮಾಣ, ಸುಸಜ್ಜಿತ ಸಭಾಂಗಣ, ಮುಂಭಾಗ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕಾಗಿ ಅಂದಾಜು ₹15 ಕೋಟಿ ವೆಚ್ಚದ ಯೋಜನೆ ರೂಪಿಸಲಾಗಿದೆ. ಇದಕ್ಕೆ ಸರ್ಕಾರದಿಂದ ಗರಿಷ್ಠ ಪ್ರಮಾಣದ ಅನುದಾನ ಮಂಜೂರು ಮಾಡುವಂತೆ ಪ್ರಯತ್ನಿಸುತ್ತೇನೆ. ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಜೂ. 19ರಂದು ಮುಷ್ಟಿ ಕಾಣಿಕೆ ಸಮರ್ಪಣೆ ನಡೆಯಲಿದೆ. ಮುಂದಿನ ಮಾರ್ಚ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವ ನಡೆಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳಬೇಕಾಗಿವೆ. ಭಕ್ತರು ಕರಸೇವೆ ಮೂಲಕ ಹೆಚ್ಚಿನ ಕೆಲಸಗಳು ನಡೆಸಿಕೊಡಬೇಕಾಗಿದೆ’ ಎಂದರು.