<p><strong>ಉಡುಪಿ: </strong>ರಾಜ್ಯ ಸರ್ಕಾರ ದೇವಸ್ಥಾನ ಹಾಗೂ ಹೋಟೆಲ್ಗಳನ್ನು ಸೋಮವಾರದಿಂದ ತೆರೆಯಲು ಅನುಮತಿ ಕೊಟ್ಟರೂ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ದೇವಸ್ಥಾನಗಳು ಹಾಗೂ ಹೋಟೆಲ್ಗಳು ತೆರೆದಿರಲಿಲ್ಲ.</p>.<p>ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉಡುಪಿಯ ಕೃಷ್ಣಮಠದಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗಿಲ್ಲ. ನಗರದ ಉಳಿದ ದೇವಸ್ಥಾನಗಳು ಸಹ ಪೂರ್ಣ ತೆರೆದಿರಲಿಲ್ಲ. ಭಕ್ತರೂ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರಲಿಲ್ಲ.</p>.<p><strong>ಹೋಟೆಲ್ಗಳಲ್ಲಿ ಶೇ 20ರಷ್ಟು ವ್ಯವಹಾರ:</strong></p>.<p>ಹೋಟೆಲ್ಗಳಲ್ಲಿ ಕುಳಿತು ಊಟ ಮಾಡಲು ಅನುಮತಿ ನೀಡಲಾಗಿದ್ದರೂ ಕೋವಿಡ್ ಭಯದಿಂದ ಗ್ರಾಹಕರು ಹೋಟೆಲ್ಗಳತ್ತ ಸುಳಿಯಲಿಲ್ಲ. ಸೋಂಕು ಹರಡುವ ಮುನ್ನ ದಿನಗಳಿಗೆ ಹೋಲಿಸಿದರೆ ಶೇ 20ರಷ್ಟು ಮಾತ್ರ ವ್ಯವಹಾರ ನಡೆಯಿತು ಎಂದು ಹೋಟೆಲ್ ಮಾಲೀಕರು ತಿಳಿಸಿದರು.</p>.<p>ಉಡುಪಿಯಲ್ಲಿ ಹೆಚ್ಚುತ್ತಿರುವ ಸೋಂಕಿನಿಂದ ಸಾರ್ವಜನಿಕರು ಆತಂಕದಲ್ಲಿದ್ದಾರೆ. ಹೋಟೆಲ್ ಉದ್ಯಮ ಚೇತರಿಸಿಕೊಳ್ಳಲು ಕನಿಷ್ಠ ಮೂರ್ನಾಲ್ಕು ತಿಂಗಳು ಬೇಕಾಗಬಹುದು. ಜತೆಗೆ, ವಲಸೆ ಕಾರ್ಮಿಕರ ಸಮಸ್ಯೆಯಿಂದಾಗಿ ಹೋಟೆಲ್ಗಳನ್ನು ನಡೆಸುವುದು ಕಷ್ಟವಾಗಿದೆ ಎಂದು ಮಾಲೀಕರು ಬೇಸರ ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ರಾಜ್ಯ ಸರ್ಕಾರ ದೇವಸ್ಥಾನ ಹಾಗೂ ಹೋಟೆಲ್ಗಳನ್ನು ಸೋಮವಾರದಿಂದ ತೆರೆಯಲು ಅನುಮತಿ ಕೊಟ್ಟರೂ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ದೇವಸ್ಥಾನಗಳು ಹಾಗೂ ಹೋಟೆಲ್ಗಳು ತೆರೆದಿರಲಿಲ್ಲ.</p>.<p>ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉಡುಪಿಯ ಕೃಷ್ಣಮಠದಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗಿಲ್ಲ. ನಗರದ ಉಳಿದ ದೇವಸ್ಥಾನಗಳು ಸಹ ಪೂರ್ಣ ತೆರೆದಿರಲಿಲ್ಲ. ಭಕ್ತರೂ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರಲಿಲ್ಲ.</p>.<p><strong>ಹೋಟೆಲ್ಗಳಲ್ಲಿ ಶೇ 20ರಷ್ಟು ವ್ಯವಹಾರ:</strong></p>.<p>ಹೋಟೆಲ್ಗಳಲ್ಲಿ ಕುಳಿತು ಊಟ ಮಾಡಲು ಅನುಮತಿ ನೀಡಲಾಗಿದ್ದರೂ ಕೋವಿಡ್ ಭಯದಿಂದ ಗ್ರಾಹಕರು ಹೋಟೆಲ್ಗಳತ್ತ ಸುಳಿಯಲಿಲ್ಲ. ಸೋಂಕು ಹರಡುವ ಮುನ್ನ ದಿನಗಳಿಗೆ ಹೋಲಿಸಿದರೆ ಶೇ 20ರಷ್ಟು ಮಾತ್ರ ವ್ಯವಹಾರ ನಡೆಯಿತು ಎಂದು ಹೋಟೆಲ್ ಮಾಲೀಕರು ತಿಳಿಸಿದರು.</p>.<p>ಉಡುಪಿಯಲ್ಲಿ ಹೆಚ್ಚುತ್ತಿರುವ ಸೋಂಕಿನಿಂದ ಸಾರ್ವಜನಿಕರು ಆತಂಕದಲ್ಲಿದ್ದಾರೆ. ಹೋಟೆಲ್ ಉದ್ಯಮ ಚೇತರಿಸಿಕೊಳ್ಳಲು ಕನಿಷ್ಠ ಮೂರ್ನಾಲ್ಕು ತಿಂಗಳು ಬೇಕಾಗಬಹುದು. ಜತೆಗೆ, ವಲಸೆ ಕಾರ್ಮಿಕರ ಸಮಸ್ಯೆಯಿಂದಾಗಿ ಹೋಟೆಲ್ಗಳನ್ನು ನಡೆಸುವುದು ಕಷ್ಟವಾಗಿದೆ ಎಂದು ಮಾಲೀಕರು ಬೇಸರ ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>