<p><strong>ಪಡುಬಿದ್ರಿ</strong>: ‘ನಾವು ಪೇಟೆಗೆ ಹೋಗಬೇಕೆಂದರೆ. ಈ ಹೊಳೆ ದಾಟಿಯೇ ಹೋಗಬೇಕು. ಇಲ್ಲಿ ಅತಿ ಹಳೆಯದಾದ ಸಣ್ಣ ಹಲಗೆಯ ಸಂಕ ಇದೆ. ಅದು ಕೂಡ ಮುರಿದು ಹೋಗಿದೆ. ನನಗೂ, ನನ್ನ ಗಂಡನಿಗೂ ವಯಸ್ಸಾಗಿದೆ. ಆರೋಗ್ಯ ಸರಿ ಇಲ್ಲ’...</p>.<p>ಇದು ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅವರಾಲುಮಟ್ಟು ಗ್ರಾಮದ 70 ವರ್ಷದ ವಸಂತಿ ಹಾಗೂ 74 ವರ್ಷದ ಭೋಜ ಸಾಲ್ಯಾನ್ ಅವರ ಮಾತು.</p>.<p>ಅವರ ಮನೆಗೆ ತೆರಳಬೇಕಿದ್ದರೆ ಹೊಳೆಯ ಮೇಲೆ ನಿರ್ಮಿಸಿರುವ ಶಿಥಿಲಗೊಂಡ ಕಾಲು ಸಂಕವೇ ಏಕೈಕ ದಾರಿ. ಅವರು ದಿನನಿತ್ಯದ ಕೆಲಸಗಳಿಗೆ ಹೊರಗೆ ಬರಬೇಕೆಂದರೆ ಈ ಕಾಲು ಸಂಕದ ಮೂಲಕವೇ ಬರಬೇಕು. ಅಲ್ಲಾಡುತ್ತಾ ಇನ್ನೇನು ಮುರಿದು ಬೀಳುತ್ತದೆಯೇನೋ ಎನ್ನುವಂತಿರುವ ಈ ಮರದ ಸಣ್ಣ ಹಲಗೆಯ ಮೇಲೆಯೇ ಈ ದಂಪತಿ ನಡೆದಾಡಬೇಕಾದ ಪರಿಸ್ಥಿತಿ. ದಿನಸಿ ತರಲು, ಹೊರಗಿನ ಜನರನ್ನು ಭೇಟಿ ಮಾಡಲು, ಪೇಟೆ ಬೀದಿಗೆ ಬರಲ ಅಥವಾ ಇನ್ಯಾವುದೇ ಕೆಲಸಕ್ಕೂ ಜೀವ ಕೈಯಲ್ಲಿ ಹಿಡಿದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ.</p>.<p>‘ಈ ಸೇತುವೆಯಲ್ಲಿ ಹೋಗಲು ಆಗುವುದಿಲ್ಲ. ಮಗಳ ಮದುವೆ ಮಾಡಿ ಆಗಿದೆ. ಗಂಡು ಮಕ್ಕಳಿಲ್ಲ. ಜೀವನವೇ ದುಸ್ತರವಾಗಿದೆ. ದಿನಸಿ ತರೋಕೆ, ಔಷಧಿ ತರೋಕೆ ನಾವೇ ಈ ಮುರುಕಲು ಸಂಕದ ಮೂಲಕ ಹೋಗಬೇಕಾದ ಪರಿಸ್ಥಿತಿ ಇದೆ. ಒಂದು ಸುರಕ್ಷಿತ ಕಾಲು ಸೇತುವೆ ನಿರ್ಮಿಸಿಕೊಟ್ಟರೆ ಬಹಳ ಉಪಕಾರವಾಗುತ್ತದೆ ಎಂದು’ ದಂಪತಿ ಮನವಿ ಮಾಡಿಕೊಂಡಿದ್ದರು.</p>.<p>ಇವರ ಪರಿಸ್ಥಿತಿ ಮನಗಂಡು ಮಾಹಿತಿ ಪಡೆದುಕೊಂಡ ತಹಶೀಲ್ದಾರ್ ಪ್ರತಿಭಾ ಆರ್. ಸ್ಥಳಕ್ಕೆ ತೆರಳಿ ಶಿಥಿಲಗೊಂಡ ಸೇತುವೆಯಲ್ಲಿ ನಡೆದುಕೊಂಡು ಹೋಗಿ ವೃದ್ಧ ದಂಪತಿಯ ಮನೆಗೆ ತೆರಳಿದರು. ಹೊಸ ಸುರಕ್ಷಿತ ಸೇತುವೆ ನಿರ್ಮಿಸಿಕೊಡುವ ಭರವಸೆ ನೀಡಿದರು.</p>.<h2>ಶೋಚನೀಯ ಪರಿಸ್ಥಿತಿ:</h2><p> ‘ವಸಂತಿ, ಭೋಜ ಸಾಲ್ಯಾನ್ ದಂಪತಿಯ ಪರಿಸ್ಥಿತಿ ನಿಜಕ್ಕೂ ಶೋಚನೀಯ. ನಾನೂ ಈ ಹಲಗೆಯ ಮೇಲೆ ನಡೆದುಬಂದೆ, ನಿಜಕ್ಕೂ ಭಯವಾಯಿತು. ಕಾಲಿಟ್ಟರೆ ಅಲ್ಲಾಡುವ ಒಂದು ಹೆಜ್ಜೆ ಊರುವಷ್ಟು ಮಾತ್ರವೇ ಅಗಲವಿರುವ ಶಿಥಿಲಗೊಂಡ ಮರದ ಹಲಗೆಯ ಮೇಲೆ ನಡೆದುಕೊಂಡು ಬಂದು ಹೊಳೆ ದಾಟಿ ತಮ್ಮ ದಿನ ನಿತ್ಯದ ಅಗತ್ಯ ಪೂರೈಸಿಕೊಳ್ಳಬೇಕಾದ ಪರಿಸ್ಥಿತಿ ಈ ವೃದ್ಧ ದಂಪತಿಯದ್ದು’ ಎಂದು ತಹಶೀಲ್ದಾರ್ ಪ್ರತಿಭಾ ಆರ್. ಹೇಳಿದರು.</p>.<p>‘ಮಳೆಗಾಲದಲ್ಲಿ ನೆರೆ ಆವರಿಸುತ್ತದೆ. ಪಕ್ಕದಲ್ಲೇ ಇರುವ ಇನ್ನೊಂದು ಮನೆಯವರು ಈ ಕಷ್ಟ ಸಹಿಸಲಾಗದೆ ಈಗಾಗಲೇ ಮನೆ ತೊರೆದು ಬೇರೆ ಕಡೆ ಹೋಗಿದಾರೆ. ಆದರೆ ಈ ದಂಪತಿಗೆ ಇರುವುದೊಂದೇ ಸೂರು. ಹೊಳೆಗೆ ಸೇತುವೆ ನಿರ್ಮಿಸಿಕೊಡಲು ಅವರು ಮನವಿ ಮಾಡಿಕೊಂಡಿದ್ದಾರೆ. ಸೇತುವೆ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಸಂಬಂಧಪಟ್ಟ ಇಲಾಖೆ ಮತ್ತು ಯಾರಾದರೂ ದಾನಿಗಳ ಸಹಕಾರದಿಂದ ಇದನ್ನು ಸಾಧ್ಯವಾಗಿಸಲು ಪ್ರಯತ್ನಿಸುತ್ತೇನೆ’ ಎಂದು ಅವರು ಹೇಳಿದರು.</p>.<h2>ಗ್ರಾಮ ಪಂಚಾಯಯಿಯ ಸಹಕಾರ: </h2><h2></h2><p>ಫಲಿಮಾರು ಗ್ರಾಮ ಪಂಚಾಯತಿಯ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಸದಸ್ಯರಾದ ಜಯಂತಿ, ಸತೀಶ್ ದೇವಾಡಿಗ, ಯೋಗಾನಂದ ಅವರು ವೃದ್ಧ ದಂಪತಿ ಮನೆಗೆ ರಸ್ತೆ ನಿರ್ಮಿಸಿಕೊಡಲು ಸಹಕರಿಸುವುದಾಗಿ ತಿಳಿಸಿದ್ದಾರೆ.</p>.<h2>ಗಮನಕ್ಕೆ ತಂದ ಇಸ್ಮಾಯಿಲ್: </h2><h2></h2><p>ಇಂತಹ ಪರಿಸ್ಥಿತಿಯ ಬಗ್ಗೆ ತಹಶೀಲ್ದಾರ್ ಅವರ ಗಮನ ಸೆಳೆದದ್ದು ಪಲಿಮಾರು ಗ್ರಾಮ ಒನ್ ನಡೆಸುತ್ತಿರುವ ಇಸ್ಮಾಯಿಲ್ ಫಲಿಮಾರು. ದಂಪತಿಯ ಕಷ್ಟವನ್ನು ತಹಶೀಲ್ದಾರ್ ಅವರ ಗಮನಕ್ಕೆ ತಂದು ಇಲ್ಲಿಗೆ ಬರುವಂತೆ ಮಾಡಿರುತ್ತಾರೆ. ಸೇತುವೆ ನಿರ್ಮಿಸಿಕೊಡಲು ತಾವೂ ಸಹಕರಿಸುವುದಾಗಿ ತಿಳಿಸಿದ್ದಾರೆ.</p>.<div><blockquote>ಕಷ್ಟದಲ್ಲಿ ಇರುವ ನಮ್ಮ ಮೊರೆ ತಹಶೀಲ್ದಾರ್ ಅವರಿಗೆ ಮುಟ್ಟಿದೆ. ಅವರು ಇಲ್ಲಿಗೆ ಬಂದು ನಮ್ಮ ಸಮಸ್ಯೆ ಆಲಿಸಿದ್ದಾರೆ. ಸಮಸ್ಯೆ ಪರಿಹರಿಸುವ ಭರವಸೆಯನ್ನೂ ನೀಡಿದ್ದಾರೆ</blockquote><span class="attribution">ವಸಂತಿ ಅವರಾಲುಮಟ್ಟು ಗ್ರಾಮದ ನಿವಾಸಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುಬಿದ್ರಿ</strong>: ‘ನಾವು ಪೇಟೆಗೆ ಹೋಗಬೇಕೆಂದರೆ. ಈ ಹೊಳೆ ದಾಟಿಯೇ ಹೋಗಬೇಕು. ಇಲ್ಲಿ ಅತಿ ಹಳೆಯದಾದ ಸಣ್ಣ ಹಲಗೆಯ ಸಂಕ ಇದೆ. ಅದು ಕೂಡ ಮುರಿದು ಹೋಗಿದೆ. ನನಗೂ, ನನ್ನ ಗಂಡನಿಗೂ ವಯಸ್ಸಾಗಿದೆ. ಆರೋಗ್ಯ ಸರಿ ಇಲ್ಲ’...</p>.<p>ಇದು ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅವರಾಲುಮಟ್ಟು ಗ್ರಾಮದ 70 ವರ್ಷದ ವಸಂತಿ ಹಾಗೂ 74 ವರ್ಷದ ಭೋಜ ಸಾಲ್ಯಾನ್ ಅವರ ಮಾತು.</p>.<p>ಅವರ ಮನೆಗೆ ತೆರಳಬೇಕಿದ್ದರೆ ಹೊಳೆಯ ಮೇಲೆ ನಿರ್ಮಿಸಿರುವ ಶಿಥಿಲಗೊಂಡ ಕಾಲು ಸಂಕವೇ ಏಕೈಕ ದಾರಿ. ಅವರು ದಿನನಿತ್ಯದ ಕೆಲಸಗಳಿಗೆ ಹೊರಗೆ ಬರಬೇಕೆಂದರೆ ಈ ಕಾಲು ಸಂಕದ ಮೂಲಕವೇ ಬರಬೇಕು. ಅಲ್ಲಾಡುತ್ತಾ ಇನ್ನೇನು ಮುರಿದು ಬೀಳುತ್ತದೆಯೇನೋ ಎನ್ನುವಂತಿರುವ ಈ ಮರದ ಸಣ್ಣ ಹಲಗೆಯ ಮೇಲೆಯೇ ಈ ದಂಪತಿ ನಡೆದಾಡಬೇಕಾದ ಪರಿಸ್ಥಿತಿ. ದಿನಸಿ ತರಲು, ಹೊರಗಿನ ಜನರನ್ನು ಭೇಟಿ ಮಾಡಲು, ಪೇಟೆ ಬೀದಿಗೆ ಬರಲ ಅಥವಾ ಇನ್ಯಾವುದೇ ಕೆಲಸಕ್ಕೂ ಜೀವ ಕೈಯಲ್ಲಿ ಹಿಡಿದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ.</p>.<p>‘ಈ ಸೇತುವೆಯಲ್ಲಿ ಹೋಗಲು ಆಗುವುದಿಲ್ಲ. ಮಗಳ ಮದುವೆ ಮಾಡಿ ಆಗಿದೆ. ಗಂಡು ಮಕ್ಕಳಿಲ್ಲ. ಜೀವನವೇ ದುಸ್ತರವಾಗಿದೆ. ದಿನಸಿ ತರೋಕೆ, ಔಷಧಿ ತರೋಕೆ ನಾವೇ ಈ ಮುರುಕಲು ಸಂಕದ ಮೂಲಕ ಹೋಗಬೇಕಾದ ಪರಿಸ್ಥಿತಿ ಇದೆ. ಒಂದು ಸುರಕ್ಷಿತ ಕಾಲು ಸೇತುವೆ ನಿರ್ಮಿಸಿಕೊಟ್ಟರೆ ಬಹಳ ಉಪಕಾರವಾಗುತ್ತದೆ ಎಂದು’ ದಂಪತಿ ಮನವಿ ಮಾಡಿಕೊಂಡಿದ್ದರು.</p>.<p>ಇವರ ಪರಿಸ್ಥಿತಿ ಮನಗಂಡು ಮಾಹಿತಿ ಪಡೆದುಕೊಂಡ ತಹಶೀಲ್ದಾರ್ ಪ್ರತಿಭಾ ಆರ್. ಸ್ಥಳಕ್ಕೆ ತೆರಳಿ ಶಿಥಿಲಗೊಂಡ ಸೇತುವೆಯಲ್ಲಿ ನಡೆದುಕೊಂಡು ಹೋಗಿ ವೃದ್ಧ ದಂಪತಿಯ ಮನೆಗೆ ತೆರಳಿದರು. ಹೊಸ ಸುರಕ್ಷಿತ ಸೇತುವೆ ನಿರ್ಮಿಸಿಕೊಡುವ ಭರವಸೆ ನೀಡಿದರು.</p>.<h2>ಶೋಚನೀಯ ಪರಿಸ್ಥಿತಿ:</h2><p> ‘ವಸಂತಿ, ಭೋಜ ಸಾಲ್ಯಾನ್ ದಂಪತಿಯ ಪರಿಸ್ಥಿತಿ ನಿಜಕ್ಕೂ ಶೋಚನೀಯ. ನಾನೂ ಈ ಹಲಗೆಯ ಮೇಲೆ ನಡೆದುಬಂದೆ, ನಿಜಕ್ಕೂ ಭಯವಾಯಿತು. ಕಾಲಿಟ್ಟರೆ ಅಲ್ಲಾಡುವ ಒಂದು ಹೆಜ್ಜೆ ಊರುವಷ್ಟು ಮಾತ್ರವೇ ಅಗಲವಿರುವ ಶಿಥಿಲಗೊಂಡ ಮರದ ಹಲಗೆಯ ಮೇಲೆ ನಡೆದುಕೊಂಡು ಬಂದು ಹೊಳೆ ದಾಟಿ ತಮ್ಮ ದಿನ ನಿತ್ಯದ ಅಗತ್ಯ ಪೂರೈಸಿಕೊಳ್ಳಬೇಕಾದ ಪರಿಸ್ಥಿತಿ ಈ ವೃದ್ಧ ದಂಪತಿಯದ್ದು’ ಎಂದು ತಹಶೀಲ್ದಾರ್ ಪ್ರತಿಭಾ ಆರ್. ಹೇಳಿದರು.</p>.<p>‘ಮಳೆಗಾಲದಲ್ಲಿ ನೆರೆ ಆವರಿಸುತ್ತದೆ. ಪಕ್ಕದಲ್ಲೇ ಇರುವ ಇನ್ನೊಂದು ಮನೆಯವರು ಈ ಕಷ್ಟ ಸಹಿಸಲಾಗದೆ ಈಗಾಗಲೇ ಮನೆ ತೊರೆದು ಬೇರೆ ಕಡೆ ಹೋಗಿದಾರೆ. ಆದರೆ ಈ ದಂಪತಿಗೆ ಇರುವುದೊಂದೇ ಸೂರು. ಹೊಳೆಗೆ ಸೇತುವೆ ನಿರ್ಮಿಸಿಕೊಡಲು ಅವರು ಮನವಿ ಮಾಡಿಕೊಂಡಿದ್ದಾರೆ. ಸೇತುವೆ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಸಂಬಂಧಪಟ್ಟ ಇಲಾಖೆ ಮತ್ತು ಯಾರಾದರೂ ದಾನಿಗಳ ಸಹಕಾರದಿಂದ ಇದನ್ನು ಸಾಧ್ಯವಾಗಿಸಲು ಪ್ರಯತ್ನಿಸುತ್ತೇನೆ’ ಎಂದು ಅವರು ಹೇಳಿದರು.</p>.<h2>ಗ್ರಾಮ ಪಂಚಾಯಯಿಯ ಸಹಕಾರ: </h2><h2></h2><p>ಫಲಿಮಾರು ಗ್ರಾಮ ಪಂಚಾಯತಿಯ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಸದಸ್ಯರಾದ ಜಯಂತಿ, ಸತೀಶ್ ದೇವಾಡಿಗ, ಯೋಗಾನಂದ ಅವರು ವೃದ್ಧ ದಂಪತಿ ಮನೆಗೆ ರಸ್ತೆ ನಿರ್ಮಿಸಿಕೊಡಲು ಸಹಕರಿಸುವುದಾಗಿ ತಿಳಿಸಿದ್ದಾರೆ.</p>.<h2>ಗಮನಕ್ಕೆ ತಂದ ಇಸ್ಮಾಯಿಲ್: </h2><h2></h2><p>ಇಂತಹ ಪರಿಸ್ಥಿತಿಯ ಬಗ್ಗೆ ತಹಶೀಲ್ದಾರ್ ಅವರ ಗಮನ ಸೆಳೆದದ್ದು ಪಲಿಮಾರು ಗ್ರಾಮ ಒನ್ ನಡೆಸುತ್ತಿರುವ ಇಸ್ಮಾಯಿಲ್ ಫಲಿಮಾರು. ದಂಪತಿಯ ಕಷ್ಟವನ್ನು ತಹಶೀಲ್ದಾರ್ ಅವರ ಗಮನಕ್ಕೆ ತಂದು ಇಲ್ಲಿಗೆ ಬರುವಂತೆ ಮಾಡಿರುತ್ತಾರೆ. ಸೇತುವೆ ನಿರ್ಮಿಸಿಕೊಡಲು ತಾವೂ ಸಹಕರಿಸುವುದಾಗಿ ತಿಳಿಸಿದ್ದಾರೆ.</p>.<div><blockquote>ಕಷ್ಟದಲ್ಲಿ ಇರುವ ನಮ್ಮ ಮೊರೆ ತಹಶೀಲ್ದಾರ್ ಅವರಿಗೆ ಮುಟ್ಟಿದೆ. ಅವರು ಇಲ್ಲಿಗೆ ಬಂದು ನಮ್ಮ ಸಮಸ್ಯೆ ಆಲಿಸಿದ್ದಾರೆ. ಸಮಸ್ಯೆ ಪರಿಹರಿಸುವ ಭರವಸೆಯನ್ನೂ ನೀಡಿದ್ದಾರೆ</blockquote><span class="attribution">ವಸಂತಿ ಅವರಾಲುಮಟ್ಟು ಗ್ರಾಮದ ನಿವಾಸಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>