ಉಡುಪಿ: ವಾರಸುದಾರರು ಪತ್ತೆಯಾಗದ ನಾಲ್ಕು ಅನಾಥ ಶವಗಳ ಅಂತ್ಯ ಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ನೆರವೇರಿಸಿದರು.
ಅನಾರೋಗ್ಯದಿಂದ ಈಚೆಗೆ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ನಾಲ್ವರು ವ್ಯಕ್ತಿಗಳು ಮೃತಪಟ್ಟಿದ್ದರು. ಶವಗಳನ್ನು ವಾರಸುದಾರರ ಬರುವಿಕೆಗಾಗಿ ಶವಾಗಾರದಲ್ಲಿ ಇಡಲಾಗಿತ್ತು. ಕಾಯುವಿಕೆ ಕಾಲಮಿತಿ ಕಳೆದರೂ ಯಾರೂ ಬಾರದಿರುವುದರಿಂದ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ನನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಮುಂದೆ ನಿಂತುಅಂತ್ಯಸಂಸ್ಕಾರ ನಡೆಸಿದರು.
ನಗರ ಪೊಲೀಸ್ ಠಾಣೆಯ ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ, ಸಮಾಜಸೇವಕ ವಿಶುಶೆಟ್ಟಿ ಅಂಬಲಪಾಡಿ, ಗಣೇಶ್, ಸುಮಿತ್ರಾ ರಾವ್ ಅಂತ್ಯಕ್ರಿಯೆಗೆ ನೆರವಾದರು.