ಕರಾವಳಿ ಭಾಗಕ್ಕೆ ಸಂಬಂಧಿಸಿದ ಕಥೆಯಾಗಿರುವುದರಿಂದ ಬಹುತೇಕ ಈ ಭಾಗದಲ್ಲೇ ಚಿತ್ರೀಕರಣ ಆಗುವ ಸಾಧ್ಯತೆಗಳಿವೆ. ಚಿತ್ರದ ಕಲಾವಿದರ ಆಯ್ಕೆ ನಡೆಯುತ್ತಿದೆ. ಕನ್ನಡಿಗರೇ ಕಾಂತಾರವನ್ನು ದೊಡ್ಡಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದರಿಂದ, ಕನ್ನಡದ ಕಲಾವಿದರಿಗೆ ಪ್ರಥಮ ಆದ್ಯತೆ. ಹಿಂದಿನಂತೆ ಸ್ಥಳೀಯರ ಜೊತೆ, ನಾಡಿನ ಇತರ ಭಾಗದ ಹೊಸ ಪ್ರತಿಭೆಗಳನ್ನು ಪರಿಗಣಿಸುವ ಯೋಚನೆ ಇದೆ. ಹೊಂಬಾಳೆ ಸಂಸ್ಥೆ, ವಿಜಯ್ ಕಿರಗಂದೂರು ಅವರ ಕಾರಣದಿಂದ ಕಾಂತಾರ ಸಿನಿಮಾ ದೊಡ್ಡಮಟ್ಟಕ್ಕೆ ಹೋಗಿದೆ. ಬಹುತೇಕ ಕಾಂತಾರ ಚಿತ್ರದ ತಾಂತ್ರಿಕ ತಂಡವೇ ಮುಂದುವರಿಯಲಿದೆ ಎಂದು ತಿಳಿಸಿದರು.