<p><strong>ಕಾರ್ಕಳ:</strong> ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನೆಯನ್ನು ಹೆಚ್ಚಿಸುವಲ್ಲಿ ಮೆಷಿನ್ ಲರ್ನಿಂಗ್ನ ಪರಿವರ್ತಿತ ಪಾತ್ರ ಮಹತ್ವದ್ದು ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಡಾ.ಗೋಪಾಲ್ ಮುಗೇರಾಯ ತಿಳಿಸಿದರು.</p>.<p>ತಾಲ್ಲೂಕಿನ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ನಡೆದ ಆರೋಗ್ಯ ರಕ್ಷಣೆಯಲ್ಲಿ ಮೆಷಿನ್ ಲರ್ನಿಂಗ್ ತಂತ್ರಗಳ ಅನ್ವಯ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಕ್ಲಿನಿಕಲ್ ಡಯಾಗ್ನೋಸ್ಟಿಕ್ಸ್, ಅಂತರಶಿಸ್ತೀಯ ನಾವೀನ್ಯತೆಯನ್ನು ಮುನ್ನಡೆಸಲು ಉದಯೋನ್ಮುಖ ತಂತ್ರಜ್ಞಾನಗಳ ಕಲಿಕೆ ಹಾಗೂ ಸಕ್ರಿಯ ಉಪಯೋಗದಲ್ಲಿ ತೊಡಗಿಸಿಕೊಳ್ಳಲು ಇದು ಅಗತ್ಯವಾಗಿದೆ ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಮಾತನಾಡಿ, ಆರೋಗ್ಯ ರಕ್ಷಣೆಯಲ್ಲಿ ಕೃತಕ ಬುದ್ಧಿಮತ್ತೆ ಚಾಲಿತ ಪರಿಹಾರಗಳಿಗೆ ಹೆಚ್ಚುತ್ತಿರುವ ಬೇಡಿಕೆ ಮತ್ತು ಶಿಕ್ಷಣ ತಜ್ಞರು ಮತ್ತು ವೃತ್ತಿಪರರಿಗೆ ನಿರಂತರ ಕೌಶಲದ ಮಹತ್ವವನ್ನು ಅರಿಯಬೇಕಾಗಿದೆ ಎಂದರು.</p>.<p>ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಅಶ್ವಿನಿ ಬಿ ಸ್ವಾಗತಿಸಿದರು. ಕಾರ್ಯಕ್ರಮದ ಸಹ-ಸಂಯೋಜಕ ರಮೇಶ್ ಜಿ ವಂದಿಸಿದರು. ವಿಭಾಗದ ಸಹಾಯಕ ಪ್ರಾಧ್ಯಾಪಕಿ ತಂಜಿಲಾ ನರ್ಗಿಸ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ:</strong> ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನೆಯನ್ನು ಹೆಚ್ಚಿಸುವಲ್ಲಿ ಮೆಷಿನ್ ಲರ್ನಿಂಗ್ನ ಪರಿವರ್ತಿತ ಪಾತ್ರ ಮಹತ್ವದ್ದು ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಡಾ.ಗೋಪಾಲ್ ಮುಗೇರಾಯ ತಿಳಿಸಿದರು.</p>.<p>ತಾಲ್ಲೂಕಿನ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ನಡೆದ ಆರೋಗ್ಯ ರಕ್ಷಣೆಯಲ್ಲಿ ಮೆಷಿನ್ ಲರ್ನಿಂಗ್ ತಂತ್ರಗಳ ಅನ್ವಯ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಕ್ಲಿನಿಕಲ್ ಡಯಾಗ್ನೋಸ್ಟಿಕ್ಸ್, ಅಂತರಶಿಸ್ತೀಯ ನಾವೀನ್ಯತೆಯನ್ನು ಮುನ್ನಡೆಸಲು ಉದಯೋನ್ಮುಖ ತಂತ್ರಜ್ಞಾನಗಳ ಕಲಿಕೆ ಹಾಗೂ ಸಕ್ರಿಯ ಉಪಯೋಗದಲ್ಲಿ ತೊಡಗಿಸಿಕೊಳ್ಳಲು ಇದು ಅಗತ್ಯವಾಗಿದೆ ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಮಾತನಾಡಿ, ಆರೋಗ್ಯ ರಕ್ಷಣೆಯಲ್ಲಿ ಕೃತಕ ಬುದ್ಧಿಮತ್ತೆ ಚಾಲಿತ ಪರಿಹಾರಗಳಿಗೆ ಹೆಚ್ಚುತ್ತಿರುವ ಬೇಡಿಕೆ ಮತ್ತು ಶಿಕ್ಷಣ ತಜ್ಞರು ಮತ್ತು ವೃತ್ತಿಪರರಿಗೆ ನಿರಂತರ ಕೌಶಲದ ಮಹತ್ವವನ್ನು ಅರಿಯಬೇಕಾಗಿದೆ ಎಂದರು.</p>.<p>ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಅಶ್ವಿನಿ ಬಿ ಸ್ವಾಗತಿಸಿದರು. ಕಾರ್ಯಕ್ರಮದ ಸಹ-ಸಂಯೋಜಕ ರಮೇಶ್ ಜಿ ವಂದಿಸಿದರು. ವಿಭಾಗದ ಸಹಾಯಕ ಪ್ರಾಧ್ಯಾಪಕಿ ತಂಜಿಲಾ ನರ್ಗಿಸ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>