ಬೈಂದೂರು: ಇಲ್ಲಿಗೆ ಸಮೀಪದ ತಗ್ಗರ್ಸೆ ಗ್ರಾಮದ ಚಂದಣದ ಸೋಮಲಿಂಗೇಶ್ವರದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ದೇವರಿಗೆ ತೊಡಸಿರುವ ಮಂಗಳಸೂತ್ರ ಸೇರಿದಂತೆ ಚಿನ್ನದ ಆಭರಣವನ್ನು ದೋಚಿದ್ದಾರೆ. ದೇವಳದ ಬಾಗಿಲಿಗೆ ಹಾಕಿದ್ದ ಬೀಗವನ್ನು ಕಬ್ಬಿಣದ ರಾಡ್ನಿಂದ ಮುರಿದು ಒಳ ನುಗ್ಗಿ ಕೃತ್ಯ ಎಸಗಿರುವುದು ಕಂಡುಬಂದಿದೆ. ಸ್ಥಳಕ್ಕೆ ಬೈಂದೂರು ಠಾಣೆಯ ಪಿಎಸ್ಐ ಪವನ್ ನಾಯಕ್ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.