ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಭಾಗವಹಿಸಲು ಶುಕ್ರವಾರ ಉಡುಪಿಗೆ ಬಂದಿದ್ದ ಸಂದರ್ಭ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಹಳ ಜಟಿಲ ವಿಚಾರವಾಗಿದ್ದು, ವರಿಷ್ಠರು ಹಾಗೂ ಮುಖ್ಯಮಂತ್ರಿ ಸಮಾಲೋಚಿಸಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ. ಯೋಗೀಶ್ವರ್ಗೆ ಹಿಂದೆ ಜವಾಬ್ದಾರಿ ಹೊತ್ತು ಕಾರ್ಯ ನಿರ್ವಹಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬದು ವೈಯಕ್ತಿಕ ಅಭಿಪ್ರಾಯ ಎಂದರು.