ಉಡುಪಿ: ಮಲ್ಪೆ ಬೀಚ್ನಲ್ಲಿ ಈಜುವಾಗ ನೀರಿನ ಸೆಳೆತಕ್ಕೆ ಸಿಲುಕಿ ಅಪಾಯದಲ್ಲಿದ್ದ ಮೂವರು ಪ್ರವಾಸಿಗರನ್ನು ಬುಧವಾರ ಬೀಚ್ನ ಲೈಫ್ ಗಾರ್ಡ್ ರಕ್ಷಣೆ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ತರಿಕೆರೆಯ ಕಿರಣ್, ಶಿವಮೊಗ್ಗ ಜಿಲ್ಲೆಯ ಕಾಶಿಪುರದ ನಿತಿನ್ ಹಾಗೂ ಮಂಜುನಾಥ್ ಪ್ರಾಣಾಪಾಯದಿಂದ ಪಾರಾದವರು. ಶಿವಮೊಗ್ಗದ ಕಾಲೇಜಿನಿಂದ 35 ವಿದ್ಯಾರ್ಥಿಗಳು ಮಲ್ಪೆ ಬೀಚ್ಗೆ ಪ್ರವಾಸಕ್ಕೆ ಬಂದಿದ್ದ ಸಂದರ್ಭ ಘಟನೆ ಸಂಭವಿಸಿದೆ.
ಸಾಮಾನ್ಯವಾಗಿ ಮಳೆಗಾಲದಲ್ಲಿ ಸಮುದ್ರದ ಅಲೆಗಳ ಉಬ್ಬರ ಹೆಚ್ಚಾಗಿರುತ್ತದೆ. ಇದರ ಅರಿವಿರದ ಪ್ರವಾಸಿಗರು ನೀರಿನ ಸೆಳೆತಕ್ಕೆ ಸಿಕ್ಕು ಅಪಾಯಕ್ಕೆ ಸಿಲುಕುತ್ತಿದ್ದಾರೆ.ಈಬಗ್ಗೆಜಾಗೃತಿಫಲಕಗಳಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.