<p><strong>ಉಡುಪಿ: </strong>ಬೆಳಿಗ್ಗೆ ನಗರದಲ್ಲಿ ನೆತ್ತಿಸುಡುವಷ್ಟು ಬಿಸಿಲಿತ್ತು. ಬಿಸಿಲಿಲ ದಗೆಗೆ ಜನರು ಹೈರಾಣಾಗಿದ್ದರು. ಮಧ್ಯಾಹ್ನ 2ರ ಸುಮಾರಿಗೆ ಸಂಪೂರ್ಣವಾಗಿ ವಾತಾವರಣವೇ ಬದಲಾಯ್ತು. ಇದ್ದಕ್ಕಿದ್ದಂತೆ ದಟ್ಟಮೋಡ ಆವರಿಸಿ ಗುಡುಗು ಸಿಡಿಲಿನ ಜೋರು ಮಳೆ ಸುರಿಯಿತು.</p>.<p>ಕೆಲವು ದಿನಗಳಿಂದ ಬಿಡುವುಕೊಟ್ಟಿದ್ದ ವರುಣ ಮಂಗಳವಾರ ಆರ್ಭಟಿಸಿದ. ಮಧ್ಯಾಹ್ನ ಆರಂಭವಾದ ಮಳೆ ಸಂಜೆವರೆಗೂ ಎಡೆಬಿಡದೆ ಸುರಿಯಿತು. ಮಳೆಯ ರಭಸಕ್ಕೆ ಕೆಲವೇ ಕ್ಷಣಗಳಲ್ಲಿ ರಸ್ತೆಗಳೆಲ್ಲ ಕೆರೆಗಳಂತಾದವು. ಗುಡುಗು ಸಿಡಿಲಿನ ಆರ್ಭಟ ಹಾಗೂ ಗಾಳಿಯ ಅಬ್ಬರವೂ ಹೆಚ್ಚಾಗಿತ್ತು.</p>.<p>ಅನಿರೀಕ್ಷಿತವಾಗಿ ಸುರಿದ ಮಳೆ ಕೃಷಿಕರಿಗೆ ಕೊಂಚ ನೆಮ್ಮದಿ ತಂದಿದೆ. ಬೆಳೆದುನಿಂತಿದ್ದ ಪೈರು ನೀರಿಲ್ಲದೆ ಒಣಗುತ್ತಿತ್ತು. ಅಡಿಕೆ, ತೆಂಗು ಸೇರಿದಂತೆ ತೋಟಗಾರಿಕಾ ಬೆಳೆಗಳು ಸೊರಗಿದ್ದವು. ಈಗ ಸುರಿದ ಮಳೆಯಿಂದಾಗಿ ಬೆಳೆಗಾರರು ಸ್ವಲ್ಪ ನಿರಾಳರಾಗಿದ್ದಾರೆ.</p>.<p>ಕಳೆದ ಕೆಲವು ದಿನಗಳಿಂದ ಬಿಸಿಲಿನ ದಗೆ ಹೆಚ್ಚಾಗಿತ್ತು. ದಿಢೀರ್ ಮಳೆಗೆ ವಾತಾವರಣ ತಂಪಾಗಿದೆ. ಈ ಬಾರಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಬಿದ್ದಿದ್ದರೂ ನದಿಗಳು ಮಾತ್ರ ಬತ್ತುವ ಹಂತ ತಲುಪಿದ್ದವು. ಒಳಹರಿವು ನಿಂತುಹೋಗಿತ್ತು.</p>.<p>ಜತೆಗೆ ಮಳೆಗಾಲದಲ್ಲೇ ಬಾವಿಗಳಲ್ಲಿನ ಅಂತರ್ಜಲ ಪ್ರಮಾಣ ಕುಸಿದಿತ್ತು. ಇದರಿಂದ ಅವಧಿಗೂ ಮುನ್ನವೇ ನೀರಿನ ಸಮಸ್ಯೆ ತಲೆದೋರುವ ಆತಂಕ ಎದುರಾಗಿತ್ತು. ಈಗ ಸುರಿದ ಮಳೆಯಿಂದಾಗಿ ಜೀವಸೆಲೆ ಬಂದಂತಾಗಿದೆ. ನೀರಿನ ಸಮಸ್ಯೆ ತಾತ್ಕಾಲಿಕವಾಗಿ ಶಮನಗೊಂಡಂತಾಗಿದೆ.</p>.<p>ಮೊತ್ತೊಂದೆಡೆ ಅರೇಬಿಯನ್ ಸಮುದ್ರದಲ್ಲಿ ಲುಬನ್ ಚಂಡಮಾರತು ಕಾಣಿಸಿಕೊಂಡಿದ್ದು, ಕರಾವಳಿಯ ಮೇಲೆ ಪ್ರಭಾವ ಬೀರಲಿದೆ. ಒಂದೆರಡು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p>ಸಮುದ್ರದಲ್ಲಿ ಭಾರಿ ಅಲೆಗಳು ಏಳಲಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದೆ. ಜತೆಗೆ, ಮೀನುಗಾರಿಕೆಗೆ ತೆರಳಿರುವ ಮೀನುಗಾರರು ಕಡಲಿಗೆ ವಾಪಸ್ ಬರುವಂತೆ ಸೂಚನೆ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸೂಚನೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಬೆಳಿಗ್ಗೆ ನಗರದಲ್ಲಿ ನೆತ್ತಿಸುಡುವಷ್ಟು ಬಿಸಿಲಿತ್ತು. ಬಿಸಿಲಿಲ ದಗೆಗೆ ಜನರು ಹೈರಾಣಾಗಿದ್ದರು. ಮಧ್ಯಾಹ್ನ 2ರ ಸುಮಾರಿಗೆ ಸಂಪೂರ್ಣವಾಗಿ ವಾತಾವರಣವೇ ಬದಲಾಯ್ತು. ಇದ್ದಕ್ಕಿದ್ದಂತೆ ದಟ್ಟಮೋಡ ಆವರಿಸಿ ಗುಡುಗು ಸಿಡಿಲಿನ ಜೋರು ಮಳೆ ಸುರಿಯಿತು.</p>.<p>ಕೆಲವು ದಿನಗಳಿಂದ ಬಿಡುವುಕೊಟ್ಟಿದ್ದ ವರುಣ ಮಂಗಳವಾರ ಆರ್ಭಟಿಸಿದ. ಮಧ್ಯಾಹ್ನ ಆರಂಭವಾದ ಮಳೆ ಸಂಜೆವರೆಗೂ ಎಡೆಬಿಡದೆ ಸುರಿಯಿತು. ಮಳೆಯ ರಭಸಕ್ಕೆ ಕೆಲವೇ ಕ್ಷಣಗಳಲ್ಲಿ ರಸ್ತೆಗಳೆಲ್ಲ ಕೆರೆಗಳಂತಾದವು. ಗುಡುಗು ಸಿಡಿಲಿನ ಆರ್ಭಟ ಹಾಗೂ ಗಾಳಿಯ ಅಬ್ಬರವೂ ಹೆಚ್ಚಾಗಿತ್ತು.</p>.<p>ಅನಿರೀಕ್ಷಿತವಾಗಿ ಸುರಿದ ಮಳೆ ಕೃಷಿಕರಿಗೆ ಕೊಂಚ ನೆಮ್ಮದಿ ತಂದಿದೆ. ಬೆಳೆದುನಿಂತಿದ್ದ ಪೈರು ನೀರಿಲ್ಲದೆ ಒಣಗುತ್ತಿತ್ತು. ಅಡಿಕೆ, ತೆಂಗು ಸೇರಿದಂತೆ ತೋಟಗಾರಿಕಾ ಬೆಳೆಗಳು ಸೊರಗಿದ್ದವು. ಈಗ ಸುರಿದ ಮಳೆಯಿಂದಾಗಿ ಬೆಳೆಗಾರರು ಸ್ವಲ್ಪ ನಿರಾಳರಾಗಿದ್ದಾರೆ.</p>.<p>ಕಳೆದ ಕೆಲವು ದಿನಗಳಿಂದ ಬಿಸಿಲಿನ ದಗೆ ಹೆಚ್ಚಾಗಿತ್ತು. ದಿಢೀರ್ ಮಳೆಗೆ ವಾತಾವರಣ ತಂಪಾಗಿದೆ. ಈ ಬಾರಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಬಿದ್ದಿದ್ದರೂ ನದಿಗಳು ಮಾತ್ರ ಬತ್ತುವ ಹಂತ ತಲುಪಿದ್ದವು. ಒಳಹರಿವು ನಿಂತುಹೋಗಿತ್ತು.</p>.<p>ಜತೆಗೆ ಮಳೆಗಾಲದಲ್ಲೇ ಬಾವಿಗಳಲ್ಲಿನ ಅಂತರ್ಜಲ ಪ್ರಮಾಣ ಕುಸಿದಿತ್ತು. ಇದರಿಂದ ಅವಧಿಗೂ ಮುನ್ನವೇ ನೀರಿನ ಸಮಸ್ಯೆ ತಲೆದೋರುವ ಆತಂಕ ಎದುರಾಗಿತ್ತು. ಈಗ ಸುರಿದ ಮಳೆಯಿಂದಾಗಿ ಜೀವಸೆಲೆ ಬಂದಂತಾಗಿದೆ. ನೀರಿನ ಸಮಸ್ಯೆ ತಾತ್ಕಾಲಿಕವಾಗಿ ಶಮನಗೊಂಡಂತಾಗಿದೆ.</p>.<p>ಮೊತ್ತೊಂದೆಡೆ ಅರೇಬಿಯನ್ ಸಮುದ್ರದಲ್ಲಿ ಲುಬನ್ ಚಂಡಮಾರತು ಕಾಣಿಸಿಕೊಂಡಿದ್ದು, ಕರಾವಳಿಯ ಮೇಲೆ ಪ್ರಭಾವ ಬೀರಲಿದೆ. ಒಂದೆರಡು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p>ಸಮುದ್ರದಲ್ಲಿ ಭಾರಿ ಅಲೆಗಳು ಏಳಲಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದೆ. ಜತೆಗೆ, ಮೀನುಗಾರಿಕೆಗೆ ತೆರಳಿರುವ ಮೀನುಗಾರರು ಕಡಲಿಗೆ ವಾಪಸ್ ಬರುವಂತೆ ಸೂಚನೆ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸೂಚನೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>