<p><strong>ಉಡುಪಿ</strong>: ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಉಡುಪಿಯ ತಾಲ್ಲೂಕು ಕಚೇರಿಗೆ ಶುಕ್ರವಾರ ದಿಢೀರ್ ಭೇಟಿ ನೀಡಿದ್ದ ವೇಳೆ ಸಿಬ್ಬಂದಿ ಚೀಟಿ ವ್ಯವಹಾರ ನಡೆಸುತ್ತಿದ್ದ ಪುಸ್ತಕ ಪತ್ತೆಯಾಯಿತು.</p>.<p>ದಾಖಲೆಗಳ ಪರಿಶೀಲನೆ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಬ್ಬಂದಿ ಚೀಟಿ ವ್ಯವಹಾರದ ಲೆಕ್ಕ ಬರೆದಿಟಿದ್ದ ಪುಸ್ತಕ ಕಣ್ಣಿಗೆ ಬಿತ್ತು. ಪರಿಶೀಲಿಸಿದಾಗ ಅದರಲ್ಲಿ ಉಪ ತಹಶೀಲ್ದಾರ್ ಐರಿನ್ ನೊರೋನ್ಹಾ ಸೇರಿದಂತೆ ವಿವಿಧ ಸಿಬ್ಬಂದಿ ಹೆಸರು ಮತ್ತು ಅವರು ಪಾವತಿ ಮಾಡಿರುವ ಮೊತ್ತವನ್ನು ಬರೆಯಲಾಗಿತ್ತು.</p>.<p>ಕಚೇರಿಯಲ್ಲಿ ಚೀಟಿ ವ್ಯವಹಾರ ನಡೆಸಲು ಅನುಮತಿ ಪಡೆದಿದ್ದೀರಾ ಎಂದು ತಹಶೀಲ್ದಾರ್ ಗುರುರಾಜ್ ಅವರನ್ನು ತರಾಟೆಗೆ ತೆಗೆದುಕೊಂಡ ಉಪ ಲೋಕಾಯುಕ್ತರು, ಸರ್ಕಾರಿ ಕಚೇರಿಯಲ್ಲಿ ಈ ರೀತಿಯ ವ್ಯವಹಾರ ನಡೆಸುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದರು.</p>.<p>ಬ್ಯಾಗ್ನೊಳಗೆ ದಾಖಲೆ: ಉಪ ನೋಂದಣಾಧಿಕಾರಿ ಮತ್ತು ವಿವಾಹ ನೋಂದಣಾಧಿಕಾರಿ ವಿಭಾಗಕ್ಕೆ ತೆರಳಿ ಉಪ ಲೋಕಾಯುಕ್ತರು ಪರಿಶೀಲಿಸುತ್ತಿದ್ದ ವೇಳೆ ಹೊರಗುತ್ತಿಗೆಯಡಿ ನೇಮಕಗೊಂಡಿದ್ದ ಡಾಟಾ ಎಂಟ್ರಿ ಸಿಬ್ಬಂದಿಯೊಬ್ಬರ ಬ್ಯಾಗ್ನಲ್ಲಿ ಸರ್ಕಾರಿ ದಾಖಲೆಗಳು ಪತ್ತೆಯಾದವು.</p>.<p>ಜನನ ಪ್ರಮಾಣಪತ್ರ, ವಿವಾಹ ನೋಂದಣಿ ಪ್ರಮಾಣಪತ್ರ ಸೇರಿ 30ರಷ್ಟು ವಿವಿಧ ದಾಖಲೆಗಳು ಸಿಬ್ಬಂದಿ ಸುನಿಲ್ ಅವರ ಬ್ಯಾಗ್ನಲ್ಲಿ ಪತ್ತೆಯಾದವು. ಈ ಕುರಿತು ಪ್ರಶ್ನಿಸಿದಾಗ ಪರಿಶೀಲಿಸಲು ಮನೆಗೆ ಒಯ್ಯಲು ಬ್ಯಾಗ್ನಲ್ಲಿ ಇಟ್ಟಿರುವುದಾಗಿ ತಿಳಿಸಿದರು.</p>.<p>ಈ ಸಂಬಂಧ ಉಪ ನೋಂದಣಾಧಿಕಾರಿ ಅವರನ್ನು ತರಾಟೆಗೆ ತೆಗೆದುಕೊಂಡ ಉಪ ಲೋಕಾಯುಕ್ತ ಅವರು, ಈ ಕುರಿತು ಕ್ರಿಮಿನಲ್ ಪ್ರಕರಣವನ್ನು ದಾಖಲಿಸುವಂತೆ ಸೂಚಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಉಡುಪಿಯ ತಾಲ್ಲೂಕು ಕಚೇರಿಗೆ ಶುಕ್ರವಾರ ದಿಢೀರ್ ಭೇಟಿ ನೀಡಿದ್ದ ವೇಳೆ ಸಿಬ್ಬಂದಿ ಚೀಟಿ ವ್ಯವಹಾರ ನಡೆಸುತ್ತಿದ್ದ ಪುಸ್ತಕ ಪತ್ತೆಯಾಯಿತು.</p>.<p>ದಾಖಲೆಗಳ ಪರಿಶೀಲನೆ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಬ್ಬಂದಿ ಚೀಟಿ ವ್ಯವಹಾರದ ಲೆಕ್ಕ ಬರೆದಿಟಿದ್ದ ಪುಸ್ತಕ ಕಣ್ಣಿಗೆ ಬಿತ್ತು. ಪರಿಶೀಲಿಸಿದಾಗ ಅದರಲ್ಲಿ ಉಪ ತಹಶೀಲ್ದಾರ್ ಐರಿನ್ ನೊರೋನ್ಹಾ ಸೇರಿದಂತೆ ವಿವಿಧ ಸಿಬ್ಬಂದಿ ಹೆಸರು ಮತ್ತು ಅವರು ಪಾವತಿ ಮಾಡಿರುವ ಮೊತ್ತವನ್ನು ಬರೆಯಲಾಗಿತ್ತು.</p>.<p>ಕಚೇರಿಯಲ್ಲಿ ಚೀಟಿ ವ್ಯವಹಾರ ನಡೆಸಲು ಅನುಮತಿ ಪಡೆದಿದ್ದೀರಾ ಎಂದು ತಹಶೀಲ್ದಾರ್ ಗುರುರಾಜ್ ಅವರನ್ನು ತರಾಟೆಗೆ ತೆಗೆದುಕೊಂಡ ಉಪ ಲೋಕಾಯುಕ್ತರು, ಸರ್ಕಾರಿ ಕಚೇರಿಯಲ್ಲಿ ಈ ರೀತಿಯ ವ್ಯವಹಾರ ನಡೆಸುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದರು.</p>.<p>ಬ್ಯಾಗ್ನೊಳಗೆ ದಾಖಲೆ: ಉಪ ನೋಂದಣಾಧಿಕಾರಿ ಮತ್ತು ವಿವಾಹ ನೋಂದಣಾಧಿಕಾರಿ ವಿಭಾಗಕ್ಕೆ ತೆರಳಿ ಉಪ ಲೋಕಾಯುಕ್ತರು ಪರಿಶೀಲಿಸುತ್ತಿದ್ದ ವೇಳೆ ಹೊರಗುತ್ತಿಗೆಯಡಿ ನೇಮಕಗೊಂಡಿದ್ದ ಡಾಟಾ ಎಂಟ್ರಿ ಸಿಬ್ಬಂದಿಯೊಬ್ಬರ ಬ್ಯಾಗ್ನಲ್ಲಿ ಸರ್ಕಾರಿ ದಾಖಲೆಗಳು ಪತ್ತೆಯಾದವು.</p>.<p>ಜನನ ಪ್ರಮಾಣಪತ್ರ, ವಿವಾಹ ನೋಂದಣಿ ಪ್ರಮಾಣಪತ್ರ ಸೇರಿ 30ರಷ್ಟು ವಿವಿಧ ದಾಖಲೆಗಳು ಸಿಬ್ಬಂದಿ ಸುನಿಲ್ ಅವರ ಬ್ಯಾಗ್ನಲ್ಲಿ ಪತ್ತೆಯಾದವು. ಈ ಕುರಿತು ಪ್ರಶ್ನಿಸಿದಾಗ ಪರಿಶೀಲಿಸಲು ಮನೆಗೆ ಒಯ್ಯಲು ಬ್ಯಾಗ್ನಲ್ಲಿ ಇಟ್ಟಿರುವುದಾಗಿ ತಿಳಿಸಿದರು.</p>.<p>ಈ ಸಂಬಂಧ ಉಪ ನೋಂದಣಾಧಿಕಾರಿ ಅವರನ್ನು ತರಾಟೆಗೆ ತೆಗೆದುಕೊಂಡ ಉಪ ಲೋಕಾಯುಕ್ತ ಅವರು, ಈ ಕುರಿತು ಕ್ರಿಮಿನಲ್ ಪ್ರಕರಣವನ್ನು ದಾಖಲಿಸುವಂತೆ ಸೂಚಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>